“ಮಲ್ಲಯುದ್ಧ ವಿಶಾರದ’ನ ನಾಡಿನಲ್ಲಿ ಕುಸ್ತಿ ಪಂದ್ಯಾವಳಿ


Team Udayavani, Sep 27, 2017, 11:43 AM IST

27-STATE-26.jpg

ಉಡುಪಿ: ಪೂರ್ಣಪ್ರಜ್ಞ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಉಡುಪಿ ವತಿಯಿಂದ ಮಂಗಳೂರು ವಿ.ವಿ. ಸಹಯೋಗದಲ್ಲಿ 2 ದಿನಗಳ ಮಂಗಳೂರು ವಿ.ವಿ. ಮಟ್ಟದ ಅಂತರ್‌ ಕಾಲೇಜು ಕುಸ್ತಿ ಪಂದ್ಯಾಟ ಮಂಗಳವಾರ “ಮಲ್ಲಯುದ್ಧ ವಿಶಾರದ’ ಕೃಷ್ಣನ ನಾಡಾದ ಉಡುಪಿಯಲ್ಲಿ ಆರಂಭಗೊಂಡಿತು. 

ಮಂಗಳೂರು ವಿ.ವಿ. ವ್ಯಾಪ್ತಿಯ ಪುರುಷರ ವಿಭಾಗದಲ್ಲಿ 31 ಕಾಲೇಜಿನ 178 ಸ್ಪರ್ಧಿಗಳು, ಮಹಿಳೆಯರ ವಿಭಾಗದಲ್ಲಿ 18 ಕಾಲೇಜಿನ 78 ಸ್ಪರ್ಧಿಗಳು ಭಾಗವಹಿಸಿದ್ದು, ಇದೇ ಮೊದಲ ಬಾರಿ ಎನ್ನುವಂತೆ ದಾಖಲೆಯ ಒಟ್ಟು 249 ಸ್ಪರ್ಧಿಗಳು ಕುಸ್ತಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದಾರೆ. ಉಡುಪಿಯ 12 ಕಾಲೇಜುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿವೆ. ಪುರುಷರ ವಿಭಾಗದಲ್ಲಿ 57 ಕೆ.ಜಿ.ಯಿಂದ  125 ಕೆ.ಜಿ.ವರೆಗೆ, ಮಹಿಳಾ ವಿಭಾಗದಲ್ಲಿ 43 ಕೆ.ಜಿ.ಯಿಂದ 74 ಕೆ.ಜಿ.ವರೆಗೆ ಒಟ್ಟು 8 ವಿಭಾಗದಲ್ಲಿ ಸ್ಪರ್ಧೆ ನಡೆಯುತ್ತಿದೆ. 

ಹಳ್ಳಿ ಆಟಕ್ಕೂ ಪ್ರಾಶಸ್ತ್ಯ ಸಿಗಲಿ
ಪೂರ್ಣಪ್ರಜ್ಞ ಶಿಕ್ಷಣ ಸಮೂಹದ ಅಧ್ಯಕ್ಷ, ಶ್ರೀ ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರು ಕ್ರೀಡಾಕೂಟ ಉದ್ಘಾಟಿಸಿ, ಆಶೀರ್ವ ದಿಸಿದರು. “ನಗರವಾಸಿಗಳು ಪೇಟೆಯ ತಿಂಡಿ, ಆಹಾರದಿಂದ ಬೇಸತ್ತು, ಹಳ್ಳಿಯ ಊಟಕ್ಕೆ ಹೆಚ್ಚಿನ ಪ್ರಾಮುಖ್ಯ ನೀಡುತ್ತಿದ್ದು, ಹಾಗೇ ನಮ್ಮ ಗ್ರಾಮೀಣ ಆಟಗಳಾದ ಕುಸ್ತಿ, ಲಗೋರಿ, ಹಗ್ಗದ ಆಟಗಳಿಗೆ ಪ್ರಾಶಸ್ತ್ಯ ಸಿಗಬೇಕಿದೆ. ಸೋತವರಿಂದ ನಾವು ಗೆದ್ದಿದ್ದೇವೆ ಅನ್ನುವುದನ್ನು ಗೆದ್ದವರು ಮರೆಯಬಾರದು. ಪುರಾಣದ ಶ್ರೀ ಕೃಷ್ಣ- ಬಲರಾಮ, ಹನುಮಂತ, ಭೀಮಸೇನ, ಆಚಾರ್ಯ ಮಧ್ವರು ಇವರೆಲ್ಲ ಕುಸ್ತಿ ಆಟದಲ್ಲಿ ಪರಿಣತಿ ಪಡೆದಿದ್ದರು’ ಎಂದರು. 

ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಡಾ| ಬಿ. ಜಗದೀಶ್‌ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿ.ವಿ. ದೈಹಿಕ ಶಿಕ್ಷಣ ನಿರ್ದೇಶಕ ಡಾ| ಕಿಶೋರ್‌ ಕುಮಾರ್‌ ಸಿ.ಕೆ., ದ.ಕ. ಮೀನುಗಾರಿಕಾ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಪೂರ್ಣಪ್ರಜ್ಞ ಶಿಕ್ಷಣ ಸಮೂಹದ ಕಾರ್ಯದರ್ಶಿ ಡಾ| ಜಿ. ಎಸ್‌. ಚಂದ್ರಶೇಖರ್‌, ಕೋಶಾಧಿಕಾರಿ ಪ್ರದೀಪ್‌ ಕುಮಾರ್‌, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಸುಕುಮಾರ್‌ ಉಪಸ್ಥಿತರಿದ್ದರು.  ಕಾಲೇಜಿನ ಶ್ರೀಕಾಂತ್‌ ರಾವ್‌ ಸ್ವಾಗತಿಸಿದರು. ಶಿವಕುಮಾರ್‌ ವಂದಿಸಿದರು. 

ಆಳ್ವಾಸ್‌ ಪ್ರಾಬಲ್ಯ
8 ಬೇರೆ ಬೇರೆ ವಿಭಾಗದಲ್ಲಿ 10 ಕಾಲೇಜುಗಳಾದ ಉಡುಪಿಯ ಪೂರ್ಣಪ್ರಜ್ಞ, ಎಂಜಿಎಂ, ಮೂಡಬಿದಿರೆ ಯ ಆಳ್ವಾಸ್‌, ಆಳ್ವಾಸ್‌ ಬಿಪಿಎಡ್‌, ಮಂಗಳೂರಿನ ಕಾರ್‌ಸ್ಟ್ರೀಟ್‌ ಕಾಲೇಜು, ಬ್ರಹ್ಮಾವರದ ಎಸ್‌ಎಂಎಸ್‌, ಬಸೂÅರಿನ  ಎಸ್‌ಬಿಎಂ, ಕುಂದಾಪುರದ ಡಾ| ಬಿ.ಬಿ. ಹೆಗ್ಡೆ, ಕೋಟದ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾರ್ಕಳದ ಎಸ್‌ವಿಎಸ್‌ನ ವಿದ್ಯಾರ್ಥಿಗಳು ಸೆಮಿಫೈನಲ್‌ಗೇರಿದ್ದು, ಹೆಚ್ಚಿನ ಸ್ಪರ್ಧೆಯಲ್ಲಿ ಆಳ್ವಾಸ್‌ ವಿದ್ಯಾರ್ಥಿಗಳು ಪ್ರಾಬಲ್ಯ ಮೆರೆದಿದ್ದಾರೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.