ಜಂತರ್ ಮಂತರ್ನಲ್ಲಿ ಎಲ್ಲ ಪ್ರತಿಭಟನೆ ನಿಲ್ಲಿಸಿ: ಎನ್ಜಿಟಿ ಆದೇಶ
Team Udayavani, Oct 5, 2017, 5:36 PM IST
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದಿಲ್ಲಿಯ ಹೃದಯ ಭಾಗದಲ್ಲಿರುವ ಐತಿಹಾಸಿಕ ಜಂತರ್ ಮಂತರ್ ಪ್ರದೇಶದಲ್ಲಿ ಎಲ್ಲ ಬಗೆಯ ಧರಣಿ, ಪ್ರತಿಭಟನೆ, ಜನ ಜಮಾವಣೆಯನ್ನು ತತ್ಕ್ಷಣದಿಂದ ತಡೆಯಬೇಕು ಎಂದು ಹಸಿರು ರಾಷ್ಟ್ರೀಯ ನ್ಯಾಯ ಮಂಡಳಿ ದಿಲ್ಲಿ ಸರಕಾರಕ್ಕೆ ಆದೇಶ ನೀಡಿದೆ.
ಅಂತೆಯೇ ಕನ್ಹಾಟ್ ಪ್ಲೇಸ್ ಪ್ರದೇಶಕ್ಕೆ ಸಮೀಪದ ರಸ್ತೆಯ ಉದ್ದಕ್ಕೂ ಕಂಡು ಬರುವ ಎಲ್ಲ ತಾತ್ಕಾಲಿಕ ರಚನೆಗಳನ್ನು, ಲೌಡ್ ಸ್ಪೀಕರ್ಗಳನ್ನು ಮತ್ತು ಸಾರ್ವಜನಿಕ ಭಾಷಣ ವ್ಯವಸ್ಥೆಯನ್ನು ಈ ಕೂಡಲೇ ತೆರವುಗೊಳಿಸಬೇಕು ಎಂದು ಜಸ್ಟಿಸ್ ಆರ್ ಎಸ್ ರಾಠೊಡ್ ನೇತೃತ್ವದ ಹಸಿರು ನ್ಯಾಯ ಮಂಡಳಿ ಪೀಠ ದಿಲ್ಲಿ ಮುನಿಸಿಪಲ್ ಕೌನ್ಸಿಲ್ (ಎನಎಂಡಿಸಿ)ಗೆ ಆದೇಶಿಸಿದೆ.
ಜಂತರ್ ಮಂತರ್ ಪ್ರದೇಶದಲ್ಲಿ ಎಲ್ಲ ಬಗೆಯ ಧರಣಿ, ಪ್ರತಿಭಟನೆ, ಆಂದೋಲನ, ಸತ್ಯಾಗ್ರಹ, ಜನ ಸೇರುವಿಕೆ, ಸಾರ್ವಜನಿಕ ಭಾಷಣ ಕಾರ್ಯಕ್ರಮಗಳು, ಧ್ವನಿ ವರ್ಧಕಗಳ ಬಳಕೆ ಇತ್ಯಾದಿಗಳನ್ನು ಈ ಕೂಡಲೇ ನಿಲ್ಲಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು ಉತ್ತರದಾಯಿಗಳಾಗಿರುವ ದಿಲ್ಲಿ ಸರಕಾರ, ಎನ್ಎಂಡಿಸಿ ಹಾಗೂ ದಿಲ್ಲಿ ಪೊಲೀಸ್ ಕಮಿಷನರ್ಗೆ ಆದೇಶ ನೀಡಿದೆ.
ಜಂತರ್ ಮಂತರ್ ಪ್ರದೇಶದಲ್ಲಿ ನಡೆಯುತ್ತಿರುವ ಎಲ್ಲ ಪ್ರತಿಭಟನೆ, ಆಂದೋಲನ ಇತ್ಯಾದಿಗಳು ವಾಯು ಮಾಲಿನ್ಯ ಸೇರಿದಂತೆ ಪರಿಸರ ಸಂರಕ್ಷಣೆಯ ಕಾನೂನುಗಳ ಸಾರಾ ಸಗಟು ಉಲ್ಲಂಘನೆಯಾಗಿವೆ ಎಂದು ಮಂಡಳಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ