ಆಂತರಿಕ ಭದ್ರತೆಗೆ ಬಂಪರ್‌


Team Udayavani, Sep 28, 2017, 7:15 AM IST

Home-Minister-Rajnath-Singh.jpg

ಹೊಸದಿಲ್ಲಿ: ಭಾರತ ಮತ್ತು ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ಎನ್‌ಎಸ್‌ಸಿಎನ್‌-ಕಪ್ಲಾಂಗ್‌ ಬಣದ ಉಗ್ರರನ್ನು ನಿರ್ದಯವಾಗಿ ಸದೆ ಬಡಿದಿರುವಂತೆಯೇ, ದೇಶದ ಆಂತರಿಕ ಭದ್ರತೆಗೆ ಅಗತ್ಯವಾಗಿರುವ 25 ಸಾವಿರ ಕೋಟಿ ರೂ. ಮೊತ್ತದ ಯೋಜನೆಗೆ ಕೇಂದ್ರ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಈ ಕ್ರಮದಿಂದ ಕಾನೂನು ಸುವ್ಯವಸ್ಥೆ ಬಲಪಡಿಸಲು,  ಪೊಲೀಸ್‌ ವ್ಯವಸ್ಥೆಯ ಆಧುನೀಕರಣ ಸೇರಿದಂತೆ ಹಲವು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಈ ಯೋಜನೆ ನೆರವಾಗಲಿದೆ. 

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಭದ್ರತಾ ವ್ಯವಹಾರಗಳಿಗಾಗಿನ ಕೇಂದ್ರ ಸಂಪುಟ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪೊಲೀಸ್‌ ಪಡೆಗಳ ಆಧುನೀಕರಣ (ಎಂಪಿಎಫ್) ಅದನ್ನು ಜಾರಿ ಮಾಡಲಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ಆಂತರಿಕ ಭದ್ರತೆಗಾಗಿ 25,060 ಕೋಟಿ ರೂ. ಭಾರಿ ಮೊತ್ತವನ್ನು ನಿಗದಿ ಮಾಡಿರುವುದು ಇದೇ ಮೊದಲು. 2019-20ನೇ ವರ್ಷದ ವರೆಗೆ ಈ ಯೋಜನೆಯನ್ವಯ ಪೊಲೀಸ್‌ ಪಡೆಗಳ ಆಧುನೀಕರಣಕ್ಕೆ ಮೊತ್ತವನ್ನು ವಿನಿಯೋಗ ಮಾಡಲಾಗುತ್ತದೆ. ಕೇಂದ್ರ ಸರಕಾರ 18,636 ಕೋಟಿ ನೀಡಿದರೆ, ರಾಜ್ಯಗಳು 6,424 ಕೋಟಿ ರೂ. ಪಾಲು ನೀಡಬೇಕಾಗುತ್ತದೆ.

ಮಹಿಳೆಯರ ಸುರಕ್ಷತೆಗೆ ಆದ್ಯತೆ: ಪೊಲೀಸ್‌ ಇಲಾಖೆ ಅತ್ಯಾಧುನಿಕ ಆಯುಧಗಳು, ಮಹಿಳೆಯರಿಗೆ ರಕ್ಷಣೆ, ತುರ್ತು ಸಂದರ್ಭಗಳಲ್ಲಿ ಹೆಲಿಕಾಪ್ಟರ್‌ಗಳನ್ನು ಬಾಡಿಗೆಗೆ ಪಡೆಯುವುದು, ಪೊಲೀಸ್‌ ವೈರ್‌ಲೆಸ್‌ ವ್ಯವಸ್ಥೆ ಮೇಲ್ದರ್ಜೆಗೆ ಏರಿಸುವಿಕೆ, ರಾಷ್ಟ್ರೀಯ ಉಪಗ್ರಹ ಜಾಲ ವ್ಯವಸ್ಥೆ ಸೇರಿದಂತೆ ಹಲವು ವಿಶೇಷ ವ್ಯವಸ್ಥೆಗಳನ್ನು ಮಾಡಲು ಅದು ನೆರವಾಗಲಿದೆ.ಜಮ್ಮು ಮತ್ತು ಕಾಶ್ಮೀರ, ನಕ್ಸಲೀಯ ಸಮಸ್ಯೆ ಹೆಚ್ಚಾಗಿರುವ ರಾಜ್ಯಗಳಿಗೆ ವಿಶೇಷ ನೆರವು ರೂಪಿಸುವ ನಿಟ್ಟಿನಲ್ಲಿ 10, 132 ಕೋಟಿ ರೂ. ಮೀಸಲು ಇರಿಸಲಾಗಿದೆ. 100 ಕೋಟಿ ರೂ.ಗಳನ್ನು ಪೊಲೀಸ್‌ ಇಲಾಖೆಯ ಮೂಲ ಸೌಲಭ್ಯ ಮೇಲ್ದರ್ಜೆಗೆ ಏರಿಸುವಿಕೆ, ತರಬೇತಿ ಸಂಸ್ಥೆಗಳ ಸುಧಾರಣೆ, ತನಿಖೆ ಕೈಗೊಳ್ಳಲು ಬೇಕಾದ ವ್ಯವಸ್ಥೆಗಳನ್ನು ಪೂರೈಸಲು ಬಳಕೆ ಮಾಡಲಾಗುತ್ತದೆ. 

ವಿಶೇಷ ಯೋಜನೆ: ನಕ್ಸಲೀಯ ಪಿಡುಗು ಇರುವ 35 ಜಿಲ್ಲೆಗಳಿಗೆ 3 ಸಾವಿರ ಕೋಟಿ ರೂ. ಮೊತ್ತದ ವಿಶೇಷ ಯೋಜನೆಯನ್ನೂ ಆರಂಭಿಸಲು ಭದ್ರತಾ ಸಮಿತಿ ಒಪ್ಪಿಗೆ ನೀಡಿದೆ. ಇಂಥ ಕ್ರಮಗಳ ಮೂಲಕ ರಾಜ್ಯಗಳ ಪೊಲೀಸ್‌ ಇಲಾಖೆಗಳ ಬಲವರ್ಧನೆಗೆ ಕ್ರಮ ಕೈಗೊಳ್ಳಲು ಕೇಂದ್ರ ಉದ್ಯುಕ್ತವಾಗಿದೆ.

ಕಂಟೋನ್ಮೆಂಟ್‌ಗಳಲ್ಲಿ ಟವರ್‌ ಅನುಮತಿ 
ದೇಶಾದ್ಯಂತ ಮೊಬೈಲ್‌ ಸಂಪರ್ಕ ವೃದ್ಧಿಗಾಗಿ ಸೇನಾಪಡೆಗಳು ಹೆಚ್ಚಾಗಿರುವ ಕಂಟೋನ್ಮೆಂಟ್‌ ಪ್ರದೇಶಗಳಲ್ಲಿಯೂ ಟವರ್‌ಗಳನ್ನು ಸ್ಥಾಪಿಸಲು ಸರಕಾರ ಅನುಮತಿ ನೀಡಿದೆ. ಕೇಂದ್ರ ದೂರಸಂಪರ್ಕ ಸಚಿವ ರವಿಶಂಕರ ಪ್ರಸಾದ್‌ ಈ ಮಾಹಿತಿ ನೀಡಿದ್ದಾರೆ. ದೂರಸಂಪರ್ಕ ಕಂಪನಿಗಳು ಟವರ್‌ ಅಳವಡಿಸಲು ಸ್ಥಳಾವಕಾಶದ ಕೊರತೆ ಬಗ್ಗೆ ಪ್ರಸ್ತಾಪಿಸಿದ್ದ ಹಿನ್ನೆಲೆಯಲ್ಲಿ ಈಕ್ರಮ ಕೈಗೊಳ್ಳಲಾಗಿದೆ. 

ನಿವೃತ್ತಿ ವಯಸ್ಸು ಏರಿಕೆ: ಮತ್ತೂಂದು ಪ್ರಮುಖ ನಿರ್ಣಯದಲ್ಲಿ ಕೇಂದ್ರದ ಆಯುಷ್‌ ಇಲಾಖೆಯ ವೈದ್ಯರ ನಿವೃತ್ತಿ ವಯಸ್ಸನ್ನು 65ಕ್ಕೆ ಏರಿಸಲಾಗಿದೆ.

25,060: ಕೋಟಿ ರೂ. ಆಂತರಿಕ ಭದ್ರತೆಗೆ ಒದಗಿಸಲಾಗಿರುವ ಮೊತ್ತ
03ವರ್ಷ: 2017  -18 ರಿಂದ 18-19 ಯೋಜನೆಯ ಅವಧಿ
18,636: ಕೋಟಿ ರೂ. ಕೇಂದ್ರ ಸರಕಾರದ ಪಾಲು
6,42: 4 ಕೋಟಿ ರೂ. ರಾಜ್ಯ ಸರಕಾರಗಳ ಪಾಲು
100: ಕೋಟಿ ರೂ. ಪೊಲೀಸ್‌ ವ್ಯವಸ್ಥೆ ಅಭಿವೃದ್ಧಿಗೆ
3,000 : ಕೋಟಿ ರೂ. ನಕ್ಸಲ್‌ ಪೀಡಿತ 35 ಜಿಲ್ಲೆಗಳಿಗೆ ವಿಶೇಷ ಅನುದಾನ

ಸುದ್ದಿಗೋಷ್ಠಿಯಲ್ಲಿ ಗೃಹ ಸಚಿವ ರಾಜನಾಥ್‌ ಸಿಂಗ್‌ ವಾಚ್‌ ತೋರಿಸಿ ಕಾನೂನು ಸಚಿವ ರವಿಶಂಕರ ಪ್ರಸಾದ್‌ಗೆ ಎಷ್ಟು ಹೊತ್ತಿನ ಸುದ್ದಿಗೋಷ್ಠಿ ಎಂದು ಹೇಳುತ್ತಿರುವಂತಿದೆ.
 

ಟಾಪ್ ನ್ಯೂಸ್

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

needs 400 seats to avoid Babri lock to Mandir: PM Modi

Loksabha; ಮಂದಿರಕ್ಕೆ ಬಾಬರಿ ಲಾಕ್‌ ಬೀಳದಿರಲು 400 ಸೀಟು ಬೇಕು: ಪ್ರಧಾನಿ ಮೋದಿ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.