12 ಲಕ್ಷ ಗರ್ಭಿಣಿ, ಬಾಣಂತಿಯರಿಗೆ ಬಿಸಿಯೂಟ


Team Udayavani, Sep 27, 2017, 9:43 AM IST

27-STATE-11.jpg

ಬೆಂಗಳೂರು: ರಾಜ್ಯದ ಗರ್ಭಿಣಿಯರು, ಬಾಣಂತಿಯರು ಹಾಗೂ ಜನಿಸುವ ಮಕ್ಕಳಲ್ಲಿ ಪೋಷಕಾಂಶ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಗರ್ಭಿಣಿ, ಬಾಣಂತಿಯರಿಗೆ ಮಧ್ಯಾಹ್ನ ಪೌಷ್ಟಿಕ ಬಿಸಿಯೂಟ ಹಾಗೂ ಕಬ್ಬಿಣಾಂಶದ ಮಾತ್ರೆ ವಿತರಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ “ಮಾತೃಪೂರ್ಣ ಯೋಜನೆ’ಗೆ ಮಹಾತ್ಮ ಗಾಂಧಿ ಜಯಂತಿಯಂದು ಚಾಲನೆ ಸಿಗಲಿದೆ. 

ರಾಜ್ಯದ 204 ಶಿಶು ಅಭಿವೃದ್ಧಿ ಯೋಜನೆಗಳ ಲ್ಲಿನ 12 ಲಕ್ಷ ಫ‌ಲಾನುಭವಿಗಳಿಗೆ 65,911 ಅಂಗನ ವಾಡಿ ಕೇಂದ್ರಗಳ ಮೂಲಕ ಮಧ್ಯಾಹ್ನ ಪೌಷ್ಟಿಕ ಬಿಸಿ ಯೂಟ ವಿತರಿಸಲು ಸಿದ್ಧತೆ ನಡೆದಿದೆ. ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿಯ ರೆಂದು ನೋಂದಣಿ ಯಾದಂದಿನಿಂದ ಹೆರಿಗೆ ಯಾದ 6 ತಿಂಗಳವರೆಗಿನ ಬಾಣಂತಿಯರಿಗೆ ಈ ಸೌಲಭ್ಯ ಸಿಗಲಿದೆ. ಈಗಾಗಲೇ ಎಚ್‌.ಡಿ.ಕೋಟೆ, ಜಮಖಂಡಿ, ಮಧುಗಿರಿ, ಮಾನ್ವಿ ತಾಲೂಕುಗಳ 5 ಯೋಜನಾ ಪ್ರದೇಶಗಳ ಅಂಗನವಾಡಿಗಳಲ್ಲಿ ಪ್ರಾಯೋಗಿಕ ವಾಗಿ ಯೋಜನೆ ಜಾರಿಯಾಗಿದ್ದು, ಉಳಿದೆಡೆ ಅ.2 ರಿಂದ ಆರಂಭವಾಗಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಹಾಗೂ ಯುನಿಸೆಫ್ ಸಂಸ್ಥೆ ಸಹಯೋಗದಲ್ಲಿ ಯೋಜನೆ ಜಾರಿಗೊಳಿಸುತ್ತಿದೆ.

ಯೋಜನೆ ಜಾರಿಗೆ ಪೂರ್ವಭಾವಿಯಾಗಿ ಮಂಗಳವಾರ ಮಾಹಿತಿ ನೀಡಿದ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್‌, “ಗರ್ಭಿಣಿ ಯರು, ಬಾಣಂತಿಯರು ಹಾಗೂ ಮಕ್ಕಳಲ್ಲಿ ಪೌಷ್ಟಿಕಾಂಶ ಪ್ರಮಾಣ ಹೆಚ್ಚಿಸಲು ಮಾತೃಪೂರ್ಣ ಯೋಜನೆ ಜಾರಿಗೆ ಸಿದ್ಧತೆ ನಡೆದಿದೆ. ರಾಜ್ಯದಲ್ಲಿ ವಯಸ್ಸಿಗೆ ತಕ್ಕಂತೆ ಎತ್ತಕ್ಕೆ ಬೆಳೆಯದ ಮಕ್ಕಳ ಸಂಖ್ಯೆ ದಶಕದಿಂದೀಚೆಗೆ ಶೇ.10ರಷ್ಟು ಕಡಿಮೆಯಾಗಿ ದ್ದರೂ ಇನ್ನೂ  .36ರಷ್ಟು ಮಕ್ಕಳ ಎತ್ತರ ಸಹಜಕ್ಕಿಂತ ಕಡಿಮೆ ಇದೆ. ಆ ಹಿನ್ನೆಲೆಯಲ್ಲಿ ವಯಸ್ಸಿಗೆ ಸಹಜವಾದ ಎತ್ತರ ಪಡೆಯುವುದಕ್ಕೆ ಪೂರಕವಾಗಿ ಪೌಷ್ಟಿಕಾಂಶ ನೀಡಲು ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇಲಾಖೆ ನಿರ್ದೇಶಕಿ ದೀಪಾ ಚೋಳನ್‌, ಯುನಿಸೆಫ್ ಸಂಸ್ಥೆಯ ಪೌಷ್ಟಿಕಾಂಶ ತಜ್ಞೆ ಡಾ.ಖ್ಯಾತಿ ತಿವಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಾ.ರಾಜ್‌ಕುಮಾರ್‌ ಇತರರು ಉಪಸ್ಥಿತರಿದ್ದರು. 

ಬಿಸಿಯೂಟದಲ್ಲಿ ಏನಿರುತ್ತೆ?
ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್ ನ್ಯೂಟ್ರಿಷನ್‌ (ಎನ್‌ಐಎನ್‌) ಪ್ರಕಾರ ಗರ್ಭಿಣಿಯರು ನಿತ್ಯ ಊಟದಲ್ಲಿ 2,580 ಕ್ಯಾಲರಿ, 78 ಗ್ರಾಂ ಪ್ರೋಟಿನ್‌ ಹಾಗೂ 1,200 ಮಿ.ಗ್ರಾಂನಷ್ಟು ಕ್ಯಾಲ್ಸಿಯಂ  ಸೇವಿಸುವ ಅಗತ್ಯವಿದೆ. ಅದರಂತೆ ಮಾತೃಪೂರ್ಣ ಯೋಜನೆಯಡಿ ಪೌಷ್ಟಿಕ ಬಿಸಿಯೂಟದಲ್ಲಿ ಗರ್ಭಿಣಿಯರಿಗೆ 1342 ಕ್ಯಾಲರಿ, 41 ಗ್ರಾಂ ಪ್ರೋಟಿನ್‌ ಹಾಗೂ 578 ಮಿ.ಗ್ರಾಂ. ಕ್ಯಾಲ್ಸಿಯಂ ಸಿಗಲಿದೆ. ಅನ್ನ, ಸಾಂಬಾರ್‌, ಪಲ್ಯದ ಜತೆಗೆ ಬೇಯಿಸಿದ ಮೊಟ್ಟೆ ಹಾಗೂ 200. ಮಿ.ಲೀ. ಹಾಲು, ಬೆಲ್ಲ ಹಾಗೂ ಕಡಲೆಬೀಜದ ಬμì ನೀಡಲಾಗುತ್ತದೆ.  ತಿಂಗಳಿಗೆ 25 ದಿನ ಊಟ ವಿತರಿಸಲಾಗುತ್ತದೆ. ಮೊಟ್ಟೆ ಸೇವಿಸದವರಿಗೆ ಮೊಳಕೆಕಾಳು ವಿತರಿಸಲಾಗುತ್ತದೆ. 100 ದಿನ ಕಬ್ಬಿನಾಂಶ ಮಾತ್ರೆ ನೀಡಲಾಗುವುದು. 8 ತಿಂಗಳು ತುಂಬಿದ ಹಾಗೂ ಹೆರಿಗೆಯಾದ 45 ದಿನದ ಬಾಣಂತಿಯರಿಗೆ ಮನೆಗೆ ಊಟ ತಲುಪಿಸುವ ವ್ಯವಸ್ಥೆ ಇರಲಿದೆ.

ಟಾಪ್ ನ್ಯೂಸ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.