ಕಡೆಗಣಿಸಿದ್ದರಿಂದ ಸಮುದಾಯ ಮತ್ತಷ್ಟು ಪ್ರಬಲ


Team Udayavani, Sep 25, 2017, 12:51 PM IST

kp-nanjundi.jpg

ಬೆಂಗಳೂರು: ಕಾಂಗ್ರೆಸ್‌ ಪಕ್ಷ ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷ್ಯ ಮಾಡಿರುವುದರಿಂದ ಸಮುದಾಯದ ಸಂಘಟನೆ ಇನ್ನಷ್ಟು ಪ್ರಬಲವಾಗುತ್ತಿದೆ ಎಂದು ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ.ಪಿ.ನಂಜುಂಡಿ ಹೇಳಿದರು.

ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಮತ್ತು ವಿಶ್ವಕರ್ಮ ಸಮುದಾಯ ಸಂಘದಿಂದ ಭಾನುವಾರ ಬನ್ನೇರುಘಟ್ಟ ರಸ್ತೆಯ ಅಪ್ಪಿ ಜೆ.ಜೆ. ಆಟದ ಮೈದಾನದಲ್ಲಿ ಹಮ್ಮಿಕೊಂಡಿದ್ದ 4ನೇ ವರ್ಷದ ವಿಶ್ವಕರ್ಮ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷ ವಿಶ್ವಕರ್ಮ ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಇದರ ಪರಿಣಾಮವಾಗಿ ಸಮುದಾಯದ ಸಂಘಟನೆ ಇನ್ನಷ್ಟು ವೇಗವಾಗಿ ಬೆಳೆಯುತ್ತಿದೆ. ಬಿಜೆಪಿಯಿಂದ ನಮ್ಮ ಸ್ವಾಭಿಮಾನಕ್ಕೆ ತಕ್ಕಂತೆ ಮನ್ನಣೆ ಸಿಕ್ಕಿದೆ ಎಂದರು.

ವಿಶ್ವಕರ್ಮ ಜಯಂತಿಗೆ ಅಮಿತ್‌ ಶಾ: ಅ.8ರಂದು ನಗರದ ಅರಮನೆ ಮೈದಾನದಲ್ಲಿ 9ನೇ ವಿಶ್ವಕರ್ಮ ಜಯಂತಿಯನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮುಂದಾಳತ್ವದಲ್ಲಿ ನಡೆಸಲಿದ್ದೇವೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರ ಗೃಹ ಸಚಿವ ರಾಜನಾಥ್‌ಸಿಂಗ್‌, ಕೌಶಲಾಭಿವೃದ್ಧಿ ಸಚಿವ ಅನಂತ್‌ ಕುಮಾರ್‌ ಹೆಗಡೆ ಮೊದಲಾದ ಗಣ್ಯರು ಭಾಗವಹಿಸಲಿದ್ದಾರೆ. ಜಯಂತ್ಯೋತ್ಸವದಲ್ಲಿ ವಿಶ್ವಕರ್ಮ ಸಮುದಾಯ ಶಕ್ತಿ ಪ್ರದರ್ಶನ ಮಾಡಲಿದ್ದೇವೆ ಎಂದು ಹೇಳಿದರು.

ಪ್ರಮುಖ ಮೂರು ಬೇಡಿಕೆಯನ್ನು ಈಡೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವ ನಿಟ್ಟಿನಲ್ಲಿ ವಿಶ್ವಕರ್ಮ ಜಯಂತೋತ್ಸವ ನಡೆಯಲಿದೆ. ಕೇಂದ್ರ ಸರ್ಕಾರದಿಂದ ವಿಶ್ವಕರ್ಮ ಅಭಿವೃದ್ಧಿ ನಿಗಮ ಆರಂಭಿಸಿ, ಅಗತ್ಯ ಅನುದಾನ ನೀಡಬೇಕು. ವಿಶ್ವಕರ್ಮ ಜಯಂತೋತ್ಸವನ್ನು ಕೇಂದ್ರ ಸರ್ಕಾರದಿಂದಲೇ ದೇಶಾದ್ಯಂತ ಆಚರಿಸಬೇಕು ಮತ್ತು ಚಿನ್ನಾಬೆಳ್ಳಿ ವ್ಯಾಪಾರಿಗಳ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯ ತಡೆಗೆ ಸೂಕ್ತ ಕಾಯ್ದೆಯೊಂದನ್ನು ಜಾರಿ ಮಾಡುವಂತೆ ಮನವಿ ಸಲ್ಲಿಸಲಿದ್ದೇವೆ ಎಂದರು.

ವಿಶ್ವಕರ್ಮ ಜಯಂತ್ಯೋತ್ಸವದಂದು ಐವರು ಗಣ್ಯರಿಗೆ ನೀಡುವ ವಿಶ್ವಕರ್ಮ ಪ್ರಶಸ್ತಿಯ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಒಂದೆರೆಡು ದಿನದಲ್ಲಿ ಪ್ರಕ್ರಿಯೆ ಪೂರ್ಣಗೊಳಿಸಲಿದ್ದೇವೆ. ರಾಜ್ಯಾದ್ಯಂತ ಸಮುದಾಯದ ಸಂಘಟನೆ ಕಾರ್ಯ ನಡೆಯುತ್ತಿದೆ. ವಿಶ್ವಕರ್ಮ ಸಮುದಾಯ ನಾಡಿಗೆ ನೀಡಿದ ಕೊಡುಗೆಯನ್ನು ಎಲ್ಲರಿಗೂ ತಿಳಿಸುವ ಪ್ರಯತ್ನ ಮಾಡಲಿದ್ದೇವೆ ಎಂದು ಹೇಳಿದರು.

ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಜೆ.ಲೋಕೇಶ್‌, ವಿಶ್ವಕರ್ಮ ಮುಖಂಡರಾದ ಕನ್ನಡ ಸೋಮು, ಶ್ಯಾಮ್‌ ಸುಂದರ್‌, ಎಸ್‌.ಲೋಕನಾಥಾಚಾರಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.