ಮತ್ತೆ BJP ಭಿನ್ನಮತ ಸ್ಫೋಟ? ಬಿಎಸ್ವೈV/S ಸಂತೋಷ್
Team Udayavani, Sep 23, 2017, 10:36 AM IST
ಬೆಂಗಳೂರು: ಶತಾಯ ಗತಾಯ ಮತ್ತೆ ಅಧಿಕಾರ ಹಿಡಿಯುವ ಮಹದಾಸೆಯೊಂದಿಗೆ ವಿಧಾನ ಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಬಿಜೆಪಿಯಲ್ಲಿ ಮತ್ತೆ ಭಿನ್ನಮತ ಕಾಣಿಸಿಕೊಂಡಂತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತು ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರ ಬಣಗಳ ನಡುವೆ ಮತ್ತೆ ಭಿನ್ನಮತ ಕಾಣಿಸಿಕೊಂಡಿದೆ ಎಂದು ಹೇಳಲಾಗಿದ್ದು, ಇದಕ್ಕೆ ಸಾಕ್ಷಿಯಾಗಿ ಇಂದು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ಕರೆದಿದ್ದ ಮಹತ್ವದ ಸಭೆಗೆ ಸಂತೋಷ್ ಬಣದ ಹಲವು ನಾಯಕರನ್ನು ಬಾರದಂತೆ ಸೂಚಿಸಲಾಗಿದೆ.
ಬೂತ್ ಉಸ್ತುವಾರಿ ಸಮಿತಿ ರಚನೆ ಹಿನ್ನಲೆಯಲ್ಲಿ ಭಿನ್ನಮತ ಕಾಣಿಸಿಕೊಂಡಿದ್ದು, ಇಂದಿನ ಸಭೆಗೆ ನಿರ್ಮಲ್ ಕುಮಾರ್ ಸುರಾನಾ, ಭಾನುಪ್ರಕಾಶ್, ಗಿರೀಶ್ ಪಟೇಲ್, ಕೇಶವ್ ಪ್ರಸಾದ್, ಬಿ.ಎಂ. ನಂದೀಶ್,ಅಶೋಕ್ ಗಸ್ಕಿ ಸೇರಿದಂತೆ ಕೆಲ ನಾಯಕರಿಗೆ ದೂರವಾಣಿ ಕರೆ ಮಾಡಿ ಸಭೆಗೆ ಬಾರದಂತೆ ಹೇಳಿರುವುದು ವರದಿಯಾಗಿದೆ.
ಯಡಿಯೂರಪ್ಪ ಸೂಚನೆ ಮೇರೆಗೆ ಬಿಜೆಪಿ ಕಚೇರಿಯಿಂದ ದೂರವಾಣಿ ಕರೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಮಧುಸೂದನ್ಗೆ ತಡೆ
ರಾಜ್ಯ ವಕ್ತಾರರಾಗಿ ನೇಮಕಗೊಂಡಿದ್ದ ಗೋ ಮಧುಸೂದನ್ ನೇಮಕ್ಕೆ ತಡೆ ನೀಡಿರುವ ಬಗ್ಗೆ ತಿಳಿದು ಬಂದಿದೆ. ಬಿಜೆಪಿ ವರಿಷ್ಠರ ಸೂಚನೆ ಹಿನ್ನಲೆ ತಡೆ ನೀಡಲಾಗಿದೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ