ಚಿಣ್ಣರಬಿಂಬ ಮೀರಾರೋಡ್‌: ಸಾಂಸ್ಕೃತಿಕ ಉತ್ಸವ ಸಮಾರೋಪ


Team Udayavani, Sep 30, 2017, 4:55 PM IST

655.jpg

ಮುಂಬಯಿ: ಜಾತಿಯ ಪರಿಧಿ ಯನ್ನು ಮೀರಿ ಎಲ್ಲಾ ಸಮಾಜದ ಮಕ್ಕಳಿಗೆ ಸಮಾನ ರೀತಿಯ ಸಂಸ್ಕೃತಿ-ಸಂಸ್ಕಾರಗಳನ್ನು ನೀಡುತ್ತಿರುವ ಪ್ರಕಾಶ್‌ ಭಂಡಾರಿ ಅವರ ನಾಯಕತ್ವದ ಚಿಣ್ಣರ ಬಿಂಬವು ಮುಂಬಯಿ ಹಾಗೂ ಇತರ ಉಪನಗರಗಳಲ್ಲಿ ಹರಡಿ ನಿಂತಿರುವುದು ಅಭಿನಂದನೀಯ. ಮಕ್ಕಳು ಕೇವಲ ವಿದ್ಯೆಯನ್ನು ಪಡೆದಾಕ್ಷಣ ಎಲ್ಲವನ್ನೂ ತಿಳಿದಂತಾಗುವುದಿಲ್ಲ. ವಿದ್ಯೆ ಯೊಂದಿಗೆ ಸಂಸ್ಕೃತಿ, ಸಂಸ್ಕಾರಗಳು ಜೀವನದಲ್ಲಿ ಅಳವಡಿಕೆಗೊಂಡಾಗ ಮಾತ್ರ ಜೀವನ ಸಾರ್ಥಕವಾಗುತ್ತದೆ. ವಿದ್ಯೆಯಿಂದ ವಿನಯ ಪ್ರಾಪ್ತಿಯಾದರೆ, ಉತ್ತಮ ಸಂಸ್ಕೃತಿ, ಸಂಸ್ಕಾರಗಳಿಂದ ಸಮಾಜ ಮತ್ತು ದೇಶ ಬಲಿಷ್ಠಗೊಳ್ಳುತ್ತದೆ ಎಂದು ಬಂಟರ ಸಂಘ ಮುಂಬಯಿ ಪಶ್ಚಿಮ ವಲಯದ ಸಮನ್ವಯಕ, ಬೊರಿವಲಿ ಉದ್ಯಮಿ ಮುಂಡಪ್ಪ ಎಸ್‌. ಪಯ್ಯಡೆ  ನುಡಿದರು.

ಸೆ. 24 ರಂದು ಭಾಯಂದರ್‌ ಪೂರ್ವದ ಮದರ್‌ ಮೇರೀಸ್‌ ಇಂಗ್ಲೀಷ್‌ ಹೈಸ್ಕೂಲ್‌ ಸಭಾಗೃಹದಲ್ಲಿ ನಡೆದ ಚಿಣ್ಣರ ಬಿಂಬ ಮೀರಾರೋಡ್‌-ಭಾಯಂದರ್‌- ವಸಾಯಿ -ನಲಸೋಪರ ಶಿಬಿರಗಳ ಮಕ್ಕಳ ವಾರ್ಷಿಕ ಸಾಂಸ್ಕೃತಿಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಚಿಣ್ಣರ ಬಿಂಬದ ಮಕ್ಕಳ ಪ್ರತಿಯೊಂದು ಕಾರ್ಯಕ್ರಮಗಳನ್ನು ಸಮೀಪದಿಂದ ಬಲ್ಲವನಾಗಿದ್ದೇನೆ. ಇಂತಹ ಶಿಬಿರಗಳಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಿ, ತುಳು-ಕನ್ನಡಿಗರ ಮಕ್ಕಳು ಸಂಸ್ಕೃತಿ-ಸಂಸ್ಕಾರಗಳೊಂದಿಗೆ ಅರಳಬೇಕು ಎಂದು ನುಡಿದು, ಮಕ್ಕಳ ಮುಂದಿನ ಭವಿಷ್ಯಕ್ಕೆ ಶುಭಹಾರೈಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮೊಗವೀರ ಮಹಾಜನ ಸೇವಾ ಸಂಘದ ಬಗ್ವಾಡಿ ಇದರ ಮಾಜಿ ಅಧ್ಯಕ್ಷ ಗೋಪಾಲ್‌ ಪುತ್ರನ್‌ ಮಾತನಾಡಿ, ನಮ್ಮ ಭಾಷೆಯಲ್ಲೇ ನಾಡಿನ ಸಂಸ್ಕೃತಿಯಿದೆ. ಇಂದಿನ ಮಕ್ಕಳಿಗೆ ಭಾಷೆ ಮತ್ತು ಸಂಸ್ಕಾರದ ಬಗ್ಗೆ ಅರಿವು ಮೂಡಿಸುವ ಉದ್ಧೇಶದಿಂದ ಹುಟ್ಟಿಕೊಂಡ ಚಿಣ್ಣರ ಬಿಂಬದ ಸೇವಾ ಕಾರ್ಯಗಳಿಂದ ಅಪಾರ ಸಂಖ್ಯೆಯಲ್ಲಿ ಚಿಣ್ಣರು ಉತ್ತಮ ಬದುಕನ್ನು ರೂಪಿಸಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ. ಪ್ರಕಾಶ್‌ ಭಂಡಾರಿ ಅವರ ತಂಡದ ಸಾಧನೆ ಶ್ಲಾಘನೀಯವಾಗಿದೆ ಎಂದರು.

ಅತಿಥಿಯಾಗಿ ಪಾಲ್ಗೊಂಡ ಮೀರಾ-ಡಾಹಣೂ ಬಂಟ್ಸ್‌ನ ಗೌರವಾಧ್ಯಕ್ಷ ವಿರಾರ್‌ ಶಂಕರ್‌ ಶೆಟ್ಟಿ ಅವರು ಮಾತನಾಡಿ, ಚಿಣ್ಣರ ಬಿಂಬದ ಶಿಬಿರದಲ್ಲಿ ಎಲ್ಲಾ ಪಾಲಕರು ಮಕ್ಕಳನ್ನು ಬಲವಂತವಾಗಿ ಸೇರಿಸಬೇಕು. ಚಿಣ್ಣರ ಬಿಂಬದಲ್ಲಿ ಭಾಷೆ ಮತ್ತು ಸಂಸ್ಕಾರದ ಅರಿವು ಮೂಡಿಸುತ್ತಾರೆ. ಇಲ್ಲಿ ಕಲಿತ ಮಕ್ಕಳು ದೇಶಕ್ಕೆ ಮಾದರಿಯಾಗುತ್ತಾರೆ ಎಂದು ನುಡಿದರು.

ಯುನೈಟೆಡ್‌ ರಬ್ಬರ್‌ ಇಂಡಸ್ಟಿÅàಯಲ್‌ ಇದರ ಮಾಲಕ ಅಜಿತ್‌ ರೈ ಅವರು ಮಾತನಾಡಿ, ಇಂದಿನ ಮಕ್ಕಳಿಗೆ ವಿಜ್ಞಾನದ ಬಗ್ಗೆ ಅರಿವು ಮೂಡಿಸಬೇಕು. ಬದುಕಿನಲ್ಲಿ ಯಶಸ್ವಿಗೆ ವಿಜ್ಞಾನ ಕೂಡ ಸಹಕಾರಿಯಾಗುತ್ತದೆ. ಪ್ರಕಾಶ್‌ ಭಂಡಾರಿ ಅವರು ಮಕ್ಕಳಿಗೆ ಶಿಸ್ತನಉನ ನೀಡುತ್ತ ಉತ್ತಮ ಪ್ರಜೆಗಳನ್ನಾಗಿ ರೂಪಿಸುತ್ತಾರೆ. ಅವರಿಗೆ ಅಭಿನಂದನೆಗಳು ಎಂದು ಹೇಳಿ ಮಕ್ಕಳಿಗೆ ಶುಭಹಾರೈಸಿದರು.

ಮೀರಾರೋಡ್‌ ಸಾಯಿಬಾಬಾ ಆಸ್ಪತ್ರೆಯ ಮುಖ್ಯ ಆಡಳಿತ ಅಧಿಕಾರಿ ಡಾ| ಎನ್‌. ಅಂಬರೀಷ್‌ ಹೆಗ್ಡೆ ಅವರು ಮಾತನಾಡಿ, ಚಿಣ್ಣರಿಗೆ ಸೂಕ್ತ ಸಲಹೆಗಳನ್ನು ನೀಡುತ್ತಿರುವ ಚಿಣ್ಣರ ಬಿಂಬದ ಕಾರ್ಯ ಅಭಿನಂದನೀಯ. ಸಂಸ್ಥೆ ರಾಷ್ಟ್ರಮಟ್ಟದಲ್ಲಿ ಬೆಳೆಯಲು ಮಕ್ಕಳು  ತಾಳ್ಮೆ ಮತ್ತು ಶಿಸ್ತನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಚಿಣ್ಣರ ಬಿಂಬದ ರೂವಾರಿ ಪ್ರಕಾಶ್‌ ಭಂಡಾರಿ ಅವರು, ಚಿಣ್ಣರ ಬಿಂಬದ ಚಿಣ್ಣರು ಉತ್ತಮವಾಗಿ ಬೆಳೆಯಲು  ಅವರ ಪಾಲಕರ ಶ್ರಮ ಅಪಾರವಾಗಿದೆ. ನಲಸೋಪರ ಮತ್ತು ವಿರಾರ್‌ನಲ್ಲಿ ಶಿಬಿರ ಮತ್ತೆ ಪ್ರಾರಂಭವಾಗಲಿದೆ. ಇದರ ಸದುಪಯೋಗವನ್ನು ಮಕ್ಕಳು ಪಡೆದುಕೊಳ್ಳಬೇಕು ಎಂದರು.

ಸಮಾರಂಭದಲ್ಲಿ ಮೀರಾ- ಭಾಯಂದರ್‌ ಮಹಾನಗರ ಪಾಲಿಕೆಗೆ ನಗರ ಸೇವಕರಾಗಿ ಆಯ್ಕೆಗೊಂಡ ಹೊಟೇಲ್‌ ಉದ್ಯಮಿ, ಮೀರಾ-ಡಹಾಣೂ ಬಂಟ್ಸ್‌ನ ಅಧ್ಯಕ್ಷ ಅರವಿಂದ ಎ. ಶೆಟ್ಟಿ ಅವರನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಗೌರವಿಸಿ ಸಮ್ಮಾನಿಸಲಾಯಿತು. ಆಶ್ರಿತಾ ಕೊಠಾರಿ, ಹಸ್ತಾ ಶೆಟ್ಟಿ, ಸುವಿದಾ ಶೆಟ್ಟಿ ಮತ್ತು ಶ್ರೀ ರಕ್ಷಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ದಿನಪೂರ್ತಿ ನಡೆದ ಶಿಬಿರದಲ್ಲಿ ಮಕ್ಕಳಿಂದ ಸಾಂಸ್ಕೃತಿಕ ಸ್ಪರ್ಧೆ ನಡೆಯಿತು. ವಿಜೇತ ಸ್ಪರ್ಧಿಗಳಿಗೆ ಗಣ್ಯರು ಬಹುಮಾನ ವಿತರಿಸಿ ಶುಭಹಾರೈಸಿದರು. 

ಮಕ್ಕಳ ಸಾಂಸ್ಕೃತಿಕ ಉತ್ಸವದ ನಡುವೆ ಪಾಲಕರಿಗೆ ಇಂದಿನ ಗಂಡಸರು ಮನೆಯಲ್ಲಿ ಕೆಲಸ ಮಾಡಬೇಕೋ ಬೇಡವೋ ಎಂಬ ವಿಷಯದ ಮೇಲೆ ಚರ್ಚಾ ಕಾರ್ಯಕ್ರಮ ನಡೆಯಿತು. ಚರ್ಚಾ ಕೂಟವನ್ನು ಅಶೋಕ್‌ ಪಕ್ಕಳ ಅವರು ನಡೆಸಿಕೊಟ್ಟರು.

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.