ಜಿಎಸ್‌ಟಿ ಪರಿಷ್ಕರಣೆ ಸಕಾಲಿಕ ನಡೆ


Team Udayavani, Oct 3, 2017, 12:39 PM IST

7.jpg

ಒಂದು ದೇಶ ಒಂದು ತೆರಿಗೆ ಎಂಬ ಧ್ಯೇಯವಾಕ್ಯದೊಂದಿಗೆ ಕಳೆದ ಆಗಸ್ಟ್‌ 1ರಿಂದ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ ಪದ್ಧತಿ ದೇಶದ ಆರ್ಥಿಕತೆ ಸುಸ್ಥಿರವಾಗಲು ಸಹಕಾರಿ ಎನ್ನುವುದು ಎರಡು ತಿಂಗಳಲ್ಲೇ ಸ್ಪಷ್ಟವಾಗಿದೆ. ಹೊಸ ತೆರಿಗೆ ಪದ್ಧತಿಯನ್ನು ಜಾರಿಗೊಳಿಸುವಾಗ ಆರಂಭಿಕ ಹಂತದಲ್ಲಿ ಕೆಲವು ಸಮಸ್ಯೆಗಳು ಎದುರಾಗುವುದು ಸಹಜ.

ಜನರಿಗೆ ಮತ್ತು ಅಧಿಕಾರಿಗಳಿಗೆ ಹೊಸ ತೆರಿಗೆ ಪದ್ಧತಿಯ ಕುರಿತು ಸಾಕಷ್ಟು ಅನುಭವ ಇಲ್ಲದಿರುವುದು ಮತ್ತು ಅದಕ್ಕೆ ಹೊಂದಿಕೊಳ್ಳಲು ಸಮಯಾವಕಾಶದ ಅಗತ್ಯವಿರುವುದರಿಂದ ಸಮಸ್ಯೆಗಳಾಗುತ್ತವೆ. ಹೀಗಾಗಿ ಈಗಾಗಲೇ ಜಿಎಸ್‌ಟಿ ಕುರಿತು ಷರಾ ಬರೆಯುವುದು ಸರಿಯಲ್ಲ. ಆದರೆ ಜಿಎಸ್‌ಟಿ ಜಾರಿಯಾದ ಬಳಿಕ ತೆರಿಗೆ ಸಂಗ್ರಹದಲ್ಲಿ ಗಣನೀಯ ಹೆಚ್ಚಳವಾಗಿದೆ. ತೆರಿಗೆ ಕಳ್ಳತನ ಅಸಾಧ್ಯವಾಗಿರುವುದರಿಂದ ವ್ಯಾಪಾರ ವಹಿವಾಟುಗಳಲ್ಲಿ ಪ್ರಾಮಾಣಿಕತೆ ಹೆಚ್ಚುತ್ತಿದೆ. ಕೆಲವು ವಸ್ತುಗಳು ಬೆಲೆಗಳಲ್ಲಿ ಏರುಪೇರಾಗಿದ್ದರೂ ಜನಸಾಮಾನ್ಯರಿಗೆ ಹೊರೆಯಾಗುವಂತಹ ಬದಲಾವಣೆಗಳು ಆಗಿಲ್ಲ ಎನ್ನುವುದು ಗಮನಾರ್ಹ ಅಂಶ. ಪ್ರಸಕ್ತ ಜಿಎಸ್‌ಟಿಯಲ್ಲಿ ಶೇ.5, 12, 18 ಮತ್ತು 28 ಎಂಬ ನಾಲ್ಕು ಹಂತದ ಶ್ರೇಣಿಗಳಿವೆ. ಸರಕು ಮತ್ತು ಸೇವೆಗಳ ಬಳಕೆಯ ಮತ್ತು ಮೌಲ್ಯವನ್ನು ಹೊಂದಿಕೊಂಡು ತೆರಿಗೆ ಶ್ರೇಣಿಗಳು ಅನ್ವಯವಾಗುತ್ತವೆ. ಇವಲ್ಲದೆ ಶೂನ್ಯ ತೆರಿಗೆ ಶ್ರೇಣಿ ಎಂಬ ಇನ್ನೊಂದು ಹಂತವೂ ಇದೆ. ಶೂನ್ಯ ಶ್ರೇಣಿಯಲ್ಲಿ ಹೆಚ್ಚಿನೆಲ್ಲ ಆಹಾರ ವಸ್ತುಗಳು ಮತ್ತು ಅಗತ್ಯ ಸೇವೆಗಳು ಬರುತ್ತವೆ.

ನಾಲ್ಕು ತೆರಿಗೆ ಶ್ರೇಣಿ ಅತ್ಯಂತ ಪ್ರಗತಿಪರ ಎಂದು ಆರ್ಥಿಕ ತಜ್ಞರಿಂದ ಪ್ರಶಂಸೆಯನ್ನೂ ಗಳಿಸಿಕೊಂಡಿದೆ. ಇದೀಗ ತೆರಿಗೆ ಶ್ರೇಣಿಯನ್ನು ಇನ್ನಷ್ಟು ಕಡಿತಗೊಳಿಸುವ ಸೂಚನೆ ಯೊಂದು ಕೇಂದ್ರದಿಂದ ಸಿಕ್ಕಿದೆ. ರವಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಹಣಕಾಸು ಸಚಿವ ಅರುಣ್‌ ಜೇಟ್ಲಿ ತೆರಿಗೆ ಸಂಗ್ರಹ ಇದೇ ರೀತಿ ಸುಸೂತ್ರವಾಗಿ ಮುಂದುವರಿದರೆ ತೆರಿಗೆ ಶ್ರೇಣಿಯನ್ನು ಕಡಿತಗೊಳಿಸಬಹುದು ಎಂದು ಹೇಳಿರುವುದು ಹಲವು ನಿರೀಕ್ಷೆಗಳು ಗರಿಗೆದರುವಂತೆ ಮಾಡಿದೆ. ತೆರಿಗೆ ಶ್ರೇಣಿ ಕಡಿತಗೊಂಡರೆ ಸಣ್ಣ ತೆರಿಗೆದಾರರ ಮೇಲಿನ ತೆರಿಗೆ ಹೊರೆ ಕಡಿಮೆಯಾಗುತ್ತದೆ. ಇದು ಕೆಳಹಂತದ ಆರ್ಥಿಕ ಚಟುವಟಿಕೆಗಳು ಪುನಶ್ಚೇತನಗೊಳ್ಳಲು ನೆರವಾಗುತ್ತದೆ.

ಜಿಎಸ್‌ಟಿಯಿಂದ ಹೆಚ್ಚು ಸಮಸ್ಯೆಯಾಗಿರುವುದೇ ಸಣ್ಣ ಪ್ರಮಾಣದ ವಹಿವಾಟು ನಡೆಸುವವರಿಗೆ. 20 ಲ. ರೂ. ವಾರ್ಷಿಕ ವಹಿವಾಟಿಗೆ ಜಿಎಸ್‌ಟಿ ಅನ್ವಯಿಸುವುದಿಲ್ಲವಾದರೂ ಈ ಗಡಿಯ ಆಸುಪಾಸಿನಲ್ಲಿರುವವರಿಗೆ ಹೊಸ ತೆರಿಗೆ ಪದ್ಧತಿ ಗೊಂದಲವುಂಟು ಮಾಡಿದೆ. ಈ ಗೊಂದಲಗಳು ನಿವಾರಣೆಯಾಗದೆ ಕೆಳಹಂತದ ಆರ್ಥಿಕ ಚಟುವಟಿಕೆಗಳು ಚೇತರಿಸಿಕೊಳ್ಳುವುದು ಅಸಾಧ್ಯ. ಮುಖ್ಯವಾಗಿ ಮಧ್ಯಮ ವರ್ಗದ ಉತ್ಪಾದಕರು, ರಫ್ತುದಾರರು, ವ್ಯಾಪಾರಿಗಳು ಹಾಗೂ ಇನ್ನಿತರ ಉದ್ಯಮಿಗಳಿಗೆ ಜಿಎಸ್‌ಟಿ ಹೊರೆಯಾಗಿದೆ.  ಜಿಎಸ್‌ಟಿ ಶ್ರೇಣಿ ಕಡಿತವಾಗಬೇಕಾದರೆ ತೆರಿಗೆ ಸಂಗ್ರಹ ಸಮೃದ್ಧಿಯಾಗಬೇಕೆಂಬ ಮಾತನ್ನೂ ಇದೇ ವೇಳೆ ಜೇತ್ಲೀ ಹೇಳಿದ್ದಾರೆ. ಸದ್ಯದ ಮಟ್ಟಿಗೆ ತೆರಿಗೆ ಸಂಗ್ರಹ ತೃಪ್ತಿಕರ ಮಟ್ಟದಲ್ಲಿದೆಯೇ ಹೊರತು ಸಮೃದ್ಧಿಯ ಹಂತಕ್ಕೆ ಬಂದಿಲ್ಲ. ಹೀಗಾಗಿ ತತ್‌ಕ್ಷಣವೇ ಜಿಎಸ್‌ಟಿ ಶ್ರೇಣಿ ಕಡಿತವಾಗುವ ನಿರೀಕ್ಷೆ ಇಟ್ಟುಕೊಳ್ಳುವಂತಿಲ್ಲ. ಆದರೂ ಕೇಂದ್ರ ಸರಕಾರ ಈ ನಿಟ್ಟಿನಲ್ಲಿ ಚಿಂತನೆ ನಡೆಸುತ್ತಿದೆ ಎನ್ನುವುದು ಸ್ವಾಗತಾರ್ಹ.

ತೆರಿಗೆ ಶ್ರೇಣಿ ಇಳಿದರೆ ಶೇ.28ರ ಗರಿಷ್ಠ ಮಿತಿ ಇಳಿಯಬಹುದು. ಒಂದು ವೇಳೆ ಈ ಮಿತಿಯನ್ನೂ ಉಳಿಸಿಕೊಂಡರೂ ಕೆಲವು ಸೇವೆ ಮತ್ತು ಸರಕುಗಳನ್ನು ಈ ಶ್ರೇಣಿಯಿಂದ ಹೊರಗಿಡಲು ಸಾಧ್ಯವಾಗಬಹುದು. ಜನಸಾಮಾನ್ಯರು ಹೆಚ್ಚು ಬಳಸುವ ವಸ್ತುಗಳ ತೆರಿಗೆಯನ್ನು ಇನ್ನಷ್ಟು ಕಡಿತಗೊಳಿಸಬಹುದು. ಚಿನ್ನ, ವಜ್ರಕ್ಕೆ ಮಾಡಿರುವಂತೆ ಹೊಸ ಶ್ರೇಣಿಯ ಸೃಷ್ಟಿಯ ಸಾಧ್ಯತೆಯೂ ಇದೆ. ಹೆಚ್ಚಿನ ಜನಾವಶ್ಯಕ ವಸ್ತುಗಳನ್ನು ಶೇ.5 ಮತ್ತು ಶೇ.12ರ ಶ್ರೇಣಿಗೆ ತಂದು ಮಧ್ಯಮ ಮತ್ತು ಮೇಲ್ಮಧ್ಯಮ ವರ್ಗದವರ ತೆರಿಗೆ ಹೊರೆಯನ್ನು ತಗ್ಗಿಸಬಹುದು. ಒಟ್ಟಾರೆಯಾಗಿ ಸಾಮೂಹಿಕವಾಗಿ ಬಳಕೆಯಲ್ಲಿರುವ ವಸ್ತುಗಳ ಮೇಲಣ ತೆರಿಗೆಯನ್ನು ಕಡಿಮೆಗೊಳಿಸಿದರೆ ಅದರಿಂದ ಎಲ್ಲ ವರ್ಗದ ಜನರಿಗೆ ಪ್ರಯೋಜನವಾಗಲಿದೆ.

ಜನಸಾಮಾನ್ಯರು ಹೆಚ್ಚು ಬಳಸುವ ವಸ್ತುಗಳಿಗೆ ಕಡಿಮೆ ತೆರಿಗೆ ಇರುವಂತೆ ನೋಡಿಕೊಳ್ಳುವುದು ಸರಕಾರದ ಕರ್ತವ್ಯವೂ ಹೌದು. ದೇಶದಲ್ಲಿ ಪ್ರತ್ಯಕ್ಷ ತೆರಿಗೆ ಪಾವತಿಸುವವರ ಸಂಖ್ಯೆ ಬಹಳ ಕಡಿಮೆ. ಈ ಸೀಮಿತ ತೆರಿಗೆ ಗಳಿಕೆಯಿಂದಲೇ ಸರಕಾರ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಬೇಕಾಗಿದೆ. ಜಿಎಸ್‌ಟಿ ಜಾರಿಯಾದ ಬಳಿಕ ತೆರಿಗೆ ವ್ಯಾಪ್ತಿಗೆ ಹೆಚ್ಚೆಚ್ಚು ಜನರು ಬಂದಿದ್ದರೂ ಅವರಿಂದ ಸಮರ್ಪಕವಾಗಿ ತೆರಿಗೆ ಸಂಗ್ರಹಿಸುವುದು ಕೂಡ ಅಷ್ಟೇ ಮುಖ್ಯ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.