ಅ.ತೃತೀಯ ವಾರ “ಅಂಬರ್‌ ಕ್ಯಾಟರರ್’ ಸಿನೆಮಾ ತೆರೆಗೆ


Team Udayavani, Oct 4, 2017, 2:04 PM IST

02-Mum13.jpg

ಮುಂಬಯಿ: ತುಳುವರ ಬಹು ನಿರೀಕ್ಷೆಯ ನಾಗೇಶ್ವರ ಸಿನಿ ಕಂಬೈನ್ಸ್‌ ಪ್ರಸ್ತುತಿಯ “ಅಂಬರ್‌ ಕ್ಯಾಟರರ್’ ತುಳು ಸಿನೆಮಾ ಅಕ್ಟೋಬರ್‌ ತೃತೀಯ ವಾರದಲ್ಲಿ ತೆರೆ ಕಾಣಲಿದೆ ಎಂದು ಮುಂಬಯಿಯ ಸಮಾಜ ಸೇವಕ, ಕೊಡುಗೈದಾನಿ, ಶ್ರೀ ಕಚ್ಚಾರು ಶ್ರೀ ನಾಗೇಶ್ವರ ದೇವಸ್ಥಾನ ಆಡಳಿತ ಮತ್ತು ಸೇವಾ ಟ್ರಸ್ಟ್‌ ಬಾಕೂìರು ಅಧ್ಯಕ್ಷ ನಾಗೇಶ್ವರ ಸಿನಿ ಕಂಬೈನ್ಸ್‌ನ ನಿರ್ದೇಶಕ ಕಡಂದಲೆ ಸುರೇಶ್‌ ಎಸ್‌. ಭಂಡಾರಿ ತಿಳಿಸಿದರು.

ಮಂಗಳೂರು ತೊಕ್ಕೊಟ್ಟು ಇಲ್ಲಿನ ಅಸೆ„ಗೋಳಿ ಅಭಯಾಶ್ರಮದಲ್ಲಿ ಸೆ. 30ರಂದು ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಚಿತ್ರದ  ಚಿತ್ರೀಕರಣ ಪೂರ್ಣಗೊಂಡು ಇದೀಗ ಸೆನ್ಸಾರ್‌ ಬೋರ್ಡ್‌ನಲ್ಲಿದೆ. ಬಹುವೆಚ್ಚದ ದುಬಾರಿ ತುಳು ಚಲನಚಿತ್ರ ಇದಾಗಿದ್ದು,  ಹಿಂದಿ ಚಲನಚಿತ್ರದ ಶೈಲಿಯಲ್ಲಿ ಸಂಪೂರ್ಣವಾಗಿ ಚಿತ್ರವನ್ನು ಚಿತ್ರೀಕರಿಸಲಾಗಿದೆ. ತುಳು ಚಲನಚಿತ್ರದ ಇತಿಹಾಸದಲ್ಲೇ ಇದೊಂದು ಪ್ರಥಮ ಪ್ರಯತ್ನ. ಪರಶುರಾಮನ ಸೃಷ್ಟಿಯ ತುಳುನಾಡಿನ ಪ್ರಾದೇಶಿಕ ಭಾಷೆ ಅದಕ್ಕಿಂತಲೂ ಮೊದಲಾಗಿ ನನ್ನ ಮಾತೃಭಾಷೆಯಲ್ಲಿ ಸಿನೆಮಾವೊದಂದನ್ನು ನಿರ್ಮಿಸುವ ಕನಸು ನನ್ನಲ್ಲಿತ್ತು. ಪ್ರತಿಭಾನ್ವಿತ ಉದಯೋನ್ಮುಖ ಕಲಾವಿದನಾಗಿರುವ ಪುತ್ರ ಕಡಂದಲೆ ಸೌರಭ್‌ ಸುರೇಶ್‌ ಭಂಡಾರಿ ಈ ಚಿತ್ರದ ನಾಯಕ ನಟನಾಗಿ ಮತ್ತು ಹೆಸರಾಂತ ಯುವಕಲಾವಿದೆ ಸಿಂಧು ಲೋಕನಾಥ್‌ ನಾಯಕಿ ನಟಿಯಾಗಿ ಅಭಿನಯಿಸಿದ ಅಭಿಮಾನ ನನಗಿದೆ. ಜೈ ಪ್ರಸಾದ್‌ ಬಜಾಲ್‌ ರಚಿಸಿ, ನಿರ್ದೇಶನ ಹಾಗೂ ಸತೀಶ್‌ ಬ್ರಹ್ಮಾವರ್‌ ನಿರ್ಮಾಣ ನಿರ್ವಹಣೆ ಮತ್ತು ಸಂತೋಷ್‌ ರೈ ಪಾತಾಜೆ ಛಾಯಾಗ್ರಹಣದಲ್ಲಿ ಚಿತ್ರೀಕರಿಸಲ್ಪಟ್ಟ ಈ ಚಿತ್ರಕ್ಕೆ  ಕದ್ರಿ ಮಣಿಕಾಂತ್‌ ಸಂಗೀತ ನೀಡಿದ್ದು ಚಿತ್ರೀಕರಣ ಪೂರ್ಣಗೊಂಡು, ಚಿತ್ರವು ಅತ್ಯುತ್ತಮವಾಗಿ ಮೂಡಿ ಬಂದಿದೆ. ತುಳು ಭಾಷೆ ಬೆಳೆಯುತ್ತಿದೆ. ತುಳು ಚಲನಚಿತ್ರಗಳಿಂದ ಭಾಷೆಯ ಮೇಲಿನ ಪ್ರೀತಿಯೂ  ಹೆಚ್ಚಾಗುವುದರ ಜತೆಗೆ ಹೊಸ ಕಲಾವಿದರಿಗೆ ವೇದಿಕೆ ಕಲ್ಪಿಸಿದಂತಾಗುತ್ತದೆ ಅನ್ನುವ ಉದ್ದೇಶದೊಂದಿಗೆ ಚಿತ್ರ ನಿರ್ಮಿಸಲಾಗಿದೆ ಎಂದು ನುಡಿದರು.

ಚಿತ್ರದ ನಿರ್ದೇಶಕ  ಜೈಪ್ರಸಾದ್‌ ಬಜಾಲ್‌ ಮಾತನಾಡಿ,  ಚಿತ್ರದಲ್ಲಿ ಕನ್ನಡದ ದಿಗ್ಗಜರು, ಕರ್ನಾಟಕದ ಹಿರಿಯ ಅಭಿನೇತರರಾದ ಭಾರತಿ ವಿಷ್ಣುವರ್ಧನ್‌, ಶರತ್‌ ಲೋಹಿತಾಶ್ವ, ಸುಮಿತ್ರಾ ಪಂಡಿತ್‌,  ಪವನ್‌ ಕಲ್ಯಾಣ್‌, ತುಳು ಚಲನಚಿತ್ರಗಳ ಸೂಪರ್‌ಸ್ಟಾರ್‌ಗಳಾದ ನವೀನ್‌ ಡಿ. ಪಡೀಲ್‌, ಸುಂದರ್‌ ರೈ ಮಂದಾರ, ಭೋಜರಾಜ್‌ ವಾಮಂಜೂರು ಅಭಿನಯಿಸಿದ್ದಾರೆ.  ಅವರ ಧ್ವನಿಯ ಡಬ್ಬಿಂಗ್‌ ಕೂಡಾ  ಮಾಡಲಾಗಿದೆ  ಎಂದರು.

ನಾಯಕ ನಟ ಸೌರಭ್‌ ಸುರೇಶ್‌ ಭಂಡಾರಿ ಮಾತನಾಡಿ, ಚಲನಚಿತ್ರರಂಗದಲ್ಲಿ ಇದು ನನ್ನ ಮೊತ್ತಮೊದಲ ಹೆಜ್ಜೆ. ಆದರೂ ಎಲ್ಲೂ ಹಿಂಜರಿಯದೆ ಎಲ್ಲವನ್ನೂ ಅಚ್ಚುಕಟ್ಟಾಗಿ ನಿಭಾಯಿಸಿದ ಅಭಿಮಾನ  ನನಗಿದೆ. ಇನ್ನುಳಿದ ಪಾತ್ರ ಚಿತ್ರ ವೀಕ್ಷಕರದ್ದು. ಅವರೆಲ್ಲರೂ ಚಿತ್ರವನ್ನು ನೋಡಿ ಪ್ರೋತ್ಸಾಹಿ
ಸುವ ಭರವಸೆ ನನಗಿದೆ ಎಂದರು. ಹರೀಶ್‌ ಕಟಪಾಡಿ, ಶ್ರೇಯಸ್‌ ಶೆಟ್ಟಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಚಿತ್ರ-ವರದಿ: ರೊನಿಡಾ ಮುಂಬಯಿ

ಟಾಪ್ ನ್ಯೂಸ್

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.