ಸ್ವರ ಶತಕದ ಸಂಭ್ರಮ


Team Udayavani, Sep 23, 2017, 12:41 PM IST

23-Kalavihara10.jpg

ಉಡುಪಿ – ಪರ್ಕಳದ ‘ಸರಿಗಮ ಭಾರತಿ’ ಸಭಾಂಗಣದಲ್ಲಿ ಆಗಸ್ಟ್‌ 31, 2017ರಂದು ‘ಸ್ವರ ಶತಕ’ ಎಂಬ ವಿಶೇಷ ಕಾರ್ಯಕ್ರಮ ನಡೆಯಿತು. ಬೆಂಗಳೂರಿನಲ್ಲಿರುವ ಇಂದಿರಾಗಾಂಧಿ ರಾಷ್ಟ್ರೀಯ ಕಲಾ ಕೇಂದ್ರದ ಪ್ರಾದೇಶಿಕ ವಲಯ ಕಚೇರಿಯು ಕರ್ನಾಟಕದ ಪ್ರತಿ ಜಿಲ್ಲೆಯಲ್ಲೂ ಸಂಗೀತ ಕಾರ್ಯಕ್ರಮ ನಡೆಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಈ ಅಭಿಯಾನಕ್ಕೆ ಉಡುಪಿ ಜಿಲ್ಲೆಯಲ್ಲಿ ಕೈಜೋಡಿಸಿದವರು ಪರ್ಕಳದ ‘ಸರಿಗಮ ಭಾರತಿ’ ಸಂಸ್ಥೆಯವರು. ಭಾರತ ರತ್ನ ಎಂ.ಎಸ್‌. ಸುಬ್ಬಲಕ್ಷ್ಮೀಯವರ ಜನ್ಮಶತಮಾನೋತ್ಸವದ ಅಂಗವಾಗಿ ಈ ಸರಣಿಯನ್ನು ಏರ್ಪಡಿಸಲಾಗಿತ್ತು. ಆ ಪ್ರಯುಕ್ತ ಶಾಸ್ತ್ರೀಯ ಸಂಗೀತ ಕಚೇರಿಯನ್ನು ನಡೆಸಿದವರು ವಿ| ಶಂಕರಿಮೂರ್ತಿ ಬಾಳಿಲ.

ಸಂತೋಷದ ಮುಖ ಮುದ್ರೆ! ಶ್ರೋತೃಗಳು ಮತ್ತು ಸಹ ಕಲಾವಿದರೊಂದಿಗೆ ಸಂವಹನ! ಇಡೀ ಕಛೇರಿಯಲ್ಲಿ ಮಿಂಚಿತ ಪಾಂಡಿತ್ಯದ ಮೆರುಗು! ತುಸುವೇ ಗಡುಸೆನಿಸುವ ಘನವಾದ ಶಾರೀರ! ಹಂಸಧ್ವನಿ ವರ್ಣದಿಂದ ತೊಡಗಿ ಕೊನೆಯ ಪ್ರಸ್ತುತಿಯವರೆಗೂ ಕಾಯ್ದುಕೊಳ್ಳಲಾದ ಬಿಗುತನ!

ಶುದ್ಧ  ಧನ್ಯಾಸಿ (ಪಾಲಯಮಾಂ) ಸ್ವರಜತಿಯ ಅನಂತರ ಎತ್ತಿಕೊಳ್ಳಲಾದ ವಸಂತ (ಸೀತಮ್ಮ) ಕೃತಿಯಲ್ಲಿ ಗಾಯಕಿಯ ಪ್ರಯೋಗಶೀಲತೆ ಎದ್ದುಕಂಡಿತು. ರೂಢಿಗತವಾದ ನ್ಯಾಸ ಸ್ವರಗಳು ಮಾತ್ರವಲ್ಲದೆ ಇತರ ಸ್ವರ ಮೆಟ್ಟಿಲುಗಳಲ್ಲಿ ನಿಂತು, ಅವುಗಳ ಸುತ್ತ ಸಂಚರಿಸುತ್ತ ರಾಗದ ಬೇರೆ ಬೇರೆ ಆಯಾಮಗಳನ್ನು ಈ ಕಲಾವಿದೆ ತೆರೆದಿಟ್ಟರು. ಮುಂದೆ ಅನುಪಲ್ಲವಿಯಲ್ಲಿ ನೆರವಲ್‌, ಸ್ವರ ಕಲ್ಪನೆಗಳನ್ನು ನೀಡಿದ ಕಾರಣ ಮುಂದೆ ಹಾಡಲಾದ ಚರಣ ತುಸು ಸಪ್ಪೆಯೆನಿಸಿತು.

ಪ್ರಧಾನ ರಾಗ ಹೇಮವತಿಯ (ಶ್ರೀ ಕಾಂತಿಮತಿ) ಪ್ರತಿಯೊಂದು ಸಂಚಾರ ಮಾರ್ಗಗಳ ಸ್ವರಗಳಿಗೂ ಸೂಕ್ತವಾದ ಗಮಕಗಳ, ಮೂರ್ಛನೆಗಳ ಯಾ ಬಿರ್ಕಾಗಳ ಅಲಂಕಾರದಿಂದ ನ್ಯಾಯ ಒದಗಿಸಿದ ಕಲಾವಿದೆ, ಕೃತಿ ನಿರೂಪಣೆಯ ಅನಂತರ ವಿದ್ವತ್ಪೂರ್ಣವಾದ ಸ್ವರವಿನಿಕೆಗಳನ್ನು ನೀಡಿದರು.

ನೀಲಾಂಬರಿ (ಸುಂದರತರ), ನಾದನಾಮಕ್ರಿಯೆ (ಕರುಣಾ ಜಲದೇ), ಶಿವರಂಜಿನಿ (ತೊರೆದು ಜೀವಿಸಿ) ರಚನೆಗಳು ರಾಗ ಮತ್ತು ಸಾಹಿತ್ಯ ಭಾವಕ್ಕೆ ಅನುಗುಣವಾಗಿದ್ದು ಮನೋಜ್ಞವಾಗಿ ಮೂಡಿಬಂದವು.

ಈ ಗಾಯಕಿಯ ಕಂಠ ತಾರಸ್ಥಾಯಿ ಸಂಚಾರಗಳಿಗಿಂತಲೂ ಮಧ್ಯ ಮತ್ತು ಮಂದ್ರ ಸ್ಥಾಯಿಗಳಲ್ಲೇ ಆಪ್ಯಾಯಮಾನವಾಗಿ ಮತ್ತು ಆಪ್ತವಾಗಿ ಧ್ವನಿಸುತ್ತದೆ. ಅಂತೆಯೇ ರಸಿಕರನ್ನು ತಲುಪುತ್ತದೆ. ಆದ ಕಾರಣ ಅವರು ಮಂದ್ರ ಸಂಚಾರಗಳಿಗೆ ಇನ್ನೂ ಹೆಚ್ಚಿನ ಆದ್ಯತೆ ನೀಡಲೆಂದು ಆಶಯ. ವಯಲಿನ್‌ನಲ್ಲಿ ಹದವರಿತು ಸಹಕರಿಸಿದ ಗಣರಾಜ ಕಾರ್ಲೆ ಮತ್ತು  ಮೃದಂಗ ಸಹವಾದಕ ಅನಿರುದ್ಧ ಭಟ್‌ ಇಬ್ಬರೂ ಈ ಕಛೇರಿಯ ಯಶಸ್ಸಿನಲ್ಲಿ ಸಮಭಾಗಿಗಳಾಗಿದ್ದಾರೆ.

ಸರೋಜಾ ಆರ್‌. ಆಚಾರ್ಯ

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.