ಬುಲೆಟ್ ರೈಲಿಗೆ ಹಣವಿದೆ, ಮೇಲ್ಸೇತುವೆ ರಿಪೇರಿಗೆ ಹಣವಿಲ್ವಾ?ಶಿವಸೇನಾ
Team Udayavani, Sep 29, 2017, 8:59 PM IST
ಮುಂಬೈ: ಮುಂಬಯಿಯ ಎಲ್ಫಿನ್ ಸ್ಟನ್ ರೈಲ್ವೆ ನಿಲ್ದಾಣದ ಪಾದಚಾರಿ ಮೇಲ್ಸೇತುವೆಯಲ್ಲಿ ಸಂಭವಿಸಿದ ಕಾಲ್ತುಳಿತದ ಪ್ರಕರಣದಲ್ಲಿ 22ಕ್ಕೂ ಅಧಿಕ ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ಮೈತ್ರಿಕೂಟದ ಶಿವಸೇನಾ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಬಡಪ್ರಯಾಣಿಕರು ಉಪಯೋಗಿಸುವ ಸೇತುವೆಗಾಗಿ ವಿನಿಯೋಗಿಸಲು ಕೇಂದ್ರ ಸರ್ಕಾರದ ಬಳಿ ಹಣ ಇಲ್ಲ, ಆದರೆ ಬುಲೆಟ್ ರೈಲುಗಳಿಗಾಗಿ ಒಂದೇ ದಿನದಲ್ಲಿ 30 ಸಾವಿರ ಕೋಟಿ ರೂಪಾಯಿ ಕೊಡುತ್ತದೆ ಎಂದು ತರಾಟೆಗೆ ತೆಗೆದುಕೊಂಡಿದೆ.
ಶಿವಸೇನಾ ಸಂಸದ ಸಂಜಯ್ ರಾವತ್ ಪ್ರತಿಕ್ರಿಯೆ ನೀಡುತ್ತಾ, ಮೇಲ್ಸೇತುವೆ ದುರಸ್ತಿಗಾಗಿ ಶಿವಸೇನಾ ಮುಖಂಡರು ರೈಲ್ವೆ ಸಚಿವಾಲಯಕ್ಕೆ ಪತ್ರ ಮುಖೇನ ಮನವಿ ಮಾಡಿಕೊಂಡಿದ್ದರು. ನಮ್ಮ ಸಂಸದರು ಎಷ್ಟು ಬಾರಿ ರೈಲ್ವೆ ಸಚಿವಾಲಯಕ್ಕೆ ಹೋಗಿಲ್ಲ, ನಿಮ್ಮ ಬಳಿ ಬುಲೆಟ್ ರೈಲುಗಳಿಗೆ ಕೊಡಲು ಹಣವಿದೆ, ಆದರೆ ಮೇಲ್ಸೇತುವೆ ರಿಪೇರಿ ಮಾಡಲು ಹಣವಿಲ್ಲ ಎಂದು ಹೇಳಿದರು.
ಎಡೆಬಿಡದೆ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ಹಾಗೂ ಸೇತುವೆ ಕುಸಿಯುತ್ತಿದೆ ಎಂಬ ವದಂತಿಯಿಂದಾಗಿ ಶುಕ್ರವಾರ ಬೆಳಗ್ಗೆ ಎಲ್ಫಿನ್ ಸ್ಟನ್ ರೈಲ್ವೆ ನಿಲ್ದಾಣದ ಪಾದಚಾರಿ ಮೇಲ್ಸೇತುವೆಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 22ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!