ನಂದಿನಿ ನದಿಗೆ ಹಾರಿದ ಯುವಕ: ತೀವ್ರ ಶೋಧ
Team Udayavani, Oct 6, 2017, 7:45 AM IST
ಹಳೆಯಂಗಡಿ : ಸಸಿಹಿತ್ಲು- ಕದಿಕೆಯ ನೂತನ ಸೇತುವೆಯಿಂದ ಅಪರಿಚಿತ ಯುವಕನೋರ್ವ ನಂದಿನಿ ನದಿಗೆ ಹಾರಿದ್ದಾನೆ ಎಂಬ ಮಾಹಿತಿಯಿಂದ ಪೊಲೀಸರು ಅಗ್ನಿಶಾಮಕ ದಳದ ಸಹಾಯದಿಂದ ತೀವ್ರ ಶೋಧ ನಡೆಸಿದ ಘಟನೆ ಅ. 5ರಂದು ನಡೆದಿದೆ.
ಸಸಿಹಿತ್ಲುವಿನ ಶ್ರೀ ಭಗವತೀ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ನೂತನ ಸೇತುವೆಯಿಂದ ಏಕಾಏಕಿ ಯುವಕನೋರ್ವ ನದಿಗೆ ಹಾರಿದ್ದನ್ನು ಮಹಿಳೆಯೋರ್ವರು ನೋಡಿದ್ದಾರೆ ಎಂದು ಮೂಲ್ಕಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು. ತತ್ಕ್ಷಣ ಪೊಲೀಸರು ಸ್ಥಳೀಯ ಮೀನುಗಾರರ ಸಹಾಯದಿಂದ ದೋಣಿಯಲ್ಲಿ ಹುಡುಕಾಡಿದರು ಆನಂತರ ಮಂಗಳೂರಿನಿಂದ ಬಂದ ಅಗ್ನಿಶಾಮಕ ದಳದವರು ಸಹ ತಮ್ಮ ಬೋಟ್ನಲ್ಲಿ ನಂದಿನಿ ನದಿಯ ಸುತ್ತಮುತ್ತ ಹಾಗೂ ಬೀಚ್ನ ವರೆಗೆ ಶೋಧ ಕಾರ್ಯ ನಡೆಸಿದರೂ ಫಲಕಾರಿಯಾಗಲಿಲ್ಲ ಎಂದು ತಿಳಿದು ಬಂದಿದೆ.
ಯಾರು ಈ ಅಪರಿಚಿತ..?
ನೀರಿಗೆ ಹಾರಿದವ ಬಿಳಿ ಟೀ ಶರ್ಟ್ ಧರಿಸಿದ್ದ ಸಾಧಾರಣ 25ರ ಹರೆಯದ ಯುವಕ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಆತ ಸೇತುವೆಯ ಬಳಿಯಲ್ಲಿಯೇ ಬೆಳಗ್ಗೆಯಿಂದ ಕುಳಿತಿದ್ದು ಅನಂತರ ಹಾರಿದ್ದಾನೆ. ಎರಡು ಬಾರಿ ಮುಳುಗೆ ದ್ದಿದ್ದಾನೆ ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಕುತೂಹಲಿಗರು ಸೇರಿದ್ದರು. ಸಂಜೆ ವರೆಗೆ ಕಾರ್ಯಾಚರಣೆ ನಡೆಸಲಾಗಿತ್ತು.
ಸ್ಪಷ್ಟವಿಲ್ಲ…
ಈ ಬಗ್ಗೆ ಮೂಲ್ಕಿ ಇನ್ಸ್ಪೆಕ್ಟರ್ ಅನಂತ ಪದ್ಮನಾಭ ಉದಯವಾಣಿ ಯೊಂದಿಗೆ ಮಾತನಾಡಿ, ಬೆಳಗ್ಗೆ ಸುಮಾರು 10 ಗಂಟೆಗೆ ಪೊಲೀಸ್ ಠಾಣೆಗೆ ಅಪರಿಚಿತ ಯುವಕ ನದಿಗೆ ಹಾರಿದ್ದಾನೆ ಎಂದು ದೂರವಾಣಿ ಕರೆಯೊಂದು ಬಂದಿತ್ತು. ಮಹಿಳೆಯೊಬ್ಬರು ನೋಡಿದ್ದಾರೆ ಎಂದು ಹೇಳಲಾಗಿತ್ತು. ಸ್ಥಳಕ್ಕೆ ಧಾವಿಸಿದಾಗ ಜನರು ಸಹ ಸೇರಿದ್ದರಾದರೂ ಮಹಿಳೆ ಯಾರು ಎಂದು ಗೊತ್ತಾಗಿಲ್ಲ. ದೂರವಾಣಿ ಕರೆ ಮಾಡಿದವರು ನೇರವಾಗಿ ನೋಡಿಲ್ಲ. ಬದಲಾಗಿ ಘಟನೆಯನ್ನು ಕೇಳಿ ಕರೆ ಮಾಡಿದ್ದರು. ಈ ಬಗ್ಗೆ ಸಂಜೆಯವರೆಗೆ ಸಾಕಷ್ಟು ಹುಡುಕಾಟ ನಡೆಸಿದ್ದೇವೆ. ಹಾರಿದ ಯುವಕನ ಬಗ್ಗೆ ಯಾವುದೇ ಪೂರಕವಾದ ಮಾಹಿತಿ ಸಿಕ್ಕಿಲ್ಲ. ಆದರೂ ಸ್ಥಳೀಯರಿಗೆ ಮಾಹಿತಿ ನೀಡಲು ತಿಳಿಸಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ