ಬಸ್ಸಿನಿಂದ ಬಿದ್ದು ವಿದ್ಯಾರ್ಥಿಗೆ ತೀವ್ರ ಗಾಯ
Team Udayavani, Sep 24, 2017, 2:15 PM IST
ಸುರತ್ಕಲ್: ಕೊಟ್ಟಾರ ಚೌಕಿ ಬಳಿ ಬಸ್ನಿಂದ ಇಳಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ರಸ್ತೆಗೆ ಬಿದ್ದ ವಿದ್ಯಾರ್ಥಿಯೊಬ್ಬನನ್ನು ಆಸ್ಪತ್ರೆಗೆ ಸೇರಿಸದೆ ದಾರಿ ಮಧ್ಯೆಯೇ ಬಸ್ ಸಿಬಂದಿ ಬಿಟ್ಟು ಹೋದ ಘಟನೆ ಸೆ. 21ರಂದು ಸಂಭವಿಸಿದೆ.
ಚಿನ್ಮಯ ಶರ್ಮ (18) ಬಸ್ಸಿನಿಂದ ಬಿದ್ದು ಗಾಯಗೊಂಡ ವಿದ್ಯಾರ್ಥಿ. ಮಾಲೇಮಾರ್ – ಕೊಟ್ಟಾರಚೌಕಿ ನಡುವೆ ಸಂಚರಿಸುವ ಖಾಸಗಿ ಬಸ್ ಏರಿದ್ದ ಚಿನ್ಮಯ ಕೊಟ್ಟಾರ ಚೌಕಿಯತ್ತ ಬಸ್ ಸಾಗುತ್ತಿದ್ದಂತೆ ಬಸ್ ಮಂಗಳೂರು ನಗರದತ್ತ ಹೋಗುತ್ತಿಲ್ಲ ಎಂದ ತಿಳಿದು ಇಳಿಯುವ ಸಂದರ್ಭ ಅನಿರೀಕ್ಷಿತವಾಗಿ ಬಿದ್ದು ಗಾಯಗೊಂಡಿದ್ದರು. ಆದರೆ ಸಿಬಂದಿ ಕನಿಷ್ಠ ಮಾನವೀಯತೆಯನ್ನೂ ತೋರದೆ ಗಾಯಾಳುವನ್ನು ಕೆಟ್ಟ ಶಬ್ದಗಳಲ್ಲಿ ನಿಂದಿಸಿ ರಸ್ತೆಯಲ್ಲೇ ಬಿಟ್ಟು ತೆರಳಿದ್ದರು ಎನ್ನಲಾಗಿದೆ. ವಿದ್ಯಾರ್ಥಿಯ ಗಲ್ಲಕ್ಕೆ ತೀವ್ರವಾಗಿ ಏಟು ಬಿದ್ದಿದ್ದು ಎರಡು ಕಡೆ ಮೂಳೆ ಮುರಿತ ಸಂಭವಿಸಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೋಷಕರು ನೀಡಿದ ದೂರಿನ ಮೇರೆಗೆ ಉತ್ತರ ಸಂಚಾರ ಪೊಲೀಸರು ಬಸ್ ಚಾಲಕ, ನಿರ್ವಾಹಕನ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ