ಕೇಳ್ರಪ್ಪೋ ಕೇಳಿ, ನಾಳೆಯಿಂದ ಭೂಮಿಯ ಅವಸಾನ ಆರಂಭ?


Team Udayavani, Sep 22, 2017, 1:20 PM IST

EOW.jpg

ವಾಷಿಂಗ್ಟನ್‌: ಭಾರತದಲ್ಲಿ ಎಲ್ಲರೂ ನವರಾತ್ರಿಯ ಸಂಭ್ರಮದಲ್ಲಿದ್ದರೆ, ಅಮೆರಿಕದ ಕ್ರಿಶ್ಚಿಯನ್‌ ಸಂಖ್ಯಾ ರಹಸ್ಯ ಶಾಸ್ತ್ರಜ್ಞರೊಬ್ಬರು ‘ಕೊನೇ ರಾತ್ರಿ’ಯ ಬಗ್ಗೆ ಮಾತನಾಡಿ ಎಲ್ಲರ ಎದೆಬಡಿತವನ್ನೂ ಹೆಚ್ಚಿಸಿದ್ದಾರೆ!

ಹೌದು, ಅವರ ಪ್ರಕಾರ ನಾಳೆಯಿಂದ (ಶನಿವಾರ) ಭೂಮಿಯ ಅವಸಾನ ಆರಂಭ. ಜೆರುಸಲೇಂನ ಆಗಸದಲ್ಲಿ ಶನಿವಾರ ರಾತ್ರಿ ನಕ್ಷತ್ರಪುಂಜವೊಂದು ಕಾಣಿಸಿಕೊಳ್ಳಲಿದ್ದು, ಅದು ಜಗತ್ತಿನ ಅಂತ್ಯದ ಸೂಚಕವಾಗಿರಲಿದೆ ಎಂದು ಸ್ವಘೋಷಿತ ಸಂಶೋಧನಾ ಮತ್ತು ತನಿಖಾ ತಜ್ಞ ಡೇವಿಡ್‌ ಮೀಡ್‌ ಎಂಬವರು ಘೋಷಿಸಿದ್ದಾರೆ. ಅವರ ಹೇಳಿಕೆ ಹೊರಬರುತ್ತಿದ್ದಂತೆಯೇ, ಸಾಮಾಜಿಕ ಜಾಲತಾಣಗಳಲ್ಲಿ ಇದು ವೈರಲ್‌ ಆಗಿದ್ದು, ಶನಿವಾರವೇ ಪ್ರಳಯವಾಗಲಿದೆ ಎಂಬ ವದಂತಿಗಳು ಹಬ್ಬತೊಡಗಿವೆ.

ಡೇವಿಡ್‌ ಹೇಳುವುದೇನು?: ಶನಿವಾರ ಅಂದರೆ ಸೆ.23, 2017ರಂದು ತಾರಾಪುಂಜವೊಂದು ಜೆರುಸಲೇಂನ ಆಗಸದಲ್ಲಿ ಕಾಣಿಸಿಕೊಳ್ಳಲಿದೆ. ತದನಂತರ ಭೂಮಿಗೆ ಗ್ರಹಣ ಹಿಡಿದಂತೆಯೇ ಸರಿ. ಅದರ ಪರಿಣಾಮ, ಅಕ್ಟೋಬರ್‌ ತಿಂಗಳಾಂತ್ಯದಲ್ಲಿ ಇಡೀ ಜಗತ್ತು 7 ವರ್ಷಗಳ ಕ್ಲೇಶಾವಸ್ಥೆಗೆ (ಟ್ರಿಬ್ಯುಲೇಷನ್‌ ಪೀರಿಯಡ್‌) ತಿರುಗಲಿದ್ದು, ಅಂದಿನಿಂದ ಭೂಮಿಯಲ್ಲಿ ಸರಣಿ ದುರಂತಗಳು ಸಂಭವಿಸಿ, ಕೊನೆಗೊಂದು ದಿನ ಇಡೀ ಭೂಮಿಯೇ ಹೇಳಹೆಸರಿಲ್ಲದಂತೆ ನಾಶವಾಗಿ ಹೋಗಲಿದೆ. ನಿಬಿರು ಎಂಬ ಹೆಸರಿನ ಗ್ರಹವೊಂದು (ಇಂಥ ಗ್ರಹವೇ ಇಲ್ಲ ಎಂದು ನಾಸಾ ಸ್ಪಷ್ಟಪಡಿಸಿದೆ) ಭೂಮಿಯತ್ತ ಚಲಿಸುತ್ತಿದೆ. ಈ ವರ್ಷಾಂತ್ಯದ ವೇಳೆಗೆ ನಿಬಿರು ಭೂಮಿಯನ್ನು ದಾಟಿ ಹೋದ ಕ್ಷಣದಿಂದ, ಭೂಕಂಪಗಳು, ಜ್ವಾಲಾಮುಖೀ ಸ್ಫೋಟ, ಸುನಾಮಿಯಂಥ ಪ್ರಾಕೃತಿಕ ವಿಕೋಪಗಳು ಬಂದರೆಗಲಿವೆ. ಅದು ಮಹಾಪ್ರಳಯವಾಗಿ ಪರಿವರ್ತಿತಗೊಂಡು, ಭೂಮಿಯ ಅವಸಾನಕ್ಕೆ ಕಾರಣವಾಗಲಿದೆ ಎನ್ನುವುದು ಡೇವಿಡ್‌ ಮೀಡ್‌ನ‌ ವಾದವಾಗಿದೆ.

ಮಾಧ್ಯಮಗಳ ಮೇಲೆ ಕಿಡಿ
ಈ ಎಲ್ಲ ವಿಚಾರಗಳನ್ನು ಡೇವಿಡ್‌ ತಮ್ಮ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದಾರೆ. ಜತೆಗೆ, ತಮ್ಮ ಭವಿಷ್ಯವಾಣಿಯನ್ನು ಮಾಧ್ಯಮಗಳು ತಿರುಚಿವೆ ಎಂಬ ಆರೋಪವನ್ನೂ ಅವರು ಮಾಡಿದ್ದಾರೆ. ಕೆಲವು ಮಾಧ್ಯಮಗಳು ನನ್ನ ಹೇಳಿಕೆಯನ್ನು ವೈಭವೀಕರಿಸಿ, ಶನಿವಾರವೇ ಪ್ರಳಯವಾಗಲಿದೆ ಎಂದು ಸುಳ್ಳು ಸುದ್ದಿ ಪ್ರಕಟಿಸಿವೆ ಎಂದಿದ್ದಾರೆ ಡೇವಿಡ್‌. ವಿಶೇಷವೆಂದರೆ, ನೀವು ಎಲ್ಲಿಯವರು ಎಂಬ ಮಾಧ್ಯಮದವರ ಪ್ರಶ್ನೆಗೆ ಡೇವಿಡ್‌, ‘ಅತಿದೊಡ್ಡ ವಿಪತ್ತು ವಲಯದ ಹೃದಯಭಾಗದವನು’ ಎಂದು ಇರ್ಮಾ ಚಂಡಮಾರುತವನ್ನು ಪ್ರಸ್ತಾಪಿಸುತ್ತಾ ಹೇಳಿದ್ದಾರೆ.

ಟಾಪ್ ನ್ಯೂಸ್

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.