ಪಕ್ಷಕ್ಕಿಂತ ನಮಗೆ ದೇಶವೇ ದೊಡ್ಡದು: ವಾರಾಣಸಿಯಲ್ಲಿ ಮೋದಿ
Team Udayavani, Sep 23, 2017, 12:04 PM IST
ಲಕ್ನೋ : “ನಮ್ಮ ರಾಜಕಾರಣ ಓಟಿಗಾಗಿ ಅಲ್ಲ; ಪಕ್ಷಕ್ಕಿಂತ ನಮಗೆ ದೇಶವೇ ದೊಡ್ಡದು’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಶನಿವಾರ ಶಹನ್ಶಾಪುರದಲ್ಲಿ ರೈತರ ಸಮಾವೇಶವನ್ನು ಉದ್ದೇಶಿಸಿ ಹೇಳಿದರು.
ಪ್ರಧಾನಿ ಮೋದಿ ಅವರೀಗ ತಮ್ಮ ಲೋಕಸಭಾ ಕ್ಷೇತ್ರವಾಗಿರುವ ವಾರಾಣಸಿಗೆ ಎರಡು ದಿನಗಳ ಭೇಟಿಯಲ್ಲಿದ್ದು ಇದು ಅವರ ಎರಡನೇ ದಿನದ ಕಾರ್ಯಕ್ರಮವಾಗಿದೆ. ಅವರಿಂದಿಲ್ಲಿ ಪಶುಧನ ಆರೋಗ್ಯ ಮೇಳವನ್ನು ಉದ್ಘಾಟಿಸಿ, ರೈತರಿಗೆ ಸಾಲ ಮನ್ನಾ ಸರ್ಟಿಫಿಕೇಟ್ ನೀಡಿ ಅವರನ್ನು ಸಮ್ಮಾನಿಸಿದರು.
ಉತ್ತರ ಪ್ರದೇಶ ರಾಜ್ಯಾದ್ಯಂತದ ರೈತರಿಗೆ ಪಶುಧನ ಮೇಳದಿಂದ ತುಂಬಾ ಪ್ರಯೋಜನವಾಗಲಿದೆ ಎಂದು ಮೋದಿ ಹೇಳಿದರು.
ಪಶು ಆರೋಗ್ಯ ಮೇಳವನ್ನು ಆಯೋಜಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಧಾನಿ ಮೋದಿ ಅಭಿನಂದಿಸಿದರು.
“ನಮ್ಮ ದೃಷ್ಟಿಯಲ್ಲಿ ಆಡಳಿತೆ ಎಂದರೆ ವೋಟ್ ಬ್ಯಾಂಕ್ ಅಲ್ಲ; ಚುನಾವಣೆಗಳನ್ನು ಗೆಲ್ಲುವುದು ಅಲ್ಲ; ನಮಗೆ ಪಕ್ಷಕ್ಕಿಂತ ದೇಶವೇ ದೊಡ್ಡದು; ಆದುದರಿಂದ ನವಭಾರತ ನಿರ್ಮಾಣವೇ ನಮ್ಮ ಗುರಿಯಾಗಿದೆ’ ಎಂದು ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದರು.
ಸ್ವಚ್ಚತೆ ಎನ್ನುವುದು ನಮ್ಮ ಸ್ವಭಾವವಾಗಬೇಕು; ಅದು ನಮ್ಮ ಸಾಮೂಹಿಕ ಹೊಣೆಗಾರಿಕೆಯಾಗಿರಬೇಕು. ಸ್ವಚ್ಚ ಭಾರತವು ಆರೋಗ್ಯಕರ ಭಾರತವಾಗುವುದರಲ್ಲಿ ಸಂದೇಹವೇ ಇಲ್ಲ’ ಎಂದು ಮೋದಿ ಹೇಳಿದರು.
ಉ.ಪ್ರ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಡಗೂಡಿ ಮೋದಿ ಸ್ವಚ್ಚ ಭಾರತ ಅಭಿಯಾನದಡಿ ಶೌಚಾಲಯ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದರು.
ಪ್ರಧಾನಿ ಮೋದಿ ಅವರಿಂದು ಶಹಜಹಾನಪುರದಲ್ಲಿನ 67 ವರ್ಷಗಳಷ್ಟು ಹಳೆಯ ಗೋಶಾಲೆಯಲ್ಲಿ ಗೋಪೂಜೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
Prahlad Joshi ವಿರುದ್ದ ರಣಕಹಳೆ : ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು
H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ