ಬರ್ತ್ ಡೇ ದಿನ ಜ್ಯೂಸ್ ಎಂದು ಆ್ಯಸಿಡ್ ಕುಡಿದು ಬಾಲಕರಿಬ್ಬರ ಸಾವು
Team Udayavani, Sep 28, 2017, 11:09 AM IST
ಬೆಂಗಳೂರು: ಜನ್ಮದಿನದ ಸಂಭ್ರಮದಲ್ಲಿದ್ದ ಬಾಲಕರಿಬ್ಬರು ಜ್ಯೂ ಸ್ ಎಂದು ಭಾವಿಸಿ ಆ್ಯಸಿಡ್ ಕುಡಿದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಗರದ ಅವೆನ್ಯೂ ರೋಡ್ ನ ಕಿಲಾರೆ ರಸ್ತೆಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಹುಟ್ಟು ಹಬ್ಬದ ಆಚರಣೆಯಲ್ಲಿದ್ದ ಆಭರಣ ತಯಾರಕ ಶಂಕರ್ ಸಿಂಗ್ ರ ಪುತ್ರ ಸಾಯಿಲ್ ಸಿಂಗ್(9) ಮತ್ತು ಪಕ್ಕದ ಮನೆಯ ಆರ್ಯನ್ ಸಿಂಗ್(8) ಆಟವಾಡುತ್ತ ಸಾಫ್ಟ್ ಡ್ರಿಂಕ್ಸ್ ಬಾಟಲಿಯಲ್ಲಿದ್ದ ಸಲ್ಫ್ಯೂರಿಕ್ ಆ್ಯಸಿಡನ್ನು ಕುಡಿದೇ ಬಿಟ್ಟಿದ್ದಾರೆ. ಕೂಡಲೇ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲು ಯತ್ನಿಸಲಾಯಿತಾದರೂ ಇಬ್ಬರೂ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ .
ಚಿನ್ನವನ್ನು ಕರಗಿಸಲೆಂದು ಆ್ಯಸಿಡನ್ನು ತಂದಿಡಲಾಗಿತ್ತು ಎಂದು ತಿಳಿದು ಬಂದಿದೆ. ಬಾಲಕರಿಬ್ಬರ ಮನೆಯವರ ಆಕ್ರಂದನ ಮುಗಿಲು ಮುಟ್ಟಿತ್ತು.
ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್ಗಳು ಸಕ್ಸಸ್
KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ
Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ
Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ
Bengaluru: ಠಾಣೆಯಲ್ಲೇ ಮಹಿಳಾ ಪಿಎಸ್ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ