ಪ್ರಜ್ಞಾವಂತರಿಂದಲೇ ಕಸ – ತ್ಯಾಜ್ಯದ ಹೊಂಡ ಸೃಷ್ಠಿ !


Team Udayavani, Sep 23, 2017, 4:48 PM IST

23Udi–3.jpg

ಕಾಪು: ತ್ಯಾಜ್ಯಮುಕ್ತ ಉಡುಪಿ ಜಿಲ್ಲೆಯ ಕನಸು ಕಾಣುತ್ತಿರುವ ಜಿಲ್ಲಾಧಿಕಾರಿಗಳ ಆಶಯಕ್ಕೆ ಅಪವಾದವೆಂಬಂತೆ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿ ನಡುವಿನ ಕಟಪಾಡಿ-ಚೊಕ್ಕಾಡಿ ರೈಲ್ವೇ ಸೇತುವೆ ಬಳಿಯಲ್ಲಿ ರಸ್ತೆ ಪಕ್ಕದಲ್ಲೇ ಕಸ – ತ್ಯಾಜ್ಯಗಳು ಸಂಗ್ರಹಿತವಾಗುತ್ತಿರುವುದು ಮತ್ತು ಸಂಗ್ರಹಿತವಾಗುವ  ಪ್ಲಾಸ್ಟಿಕ್‌ ತ್ಯಾಜ್ಯಗಳು ರಸ್ತೆಯುದ್ದಕ್ಕೂ ಹರಡಿಕೊಂಡಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.

ಕಟಪಾಡಿ-ಶಿರ್ವ ರಸ್ತೆಯ ಸುಭಾಸ್‌ನಗರ-ಚೊಕ್ಕಾಡಿ ನಡುವಿನ ರೈಲ್ವೇ ಕ್ರಾಸ್‌ ರಸ್ತೆಯ ಮೇಲ್ಭಾಗದಲ್ಲಿ ಪ್ರತೀ ನಿತ್ಯ ಕಸದ ರಾಶಿ ಸಂಗ್ರಹವಾಗುತ್ತಿದ್ದು, ಕಸ ಅಲ್ಲಿಯೇ ಕೊಳೆತು ನಾರುತ್ತಿದೆ. ಅಂಗಡಿ ತ್ಯಾಜ್ಯ, ಹೊಟೇಲ್‌ ತಿಂಡಿ, ಆಮ್ಲೆಟ್‌, ಮಾಂಸಾಹಾರಿ ಖಾದ್ಯಗಳ  ತೊಟ್ಟೆಗಳ ಸಹಿತವಾಗಿ ಮಕ್ಕಳು ಮತ್ತು ಮಹಿಳೆಯರು ಬಳಸುವ ಕೆಲವೊಂದು ಖಾಸಗಿ ವಸ್ತುಗಳನ್ನೂ ಜನರು ರಸ್ತೆ ಬದಿಯಲ್ಲೇ ಎಸೆದು ಹೋಗುವ ಮೂಲಕ ತ್ಯಾಜ್ಯ ಉತ್ಪಾದನೆಗೆ ಪರೋಕ್ಷವಾಗಿ ಕಾರಣರಾಗುತ್ತಿದ್ದಾರೆ. 

ರಸ್ತೆ ಬದಿಯಲ್ಲೇ ಎಸೆಯುವ ತಿಂಡಿಯ ಪೊಟ್ಟಣಗಳ ಪರಿಮಳಕ್ಕೆ ಮನಸೋಲುವ ಬೀದಿ ನಾಯಿಗಳು ಕಸವನ್ನು ಜಾಲಾಡುವುದು, ಬೀದಿ ಬದಿಯಲ್ಲೇ ಜಗಳವಾಡಿಕೊಳ್ಳುವುದು, ಕಸ ತ್ಯಾಜ್ಯಗಳನ್ನು ಪಸರಿಸಿ ಬಿಡುವುದು ಮಾಮೂಲಾಗಿದೆ.  

ಹೀಗೆ ಚೆಲ್ಲಾಪಿಲ್ಲಿಯಾಗುವ ತ್ಯಾಜ್ಯ ವಸ್ತುಗಳು, ಪ್ಲಾಸ್ಟಿಕ್‌ ಚೀಲ, ಕವರ್‌, ಕಾಗದ ಸಹಿತ ಹಲವು ವಸ್ತುಗಳು ರಸ್ತೆಯಲ್ಲಿ ಎಡೆಬಿಡದೆ ಸಂಚರಿಸುವ ವಾಹನಗಳ ಚಕ್ರಕ್ಕೆ ಸಿಲುಕಿ ಅಥವಾ ಗಾಳಿಗೆ ರಸ್ತೆಯುದ್ದಕ್ಕೂ ಚೆಲ್ಲಾಪಿಲ್ಲಿಯಾಗಿ ಹರಡಿ ಅಸಹನೀಯತೆಗೆ ಕಾರಣವಾಗುತ್ತಿವೆ. 

ಪ್ರಜ್ಞಾವಂತರೇ ಕಸದ ಮೂಲ
ಕಟಪಾಡಿ – ಶಿರ್ವ ರಸ್ತೆಯಲ್ಲಿ ಸಂಚರಿಸುವ ವಿದ್ಯಾವಂತ ಮತ್ತು ಪ್ರಜ್ಞಾವಂತ ವಾಹನ ಸವಾರರೇ ಇಲ್ಲಿನ ಕಸದ ಮೂಲವಾಗಿದ್ದು, ತಮ್ಮ ಮನೆಗಳಲ್ಲಿ ಸಂಗ್ರಹವಾದ ಕಸವನ್ನು ರಾಜಾರೋಷವಾಗಿ ರಸ್ತೆ ಬದಿಯಲ್ಲಿ ಎಸೆಯುವ ಮೂಲಕ ಚೊಕ್ಕಾಡಿ ಸೇತುವೆ ಬಳಿಯ ಪ್ರದೇಶವನ್ನು ತ್ಯಾಜ್ಯದ ಗುಂಡಿ ಯಂತೆ ಪರಿವರ್ತಿಸುತ್ತಿದ್ದಾರೆ. ಆ ಮೂಲಕ ಜಿಲ್ಲಾಧಿಕಾರಿಗಳ ಸ್ವತ್ಛ ಉಡುಪಿ ನಿರ್ಮಾಣದ ಕನಸಿಗೆ ತಣ್ಣೀರೆರಚುವ ಪ್ರಯತ್ನ ಮಾಡುತ್ತಿದ್ದಾರೆ.

ನಾಗರಿಕ ಸಮಾಜವೂ ಎಚ್ಚೆತ್ತುಕೊಳ್ಳಲಿ : ಮರಾಠೆ
ಉಡುಪಿ ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಪ್ರವಾಸ  ಮಾಡಿ  ಸ್ಥಳೀಯಾಡಳಿತ, ಶಾಲಾ ಕಾಲೇಜು, ಸ್ಥಳೀಯ ಸಂಘಟನೆಗಳ ಸಹಭಾಗಿತ್ವದಲ್ಲಿ  ಸ್ವತ್ಛತೆಗಾಗಿ ಜನಾಂದೋಲನ ನಡೆಸುತ್ತಾ ಬರುತ್ತಿದ್ದಾರೆ. ಜನಪ್ರತಿನಿಧಿಗಳು, ಅಧಿಕಾರಿಗಳು, ವಿವಿಧ ಸಂಘ – ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಕ‌ರು ಮತ್ತು ವಿದ್ಯಾರ್ಥಿಗಳಿಗೆ ಸ್ವತ್ಛತೆಯ ಪಾಠ ಹೇಳಿಕೊಡುತ್ತಿದ್ದಾರೆ. ಒಣ ಕಸ, ಹಸಿ ಕಸ ಮತ್ತು ಪ್ಲಾಸ್ಟಿಕ್‌ ತ್ಯಾಜ್ಯಗಳನ್ನು ಪ್ರತ್ಯೇಕವಾಗಿ ವಿಂಗಡಿಸಿ ವಿಲೇವಾರಿ ನಡೆಸುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದರೂ ಪರಿಸರದ ಪ್ರಜ್ಞಾವಂತ ನಾಗರಿಕರು ಮಾತ್ರ ರಸ್ತೆ ಬದಿಯಲ್ಲೇ ಕಸ-ತ್ಯಾಜ್ಯಗಳನ್ನು ಎಸೆಯುತ್ತಿರುವುದು ಖಂಡನೀಯ ಎನ್ನುವುದು ನಿವೃತ್ತ ಶಿಕ್ಷಕ ಪುಂಡಲೀಕ ಮರಾಠೆಯವರ ಅಭಿಪ್ರಾಯ.

ಕಸ – ತ್ಯಾಜ್ಯ ನಿಯಂತ್ರಣಕ್ಕೆ  ಕ್ರಮ : ಪಿಡಿಒ
ಕಟಪಾಡಿ – ಶಿರ್ವ ರಸ್ತೆಯಲ್ಲಿ ಸುರಿಯಲ್ಪಡುವ ಕಸ ತ್ಯಾಜ್ಯಗಳನ್ನು ನಿಯಂತ್ರಿಸಲು ಕಟಪಾಡಿ ಗ್ರಾಮ ಪಂಚಾಯತ್‌ ಹಲವು ಬಾರಿ ಕ್ರಮ ತೆಗೆದುಕೊಂಡು ಕಸ  ಸುರಿದವರಿಗೆ ದಂಡ ವಿಧಿಸಿದರೂ ಅದು ನಿಷ್ಪ್ರಯೋಜಕವೆನಿಸಿದೆ. ಕಸ ಎಸೆಯುವವರನ್ನು ರೆಡ್‌ಹ್ಯಾಂಡ್‌ ಆಗಿ ಹಿಡಿದು ಎಚ್ಚರಿಕೆ ನೀಡಿದ್ದರೂ ಅಲ್ಲಿ ಮತ್ತೆ ಅದೇ ಪುನರಾವರ್ತನೆಯಾಗುತ್ತಿದೆ. ಜನರೇ ಈ ಬಗ್ಗೆ ಜಾಗೃತರಾಗಿ ಕಸ ಎಸೆಯುವವರ ಬಗ್ಗೆ ಗ್ರಾ.ಪಂ.ಗೆ ಮಾಹಿತಿ ನೀಡಿ ನಮ್ಮೊಂದಿಗೆ ಕೈಜೋಡಿಸಬೇಕು. ಅ. 1ರಿಂದ ಪ್ರತೀ ಮನೆ-ಮನೆಗೆ ತೆರಳಿ ಅಲ್ಲಿನ ಕಸ ತ್ಯಾಜ್ಯಗಳನ್ನು ಸಂಗ್ರಹಿಸಲು ಪ್ರತ್ಯೇಕ ವಾಹನವನ್ನು ಕಳುಹಿಸುವ ವ್ಯವಸ್ಥೆ ಮಾಡಲು ಚಿಂತಿಸಿದ್ದು, ಇದಕ್ಕಾಗಿ  ಪ್ರತೀ ಮನೆಯವರಿಂದ  50 ರೂ. ಗಳಂತೆ ಶುಲ್ಕವನ್ನು ಸಂಗ್ರಹಿಸಲು ಸೆ. 20ರಂದು ನಡೆದಿರುವ  ಗ್ರಾಮಸಭೆಯಲ್ಲೂ  ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಕಟಪಾಡಿ ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ಇನಾಯತ್‌ ಅಲಿ ತಿಳಿಸಿದ್ದಾರೆ.

ರಾಕೇಶ್‌ ಕುಂಜೂರು
 

ಟಾಪ್ ನ್ಯೂಸ್

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

Basavakalyana; ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

12-

Heat Weather: ಹಬೆಯಾಡುತ್ತಿರುವ ವಸುಂಧರೆ

11-candle

UV Fusion: ಆಯಸ್ಸು ಅಳಿಯುವ ಮುನ್ನ

10-ಉವ-ಉಸಿಒನ

Madhur Temple: ಏಕದಂತನ ಚಿತ್ರವೇ ಮೂರ್ತಿ ಆದ ಪರಿ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ

CSKvsRCB; ಹಲವು ದಾಖಲೆಗಳಿಗೆ ಸಾಕ್ಷಿಯಾದ ಬೆಂಗಳೂರು – ಚೆನ್ನೈ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Udupi District ನಾನ್‌ ಸಿಆರ್‌ಝಡ್‌ ಮರಳು ಆಸರೆ; 2.45 ಲಕ್ಷ ಮೆ. ಟನ್‌ ಮರಳು ತೆರವು

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

Kapu ಟಿಪ್ಪರ್‌ಗೆ ಪಿಕಪ್‌ ಢಿಕ್ಕಿ: ಚಾಲಕ ಗಂಭೀರ

MUST WATCH

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

ಹೊಸ ಸೇರ್ಪಡೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

Breach Of Privacy….; ಐಪಿಎಲ್ ಪ್ರಸಾರಕರ ವಿರುದ್ಧ ರೇಗಾಡಿದ ರೋಹಿತ್ ಶರ್ಮಾ

15-rain

Rain: ಕಳಸ ತಾಲೂಕಿನಾದ್ಯಂತ ಭಾರೀ ಗಾಳಿ-ಮಳೆ; ಜನಜೀವನ ಅಸ್ತವ್ಯಸ್ತ, ವಿದ್ಯುತ್ ಸಂಪರ್ಕ ಕಡಿತ

ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

Hubli; ರಾಜ್ಯ ಯಾವ ದಿಕ್ಕಿನತ್ತ ಸಾಗುತ್ತಿದೆ…: ಪ್ರದೀಪ ಶೆಟ್ಟರ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.