ಬೆಂಗಳೂರು:ಹಲ್ಲೆಗೆ ಮುಂದಾದ ಕಳ್ಳರಿಬ್ಬರ ಕಾಲಿಗೆ ಪೊಲೀಸ್ ಗುಂಡು
Team Udayavani, Sep 22, 2017, 12:01 PM IST
ಬೆಂಗಳೂರು: ಕಳ್ಳತನಕ್ಕೆ ಯತ್ನಿಸುತ್ತಿದ್ದ ಕಳ್ಳರು ಹಲ್ಲೆಗೆ ಮುಂದಾದಾಗ ಪೊಲೀಸರು ಇಬ್ಬರ ಕಾಲಿಗೆ ಗುಂಡು ಹಾರಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಖಚಿತ ಮಾಹಿತಿಯ ಮೇರಗೆ ವಿದ್ಯಾರಣ್ಯಪುರ ಪೊಲೀಸರು ಇನ್ಸ್ಪೆಕ್ಟರ್ ಪುನೀತ್, ವಿದ್ಯಾರಣ್ಯಪುರ ಎಸ್ಐ ಅಣ್ಣಯ್ಯ ನೇತೃತ್ವದಲ್ಲಿ ಕಾರ್ಯಾಚರಣೆಗಿಳಿದಿದ್ದು ಈ ವೇಳೆ ಮೂವರು ಕಳ್ಳರು ಶೆಟರ್ ಮುರಿದು ಕಳ್ಳತನ ನಡೆಸುತ್ತಿದ್ದರು. ಬಂಧಿಸಲು ಮುಂದಾದಾಗ ಅಣ್ಣಯ್ಯ ಮೇಲೆ ಇರಿಯಲು ಮುಂದಾಗಿದ್ದಾರೆ. ಕೂಡಲೇ ಆತ್ಮರಕ್ಷಣೆಗೆ ಕಳ್ಳರಿಬ್ಬರ ಕಾಲಿಗೆ ಗುರಿಯಾಗಿ ಗುಂಡು ಹಾರಿಸಿದ್ದಾರೆ. ಇನ್ನೋರ್ವನನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ.
ಗುಂಡೇಟು ತಿಂದ ಖದೀಮ ಕಳ್ಳರು ನಾರಾಯಣ ಸ್ವಾಮಿ, ಅಶೋಕ್ ಎನ್ನುವವರಾಗಿದ್ದು ಇನ್ನೋರ್ವ ಬಂಧಿತ ಸುಧಾಕರ ಎಂದು ಪೊಲೀಸರು ತಿಳಿಸಿದ್ದಾರೆ.
ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗಲು ಹೇಳಿದರೂ ಬಗ್ಗದಿದ್ದಾಗ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ಪಶ್ಚಿವ ವಲಯ ಡಿಸಿಪಿ ಶಿವಕುಮಾರ್ ತಿಳಿಸಿದ್ದಾರೆ.
ಮೂವರ ವಿರುದ್ಧ ಉಡುಪಿ ಸೇರಿದಂತೆ ರಾಜ್ಯದ ವಿವಿಧೆಡೆ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ.
ಗಾಯಗೊಂಡಿರುವ ಕಳ್ಳರಿಬ್ಬರಿಗೆ ಯಲಹಂಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್