ಲೋಧಾ ಶಿಫಾರಸು ಜಾರಿ ಮಾಡದ ಬಿಸಿಸಿಐಗೆ ಸುಪ್ರೀಂ ಕೋರ್ಟ್‌ ತರಾಟೆ


Team Udayavani, Sep 22, 2017, 9:42 AM IST

22-STATE-18.jpg

ಹೊಸದಿಲ್ಲಿ: ಲೋಧಾ ಶಿಫಾರಸು ಜಾರಿಗೆ ತರಲು ಮೊಂಡು ಹಠ ಮಾಡುತ್ತಿರುವ ಬಿಸಿಸಿಐ (ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ) ಅನ್ನು ಸರ್ವೋತ್ಛ ನ್ಯಾಯಾಲಯ ಗುರುವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.

ಮಾತ್ರವಲ್ಲ, ಬಿಸಿಸಿಐ ಆಡಳಿತಾಧಿಕಾರಿ ಗಳು ಮುಂದಿನ ಮೂರು ವಾರಗಳಲ್ಲಿ ಲೋಧಾ ಶಿಫಾರಸು ಜಾರಿಗೆ ತರುವಲ್ಲಿ ಪ್ರತಿಕ್ರಿಯೆ ನೀಡುವಲ್ಲಿ ವಿಫ‌ಲವಾದರೆ ನ್ಯಾಯಾಂಗ ನಿಂದನೆಯ ಗಂಭೀರ ಪರಿಣಾಮ ಎದುರಿಸಬೇಕಾಗಿ ಬರಬೇಕಾ ಗುತ್ತದೆ ಎಂದು ಖಡಕ್‌ ಎಚ್ಚರಿಕೆ ನೀಡಿದೆ. ಜು.18ರಂದು ನ್ಯಾಯಾಲಯ ಲೋಧಾ ಶಿಫಾರಸು ಅನ್ನುಜಾರಿಗೆ ತನ್ನಿ ಎಂದು ಬಿಸಿಸಿಐಗೆ ಸೂಚಿಸಿತ್ತು. ಆದರೆ ಇದುವರೆಗೆ ಯಾವುದೇ ಕ್ರಮವನ್ನೂ ಬಿಸಿಸಿಐ ತೆಗೆದುಕೊಂಡಿಲ್ಲ. ಇಂದು ನ್ಯಾಯಾಲಯದ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಬಿಸಿಸಿಐಗೆ ಸುಪ್ರೀಂ ತರಾಟೆ 
ಗುರುವಾರ ಸುಪ್ರೀಂ ಕೋರ್ಟ್‌ನ ತ್ರಿ ಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿತು. ಬಿಸಿಸಿಐ ಹಂಗಾಮಿ ಅಧ್ಯಕ್ಷ ಸಿ.ಕೆ.ಖನ್ನಾ, ಹಂಗಾಮಿ ಕಾರ್ಯದರ್ಶಿ ಅಮಿತಾಬ್‌ ಚೌಧರಿ ಹಾಗೂ  ಖಜಾಂಚಿ ಅನಿರುದ್ಧ್ ಚೌಧರಿಯನ್ನು  ಇದೇ ವೇಳೆ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತು. ನೀವು ಲೋಧಾ ಶಿಫಾರಸು ಜಾರಿಗೆ ತರುವಲ್ಲಿ ಅನಗತ್ಯ ವರ್ತನೆ ಪ್ರದರ್ಶಿಸುತ್ತಿದ್ದೀರಿ. ಇಷ್ಟು ದಿನವಾದರೂ ಲೋಧಾ ಶಿಫಾರಸು ಅನ್ನು ಬಿಸಿಸಿಐನಲ್ಲಿ ಏಕೆ ಜಾರಿಗೆ ತರಲಾಗಲಿಲ್ಲ. ನ್ಯಾಯಾಲಯ ನೀಡಿರುವ ಆದೇಶವನ್ನು ನೀವು ಜಾರಿಗೆ ತರಲೇಬೇಕು. ಇದುವರೆಗೆ ನಾವು ಆದೇಶವನ್ನು ನೀಡಿದ್ದೇವೆ ಹೊರತೂ ಬಿಸಿಸಿಐನಲ್ಲಿ ಯಾವ ಬದಲಾವಣೆಯೂ ಆಗಿಲ್ಲ. ಈ ಮೂಲಕ ಸ್ಟಾಕ್‌ ಹೋಲ್ಡರ್, ಬಿಸಿಸಿಐ ಆಡಳಿತಾಧಿಕಾರಿ ನಾವು ಕೆಲವು ವಿಷಯಗಳನ್ನು ಸ್ಪಷ್ಟಪಡಿಸಲು ಬಯಸುತ್ತೇವೆ. ನೀವು ಈ ಕುರಿತಂತೆ ನ್ಯಾಯಾಲಯಕ್ಕೆ ಶೀಘ್ರದಲ್ಲೇ ಪ್ರತಿಕ್ರಿಯೆ ನೀಡಬೇಕು. ನಿಮ್ಮ ಅಭಿಪ್ರಾಯವನ್ನು ತಿಳಿಸಲೇ ಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಗಂಭೀರ ಕ್ರಮವನ್ನು ಎದುರಿಸಿ ಎಂದು ಚಾಟಿ ಬೀಸಿದೆ.

ಶಿಫಾರಸು ಜಾರಿಗೆ ಸಜ್ಜಾಗಿದ್ದೇವೆ 
ಲೋಧಾ ಶಿಫ‌ರಸು ಜಾರಿಗೆ ಸಂಬಂಧಿಸಿ ದಂತೆ ಬಿಸಿಸಿಐ ಕರಡು ಪ್ರತಿ ಸಿದ್ಧಪಡಿಸಿದೆ. ಇನ್ನು ದೊಡ್ಡ ಕೆಲಸವೇನೂ ಉಳಿದಿಲ್ಲ. ಇದಕ್ಕೆ ಸಲಹೆಗಳು ಬರುವುದಷ್ಟೇ ಬಾಕಿ ಇದೆ ಎಂದು ಬಿಸಿಸಿಐ ಪರ ವಕೀಲರು ನ್ಯಾಯಾಲಯಕ್ಕೆ ವರದಿ ನೀಡಿದರು. 

ಇದೇ ವೇಳೆ ಪ್ರತಿಕ್ರಿಯಿಸಿದ ನ್ಯಾಯ ಪೀಠ,  ಸಂವಿಧಾನ ಜಾರಿಗೆ ತರುವ ಕಾರಣ ನೀಡಿ ಬಿಸಿಸಿಐ ಅಧಿಕಾರಿಗಳು  ಸಾಮಾನ್ಯ ಸಭೆಗೆ ಗೈರು ಹಾಜರಾಗುವಂತಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿದೆ. ಅಲ್ಲದೆ ನ್ಯಾಯಾಲಯ ಇದಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆಯನ್ನು ಅ.30ಕ್ಕೆ ಮುಂದೂಡಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.