ಹಿಂದೂ ವಿವಿ ಘಟನೆ: ಸಂಘಟನೆಗಳ ಪ್ರತಿಭಟನೆ
Team Udayavani, Sep 26, 2017, 9:27 AM IST
ಕಲಬುರಗಿ: ಉತ್ತರಪ್ರದೇಶದ ಬನಾರಸ್ ಹಿಂದು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ವಿರೋಧಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವ ಘಟನೆ ಖಂಡಿಸಿ ಸೋಮವಾರ ನಗರದಲ್ಲಿ ಎಐಡಿಎಸ್ಒ, ಎಐಎಂಎಸ್ಎಸ್ ಹಾಗೂ ಎಐಡಿವೈಒ ಪ್ರತಿಭಟನೆ ನಡೆಸಿದವು.
ಕಳೆದ ಗುರುವಾರ ವಿವಿ ಆವರಣದಲ್ಲಿ ಮೂರವರು ಬೈಕ್ ಸವಾರರು ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಕುರಿತು ವಿದ್ಯಾರ್ಥಿನಿ ವಿವಿ ಅಧಿಕಾರಿಗಳಿಗೆ ದೂರು ನೀಡಿದರೂ, ವಿದ್ಯಾರ್ಥಿನಿಗೆ ಬುದ್ದಿವಾದ ಹೇಳಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳಿಗೆ ನೀಡಿರುವ ಮನವಿ ಪತ್ರದಲ್ಲಿ ದೂರಿದ್ದಾರೆ.
ವಿವಿ ಅಧಿಕಾರಿಗಳ ನಡೆ ಬೇಸತ್ತ ವಿದ್ಯಾರ್ಥಿನಿಯರು ನ್ಯಾಯಕ್ಕಾಗಿ ಹಾಗೂ ಭದ್ರತೆಗಾಗಿ ಆಗ್ರಹಿಸಿ ಪ್ರತಿಭಟಿಸುತ್ತಿದ್ದಾಗ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಈ ಎರಡು ಘಟನೆಗಳು ನಿಜಕ್ಕೂ ನಾಚಿಕಗೇಡಿನ ಸಂಗತಿಯಾಗಿವೆ. ಉಭಯ ಘಟನೆಗೆ ಸಂಬಂಧಿಸಿದಂತೆ ವಿವಿ ಅಧಿಕಾರಿಗಳು, ಪೊಲೀಸರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಈ ಕುರಿತು ನಿಸ್ಪಕ್ಷಪಾತವಾದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಎಐಡಿವೈಒ ಅಧ್ಯಕ್ಷ ಮಹೇಶ ನಾಡಗೌಡ, ಎಐಎಂಎಸ್ಎಸ್ ಜಿಲ್ಲಾಧ್ಯಕ್ಷೆ ಸೀಮಾದೇಶಪಾಂಡೆ, ಎಐಡಿಎಸ್ಒ ಜಿಲ್ಲಾಧ್ಯಕ್ಷ ಮಲ್ಲಿನಾಥ ಸಿಂಘೆ ಹಾಗೂ ಕಾರ್ಯಕರ್ತರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್