ಪಾಲಿಕೆಯಲ್ಲಿನ್ನು ಸಂಪತ್‌ ರಾಜ್‌


Team Udayavani, Sep 30, 2017, 10:14 AM IST

blore.jpg

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ 51ನೇ ಮೇಯರ್‌ ಆಗಿ ಕಾಂಗ್ರೆಸ್‌ನ ಸಂಪತ್‌ ರಾಜ್‌ ಹಾಗೂ 50ನೇ ಉಪಮೇಯರ್‌ ಆಗಿ ಜೆಡಿಎಸ್‌ನ ಪದ್ಮಾವತಿ ನರಸಿಂಹಮೂರ್ತಿ ಆಯ್ಕೆಯಾಗಿದ್ದಾರೆ.

ಕೆಂಪೇಗೌಡ ಪೌರ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ದೇವರಜೀವನಹಳ್ಳಿ ವಾರ್ಡ್‌ನ ಸಂಪತ್‌ರಾಜ್‌, ರಾಜಗೋಪಾಲ ನಗರ ವಾರ್ಡ್‌ನ ಪದ್ಮಾವತಿ ನರಸಿಂಹಮೂರ್ತಿ ಅವರು ಮೇಯರ್‌-ಉಪ ಮೇಯರ್‌ ಆಗಿ ಆಯ್ಕೆಗೊಂಡರು.

ಸಂಪತ್‌ರಾಜ್‌ 139 ಮತಗಳು ಪಡೆದರೆ ಪದ್ಮಾವತಿ ನರಸಿಂಹಮೂರ್ತಿ ಅವರಿಗೆ 138 ಮತ ಪಡೆದರು. ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯ ಪಿ.ಆರ್‌.ರಮೇಶ್‌ ಅವರ ಮತ ಉಪ ಮೇಯರ್‌ಗೆ ಲಭ್ಯವಾಗಲಿಲ್ಲ. ಹೀಗಾಗಿ, ಒಂದು ಮತ ಕಡಿಮೆ ಯಾಯಿತು. ವಿಪ್‌ ಕೊಟ್ಟಿದ್ದರೂ ಕಾಂಗ್ರೆಸ್‌ನ ವಿಧಾನಪರಿಷತ್‌ ಸದಸ್ಯ ರಿಜ್ವಾನ್‌ ಹರ್ಷದ್‌ ಗೈರು ಹಾಜರಾಗಿದ್ದರು.

ಮೇಯರ್‌-ಉಪ ಮೇಯರ್‌ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ್ದ ಬಿಜೆಪಿ ಸದಸ್ಯರು ಕೊನೇ ಕ್ಷಣದಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೆ ಸಭಾತ್ಯಾಗ ಮಾಡಿದರು. ಬಿಜೆಪಿ ವತಿಯಿಂದ ಮೇಯರ್‌ ಸ್ಥಾನಕ್ಕೆ ಸ್ಪರ್ಧಿಸಿದ್ದ ಮುನಿಸ್ವಾಮಿ ಹಾಗೂ ಉಪ ಮೇಯರ್‌ ಸ್ಥಾನಕ್ಕೆ ಮಮತಾ ವಾಸುದೇವ್‌ ನಾಮಪತ್ರ ಸಲ್ಲಿಸಿದರೂ ಚುನಾವಣೆ ಪ್ರಕ್ರಿಯೆ ವೇಳೆ ಸಭಾಂಗಣದಲ್ಲಿ ಇರಲಿಲ್ಲ.

ರಾಜ್ಯಸಭೆ ಸದಸ್ಯರಾದ ಆಸ್ಕರ್‌ ಫ‌ರ್ನಾಂಡಿಸ್‌, ಜೈರಾಂ ರಮೇಶ್‌, ರೆಹಮಾನ್‌ ಖಾನ್‌, ಸಂಸದರಾದ ವೀರಪ್ಪಮೊಯಿಲಿ, ಡಿ.ಕೆ.ಸುರೇಶ್‌, ಸಚಿವರಾದ ಕೆ.ಜೆ. ಜಾರ್ಜ್‌, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಎಚ್‌. ಎಂ.ರೇವಣ್ಣ, ಸೀತಾರಾಂ, ದಿನೇಶ್‌ಗುಂಡೂರಾವ್‌ ಮತದಾನದಲ್ಲಿ ಪಾಲ್ಗೊಂಡಿದ್ದ ಪ್ರಮುಖರು. ಬಿಜೆಪಿಯ ರಾಜ್ಯಸಭೆ ಸದಸ್ಯರಾದ ನಿರ್ಮಲ ಸೀತಾರಾಮನ್‌, ಕೇಂದ್ರ ಸಚಿವರಾದ ಅನಂತಕುಮಾರ್‌, ಸದಾನಂದಗೌಡ ಗೈರು ಹಾಜರಾಗಿದ್ದರು.

ಭತ್ಯೆ ಬೇರೆಡೆ, ಮತದಾನ ಇಲ್ಲಿ!: ಚುನಾವಣೆ ಪ್ರಕ್ರಿಯೆ ಆರಂಭ ವಾ ಗು ತ್ತಿದ್ದಂತೆ ಮೇಯರ್‌ ಸ್ಥಾನಕ್ಕೆ ಸ್ಪರ್ಧೆ ಮಾಡಿದ್ದ ಕಾಂಗ್ರೆಸ್‌ನ ಸಂಪತ್‌ರಾಜ್‌ ಪರ ಇರುವವರು ಕೈ ಎತ್ತಿ ಎಂದಾಗ, ಬಿಜೆಪಿ ಸದಸ್ಯರು ಚುನಾವಣೆ ಕಾನೂನು ಬಾಹಿರ. ಬೇರೆಡೆ ಪ್ರಯಾಣ ಭತ್ಯೆ ಪಡೆಯುವವರು ಇಲ್ಲಿ ಮತದಾನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಈ ವೇಳೆ ಕಾಂಗ್ರೆಸ್‌ ಮತ್ತು ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದು, ಕೊನೆಗೆ ಬಿಜೆಪಿ ಸದಸ್ಯರು ಚುನಾವಣೆ ಬಹಿಷ್ಕರಿಸಿ ಸಭಾತ್ಯಾಗ ಮಾಡಿದರು.

ಬಿಜೆಪಿ ಸದಸ್ಯರು ನಾಮಪತ್ರ ಹಿಂಪಡೆಯದ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತೆ ಎಂ.ವಿ.ಜಯಂತಿ ಯವರು ನಿಗಿದಿತ ವೇಳಾಪಟ್ಟಿಯಂತೆ ಚುನಾವಣೆ ಪ್ರಕ್ರಿಯೆ ಮುಂದುವರಿಸಿ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಿದರು. ನೂತನ ಮೇಯರ್‌ ಹಾಗೂ ಉಪ ಮೇಯರ್‌ಗಳು ಸೆ.28ರಿಂದ 2018ರ ಸೆ.27ರವರೆಗೆ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಹೇಳಿದರು.

ಈ ಮಧ್ಯೆ, ಸಚಿವರಾದ ರಾಮಲಿಂಗಾರೆಡ್ಡಿ, ಕೆ.ಜೆ.ಜಾರ್ಜ್‌ ಅವರು, ಬಿಜೆಪಿ ಅಭ್ಯರ್ಥಿಗಳ ನಾಮಪತ್ರಗಳನ್ನು ಹಿಂಪಡೆದು ಅವಿರೋಧ ಆಯ್ಕೆಗೆ ಸಹಕರಿಸುವಂತೆ ಮನವಿ ಮಾಡಿದರಾದರೂ ಬಿಜೆಪಿ ನಾಯಕರು ಒಪ್ಪಲಿಲ್ಲ. ಚುನಾವಣೆ ನಿಯಮ ಬಾಹಿರವಾಗಿ ನಡೆಯುತ್ತಿದೆ ಎಂದು ಆರೋಪಿಸಿ ಸಭಾತ್ಯಾಗ ಮಾಡಿದ ಬಿಜೆಪಿ ಸದಸ್ಯರು ಪ್ರವೇಶ ದ್ವಾರದ ಬಳಿ ಕುಳಿತಿದ್ದ ಸಂಪತ್‌ ರಾಜ್‌ ಅವರ ಕೈಕುಲುಕಿ ಶುಭಾಶಯ ತಿಳಿಸಿದ್ದು ವಿಶೇಷವಾಗಿತ್ತು

ಟಾಪ್ ನ್ಯೂಸ್

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Prajwal Revanna Case; ರೆಕಾರ್ಡ್ ಸ್ಪೀಡ್‌ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು

Belgaum Lok Sabha Constituency: ಅನುಭವದ ರಾಜಕಾರಣಕ್ಕೆ ಯುವ ಮುಖದ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಅರವಿಂದ್‌ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು? ಸುಪ್ರೀಂ ಸುಳಿವು

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.