ರೊಹಿಂಗ್ಯಾ ಉಗ್ರರಿಂದ 28 ಹಿಂದೂಗಳ ಕಗ್ಗೊಲೆ?
Team Udayavani, Sep 25, 2017, 6:00 AM IST
ಯಾಂಗೂನ್/ಹೈದರಾಬಾದ್: ರೊಹಿಂಗ್ಯಾಗಳ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಮ್ಯಾನ್ಮಾರ್ನಿಂದ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದೆ. ಆ ದೇಶದ ರಾಖೀನೆ ಪ್ರಾಂತ್ಯದಲ್ಲಿ 28 ಮಂದಿ ಹಿಂದೂಗಳನ್ನು ಬರ್ಬರವಾಗಿ ಕೊಂದಿರುವ ರೊಹಿಂಗ್ಯಾ ಉಗ್ರರು ಸಾಮೂಹಿಕವಾಗಿ ಸಮಾಧಿ ಮಾಡಿದ್ದಾರೆ ಎಂದು ಸೇನೆ ದೃಢಪಡಿಸಿದೆ.
ಈ ಅಂಶವನ್ನು ಸೇನೆಯ ವೆಬ್ಸೈಟ್ನಲ್ಲಿ ಅಪ್ಡೇಟ್ ಮಾಡಲಾಗಿದೆ. ರಾಖೀನೆ ಪ್ರಾಂತ್ಯದಲ್ಲಿ ಆರ್ಸಾ ತೀವ್ರಗಾಮಿ ಸಂಘಟನೆಯು ಕೊಂದು ಹಾಕಿದೆ ಎಂದು ಹೇಳಲಾಗಿರುವ 28 ಮಂದಿ ಹಿಂದೂಗಳ ಮೃತದೇಹವನ್ನು ಸಮಾಧಿಯಿಂದ ಹೊರ ತೆಗೆಯಲಾಗಿದೆ ಎಂದು ಅದರಲ್ಲಿ ಉಲ್ಲೇಖೀಸಲಾಗಿದೆ.
ಆ.26ರಂದು ಮ್ಯಾನ್ಮಾರ್ ಸೇನೆ ಸಮುದಾಯದ ವಿರುದ್ಧ ಬೃಹತ್ ಕಾರ್ಯಾಚರಣೆ ನಡೆಸಿದ ಬಳಿಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರಿ ಟೀಕೆ ವ್ಯಕ್ತವಾಗಿತ್ತು. ಕೆಲ ದಿನಗಳ ಹಿಂದೆ ಕೇಂದ್ರ ಸರ್ಕಾರ ಕೂಡ ಸುಪ್ರೀಂಕೋರ್ಟ್ನಲ್ಲಿ ಅವರು ಅಕ್ರಮ ವಲಸಿಗರು ಎಂದು ಅಫಿಡವಿಟ್ ಸಲ್ಲಿಸಿತ್ತು. ಈ ನಡುವೆ ಭಾರತ ಹೈದರಾಬಾದ್ನಿಂದ ವಿಶೇಷ ಹಡಗಿನ ಮೂಲಕ ಮ್ಯಾನ್ಮಾರ್ಗೆ ಪರಿಹಾರ ಸಾಮಗ್ರಿಗಳನ್ನು ಭಾನುವಾರ ಕಳುಹಿಸಿಕೊಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ