ಅಕ್ರಮ ತಂಬಾಕು ಉತ್ಪನ್ನ ಮಾರಾಟ ಮಳಿಗೆ ಮೇಲೆ ದಾಳಿ
Team Udayavani, Sep 21, 2017, 11:09 AM IST
ದೇವನಹಳ್ಳಿ: ಪಟ್ಟಣದ ಹಳೇ ಬಸ್ ನಿಲ್ದಾಣ ಮತ್ತು ಇತರ ಕಡೆ ಪೊಲೀಸ್ ಇಲಾಖೆ ಮತ್ತು ತಂಬಾಕು ಮಾರಾಟ ನಿಯಂತ್ರಣಾಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ತಂಬಾಕು ಉತ್ಪನ್ನ ವಶಪಡಿಸಿಕೊಂಡು ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿ ದಂಡ ವಿಧಿಸಿದರು.
ದೇವನಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ ತಂಬಾಕು ನಿಯಂತ್ರಣದ ಉನ್ನತ ಮಟ್ಟದ ಸಮಿತಿ ವತಿಯಿಂದ ನಡೆದ ಕಾರ್ಯಾಚರಣೆಯಲ್ಲಿ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ವಿಜಯಪುರ ಸರ್ಕಲ್,
ರಾಣಿ ಸರ್ಕಲ್, ಹಳೇ ಬಸ್ ನಿಲ್ದಾಣ, ಆರ್ಟಿಓ ಸುತ್ತಮುತ್ತಲ ಪ್ರದೇಶ, ಹೆದ್ದಾರಿ ಅಕ್ಕಪಕ್ಕದ ಪ್ರದೇಶ ಸೇರಿದಂತೆ ಇತರ ಪ್ರದೇಶಗಳಲ್ಲಿ ದಾಳಿ ನಡೆಸಿದರು. ಹೋಟೆಲ್, ಬಸ್ ನಿಲ್ದಾಣಗಳು ತಂಬಾಕು ಮಾರಾಟ ಮಾಡುವ ಅಂಗಡಿ ಮುಂಗಟ್ಟುಗಳು, ಶಾಲಾ-ಕಾಲೇಜುಗಳ ಸುತ್ತಮುತ್ತಲಿನ ಪ್ರದೇಶ ಬಾರ್ ಮತ್ತು ರೆಸ್ಟೋರೆಂಟ್ಗಳು ಸೇರಿದಂತೆ ವಿವಿಧೆಡೆ ದಾಳಿ ನಡೆಸಿದ ಅಧಿಕಾರಿಗಳು ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ, ಶಾಲಾ-ಕಾಲೇಜುಗಳ ಬಳಿ
ತಂಬಾಕು ಉತ್ಪನ್ನಗಳ ಮಾರಾಟ, ಅಕ್ರಮ ತಂಬಾಕು ಉತ್ಪನ್ನಗಳ ಮಾರಾಟ, ತಂಬಾಕು ಉತ್ಪನ್ನಗಳ ಅನಧಿಕೃತ ಜಾಹೀರಾತುಗಳ ಪ್ರದರ್ಶನ ಸೇರಿದಂತೆ ಇನ್ನಿತರ ಉಲ್ಲಂಘನೆ ಮಾಡುತ್ತಿದ್ದವರ ವಿರುದ್ಧ ಕ್ರಮ ಜರುಗಿಸಿದ್ದಾರೆ.
ಪಟ್ಟಣದಲ್ಲಿ 110 ಪ್ರಕರಣ ದಾಖಲು: ಕಾರ್ಯಾಚರಣೆ ನೇತೃತ್ವ ವಹಿಸಿದ್ದ ಸಹಾಯಕ ಪೊಲೀಸ್ ಕಮೀಷನರ್ ಜಿ.ಗುರುಸ್ವಾಮಿ ಮಾತನಾಡಿ, ಪಟ್ಟಣದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ವಿಶೇಷ ಕಾರ್ಯಾಚರಣೆ ಅಡಿ 110
ಪ್ರಕರಣ ದಾಖಲು ಮಾಡಲಾಗಿದೆ. ಸ್ಥಳದಲ್ಲೇ 20, 900 ರೂ. ದಂಡ ವಸೂಲಿ ಮಾಡಲಾಗಿದೆ. ತಂಬಾಕು ದುಷ್ಪರಿಣಾಮದ ಕುರಿತು ಹಾಗೂ ಕೋಟಾ ಕಾಯ್ದೆ ಕುರಿತು ಈಗಾಗಲೇ ರಾಜ್ಯಾದ್ಯಂತ ಸಾಕಷ್ಟು ಪ್ರಮಾಣದ ಜನಜಾಗೃತಿ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಉಪ ಪೊಲೀಸ್ ಆಯುಕ್ತರ ಆದೇಶದ್ವನಯ ತಂಬಾಕು ನಿಯಂತ್ರಣ ಕಾಯ್ದೆ ಸಮರ್ಪಕ ಅನುಷ್ಠಾನದ ಉದ್ದೇಶದಿಂದ ವಿಭಾಗಾದ್ಯಂತ ಪ್ರತಿ ತಾಣ ಮಟ್ಟದಲ್ಲಿ ವಿಶೇಷ ಕಾರ್ಯಾಚರಣೆ/ದಾಳಿ ನಡೆಸಲಾಗುತ್ತದೆ ಎಂದು ಮಾಹಿತಿ ನೀಡಿದರು.
60 ಸಾವಿರ ರೂ. ದಂಡ: ತಂಬಾಕು ನಿಯಂತ್ರಣ ಯೋಜನೆ ಜಾಗೃತ ದಳ ಸದಸ್ಯ ಜಾನ್ ಕೆನಡಿ ಮಾತನಾಡಿ, ರಾಜ್ಯ ಹೈಕೋರ್ಟ್ ಆದೇಶದಂತೆ ತಂಬಾಕು ಉತ್ಪನ್ನ ಮಾರಾಟ ನಿಯಂತ್ರಣಕ್ಕೆ ಉನ್ನತಮಟ್ಟದ ಜಾಗೃತ ದಳ ನೇಮಕಮಾಡಿ ಮಾರಾಟಕ್ಕೆ ಕಡಿವಾಣ ಹಾಕಲು ಈಗಾಗಲೇ ಸಮಿತಿ ರಚಿಸಿದೆ ಎಂದರು.
ಕಠಿಣ ಕ್ರಮದ ಎಚ್ಚರಿಕೆ: ಪೊಲೀಸ್ ಇನ್ಸ್ ಪೆಕ್ಟರ್ ಶಿವಸ್ವಾಮಿ, ಕಳೆದ ಒಂದು ವಾರದಿಂದ ಈಶಾನ್ಯ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಸುಮಾರು 319 ಪ್ರಕರಣ ದಾಖಲಿಸಿ 60 ಸಾವಿರ ರೂ.ದಂಡ ವಸೂಲಿ ಮಾಡಲಾಗಿದೆ. ದಾಳಿಯು ನಿರಂತರವಾಗಿ ಮುಂದುವರಿಯಲಿದ್ದು, ಕಾಯ್ದೆ ಉಲ್ಲಂ ಸುವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ತಂಬಾಕು ನಿಯಂತ್ರಣ ಯೋಜನಾ ಜಾಗೃತ ದಳದ ಸಮಿತಿ ಸದಸ್ಯರಾದ ಅಮಿತ್ ಕಾರ್ನಿಕ್, ಎನ್.ಜಿ.ಅಚ್ಯುತ, ಪೊಲೀಸ್ ಉಪನಿರೀಕ್ಷಕ ನಂದೀಶ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ