ಮನೆಗೆ ನುಗ್ಗಿ ಬಿಎಸ್ಎಫ್ ಯೋಧನ ಕೊಂದ ಉಗ್ರರು
Team Udayavani, Sep 29, 2017, 7:50 AM IST
ಶ್ರೀನಗರ: ರಜೆ ಮೇಲೆ ಮನೆಗೆ ಬಂದಿದ್ದ ಬಿಎಸ್ಎಫ್ ಯೋಧನನ್ನು ಉಗ್ರಗಾಮಿಗಳು ಮನೆಗೆ ನುಗ್ಗಿ ಗುಂಡಿಕ್ಕಿ ಕೊಂದಿರುವ ಘಟನೆ ಬುಧವಾರ ರಾತ್ರಿ ಉತ್ತರ ಕಾಶ್ಮೀರದಲ್ಲಿ ನಡೆದಿದೆ.
ಬಿಎಸ್ಎಫ್ ಕಾನ್ಸ್ಟೆಬಲ್ ರಮೀಜ್ ಅಹ್ಮದ್ ಪರ್ರಾಯ್ (28) ಹುತಾತ್ಮ ಯೋಧ. ಘಟನೆ ನಡೆದ ಹಿಂದಿನ ದಿನ ರಾತ್ರಿ ಸ್ಥಳೀಯ ಪೊಲೀಸರು ಪರ್ರಾಯ್ ಮೊಹಲ್ಲಾದಲ್ಲಿ ಉಗ್ರಗಾಮಿಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದು, ಇದರಲ್ಲಿ ರಮೀಜ್ ಕೂಡ ಪಾಲ್ಗೊಂಡಿದ್ದರು. ಸೇಡು ತೀರಿಸಿಕೊಳ್ಳಲು ಉಗ್ರರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ತನ್ನ ಇಬ್ಬರು ತಮ್ಮಂದಿರಿಗೆ ಕೆಲಸ ಹುಡುಕಿ ಕೊಡಲೆಂದು ಕರ್ತವ್ಯಕ್ಕೆ ರಜೆ ಹಾಕಿ ಅ.26ರಂದು ಗ್ರಾಮಕ್ಕೆ ಬಂದಿದ್ದ ರಮೀಜ್ ಅಹ್ಮದ್, ಕುಟುಂಬದ ಏಕೈಕ ಆಧಾರವಾಗಿದ್ದರು. ಬುಧವಾರ ರಾತ್ರಿ ರಮೀಜ್ ತನ್ನ ಸೋದರರು ಹಾಗೂ ತಂದೆ ಜತೆ ಸಂಬಂಧಿಯ ಮನೆಗೆ ತೆರಳಿದ್ದು, ರಾತ್ರಿ 9.25ರ ವೇಳೆಗೆ ಮನೆಗೆ ನುಗ್ಗಿದ ಇಬ್ಬರು ಉಗ್ರರು ಏಕಾಏಕಿ ಗುಂಡಿನ ದಾಳಿ ಆರಂಭಿಸಿದ್ದಾರೆ. ಸುಮಾರು ಅರ್ಧ ಗಂಟೆ ಕಾಲ ಉಗ್ರರ ವಿರುದ್ಧ ವೀರಾವೇಷದಿಂದ ಹೋರಾಡಿದ್ದು, ಕಡೆಗೆ ಉಗ್ರರು ಅವರನ್ನು ಗನ್ಪಾಯಿಂಟ್ನಲ್ಲಿ ಶೂಟ್ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ