“ಮಾತೃಪೂರ್ಣ’ ಯೋಜನೆ ಯಶಸ್ಸಾಗುವುದೆ?


Team Udayavani, Oct 5, 2017, 2:57 PM IST

05-STTAE-7.jpg

ಉಡುಪಿ: ಗರ್ಭಿಣಿಯರು, ಬಾಣಂತಿಯರು, ಚಿಕ್ಕಮಕ್ಕಳಿಗೆ ಪೌಷ್ಟಿಕಾಂಶ ಇರುವ ಆಹಾರ ಪೂರೈಸುವ “ಮಾತೃಪೂರ್ಣ’ ಯೋಜನೆ ಅ. 2ರಂದು ರಾಜ್ಯಾದ್ಯಂತ ಆರಂಭಗೊಂಡಿದೆ. ಇದು ಕರಾವಳಿ, ಮಲೆನಾಡು ಪ್ರದೇಶದಲ್ಲಿ ಯಶಸ್ವಿಯಾಗಲು ಸಾಧ್ಯವೆ? ಕರಾವಳಿಗೆ ಸೂಕ್ತವಲ್ಲ ಅಂಗನವಾಡಿ ಕೇಂದ್ರಗಳ ಮೂಲಕ ಎಲ್ಲ ಗರ್ಭಿಣಿಯರು, ಬಾಣಂತಿಯರಿಗೆ ಪೌಷ್ಟಿಕ ಆಹಾರ ವನ್ನು ಪೂರೈಸಬೇಕು ಎಂಬ ಯೋಜನೆಯನ್ನು ಬೆಂಗಳೂರೋ? ದಿಲ್ಲಿಯಲ್ಲಿಯೋ ಕುಳಿತು ರೂಪಿಸಬಹುದು. ಆದರೆ ಇದು ಎಷ್ಟರಮಟ್ಟಿಗೆ ಸಾಧ್ಯ? 

ಹಂಚಿ ತಿನ್ನುವ ಸಂಸ್ಕೃತಿಯಿಂದ ಬಾಣಂತಿ, ಗರ್ಭಿಣಿಯರಿಗೆ ಕೊಟ್ಟ ಆಹಾರ ಪೂರ್ತಿ ತಲುಪುತ್ತಿಲ್ಲ ಎಂಬ ವಾದವನ್ನು ಒಪ್ಪಬಹುದಾದರೂ ಹೊಸ ಯೋಜನೆ ಯಶಸ್ಸಾಗುವುದು ಸಂಶಯ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮನೆಗಳು ಚದುರಿಕೊಂಡು ಇವೆ. ಇಂತಹ ಕಡೆ ಯೋಜನೆ ಕಷ್ಟಸಾಧ್ಯ ಎನ್ನುತ್ತಾರೆ ಉಡುಪಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ನಿವೃತ್ತ ಅಧಿಕಾರಿ ಸದಾನಂದ ನಾಯಕ್‌.

ನಡೆಯುವುದು ಸಾಧ್ಯವೆ?
ಕರಾವಳಿ, ಮಲೆನಾಡು ಭಾಗಗಳಲ್ಲಿ ಬಾಣಂತಿಯರು, ಗರ್ಭಿಣಿಯರ ಮನೆಗೂ ಅಂಗನವಾಡಿಕೇಂದ್ರಕ್ಕೂ 2- 3 ಕಿ.ಮೀ. ದೂರ ಇವೆ. ಇಷ್ಟು ದೂರ ನಡೆದುಕೊಂಡು ಹೋಗುವುದು ಎಷ್ಟರ ಮಟ್ಟಿಗೆ ಸಾಧ್ಯ? ರಿಕ್ಷಾದಲ್ಲಿ ಹೋಗುವುದು ಲಾಭದಾಯಕವಲ್ಲ. ಇಂತಹ ಫ‌ಲಾನುಭವಿಗಳಿಗೆ ಮುಂಬೈಯಲ್ಲಿದ್ದಂತೆ ಡಬ್ಟಾವಾಲರ ಮೂಲಕ ಆಹಾರ ಪೂರೈಸಬೇಕೆಂದು ಉಡುಪಿ ಜಿಲ್ಲಾಧಿಕಾರಿಯವರು ಚಿಂತನೆ ಹರಿಬಿಟ್ಟಿದ್ದಾರೆ. ಮತ್ತೆ ಈ ಆಹಾರ ಹಂಚಿ ತಿನ್ನುವ ಸಂಸ್ಕೃತಿಯಿಂದ ಫ‌ಲಾನುಭವಿಗೇ ತಲುಪುವುದು ಶತಃಸಿದ್ಧ ಎಂದು ಹೇಳುವಂತಿಲ್ಲ. ಗರ್ಭಿಣಿಯರು, ಬಾಣಂತಿಯರು ಅಂಗನವಾಡಿ ಕೇಂದ್ರಗಳಿಗೆ ನಡೆದುಕೊಂಡು ಬಂದು ಅವರು ಸಿದ್ಧಪಡಿಸಿಕೊಟ್ಟ ಆಹಾರವನ್ನು ತಿಂದು ಹೋಗುವುದೂ ಸಂಶಯವೇ ಸರಿ. ಅಂಗನವಾಡಿ ಕೇಂದ್ರಗಳಿಗೆ ಪಾತ್ರೆಗಳನ್ನು ಖರೀದಿಸಲು ಯೋಜನೆ ರೂಪಿಸಲಾಗಿದೆ. ಉತ್ತಮ ಆಹಾರ ಸಿಗಬೇಕೆಂಬ ಈ ಯೋಜನೆಯ ಆಹಾರವನ್ನು ಬೇಯಿಸುವುದು ಅತಿ ಕೆಟ್ಟ ಲೋಹದ ಪಾತ್ರೆಗಳಲ್ಲಿ. ಈ ಅಗ್ಗದ ಪಾತ್ರೆಗಳಲ್ಲಿ ಬೇಯಿಸಿದ ಆಹಾರ ಪದಾರ್ಥಗಳು ಎಷ್ಟು ಆರೋಗ್ಯದಾಯಿ ಎಂಬ ಬಗ್ಗೆ ಪೌಷ್ಟಿಕಾಂಶ ತಜ್ಞರು ಮತ್ತೆ ಅಧ್ಯಯನ ನಡೆಸುವುದು ಸೂಕ್ತ. 

ಒತ್ತಡದಿಂದ ನಡೆಯುತ್ತಿದೆ
ಎಲ್ಲ ಅಂಗನವಾಡಿಗಳಲ್ಲಿ ಆಹಾರ ಬೇಯಿಸಲು ಪಾತ್ರೆಗಳ ಪೂರೈಕೆ ಆಗಿಲ್ಲ. ಇದನ್ನು ಬೇಯಿಸಿ ಕೊಡುವ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಕೊಡುವ ಪ್ರಸ್ತಾವವೇನೂ ಇಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಬಾಣಂತಿಯರು, ಗರ್ಭಿಣಿಯರು ಅಂಗನವಾಡಿಗಳಿಗೆ ಬಂದರೆ ಅಗತ್ಯವಾದ ಶೌಚಾಲಯದ  ವ್ಯವಸ್ಥೆ ಇಲ್ಲ. ಮಳೆ ಬಂದರೆ ರಕ್ಷಣೆಯೂ ಇಲ್ಲ. 10-20 ಜನರು ಬಂದರೆ ಕುಳಿತುಕೊಳ್ಳಲು ಜಾಗವಿಲ್ಲ. ಇದು ರಾಜ್ಯ ಮಟ್ಟದ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಮಟ್ಟದ ಉಪನಿರ್ದೇಶಕರು, ಸಿಡಿಪಿಒ, ವಲಯದ ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು ಹೀಗೆ ಮೇಲಿನಿಂದ ಕೆಳಗೆ
ಕೆಳಗೆ ಬಂದಂತೆ ಒತ್ತಡ ಹೇರಿ ಕೆಲಸ ನಡೆಸುತ್ತಿದ್ದಾರೆ. ಅ. 2ರಂದು ಉದ್ಘಾಟನೆಯಾದ ಬಳಿಕ ಸಮೀಕ್ಷೆ ಮಾಡಿ ನೋಡಿದರೆ ತಿಳಿಯುತ್ತದೆ. 
ಪ್ರಾಣೇಶ್‌ ಹೆಜಮಾಡಿ, ಬಾಲವಿಕಾಸ ಸಮನ್ವಯ ಸಮಿತಿ ಅಧ್ಯಕ್ಷ, ಹೆಜಮಾಡಿ ಕೇಂದ್ರ

ಮಟಪಾಡಿ ಕುಮಾರಸ್ವಾಮಿ

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.