ತವರಿನ ಎಲ್ಲ ಪಂದ್ಯ ಸೋತ ತಮಿಳ್‌


Team Udayavani, Oct 6, 2017, 6:45 AM IST

DSC_0040.jpg

ಚೆನ್ನೈ: ವಿವೊ ಪ್ರೊ ಕಬಡ್ಡಿ ಲೀಗ್‌ನ ಚೆನ್ನೈ ಚರಣದ ಗುರುವಾರದ ಏಕೈಕ ಹಾಗೂ ಕೊನೆಯ  ಪಂದ್ಯದಲ್ಲಿ ರೋಹಿತ್‌ ಮತ್ತು ಅಜಯ್‌ ಅವರ ಭರ್ಜರಿ ಆಟದಿಂದಾಗಿ ಬೆಂಗಳೂರು ಬುಲ್ಸ್‌ ಆತಿಥೇಯ ತಮಿಳ್‌ ತಲೈವಾಸ್‌ತಂಡಕ್ಕೆ 45-35 ಅಂಕಗಳ ಸೋಲುಣಿಸಿತು. ಇದರೊಂದಿಗೆ ತವರಿನ ಎಲ್ಲ 6 ಪಂದ್ಯಗಳಲ್ಲೂ ತಮಿಳ್‌ ಶರಣಾಗತಿ ಸಾರಿತು. ಚೆನ್ನೈ ಅಭಿಮಾನಿಗಳನ್ನು ನಿರಾಸೆಯಲ್ಲಿ ಕೆಡವಿತು.

ಇಲ್ಲಿನ ಜವಹರ್‌ಲಾಲ್‌ ನೆಹರೂ ಒಳಾಂಗಣ ಕ್ರೀಡಾಂಗ ಣದಲ್ಲಿ ನಡೆದ ಬಿ ವಲಯದ ಕೊನೆಯ 2 ಸ್ಥಾನಿಗಳ ನಡುವಿನ ಈ ಪಂದ್ಯದಲ್ಲಿ ಬುಲ್ಸ್‌ ಆರಂಭದಿಂದಲೇ ತಮಿಳರ ಮೇಲೇರಗಿ ಅಂಕ ಪಡೆಯಲು ಆರಂಭಿಸಿತು. 3 ಬಾರಿ ತಮಿಳ್‌ ತಂಡವನ್ನು ಆಲೌಟ್‌ ಮಾಡಿದ ಬುಲ್ಸ್‌ ಗೆಲುವಿನ ನಗೆ ಚೆಲ್ಲಿತು.ದ್ವಿತೀಯ ಅವಧಿಯ ಆಟದಲ್ಲಿ ಬುಲ್ಸ್‌ ತಂಡವನ್ನು ಆಲೌಟ್‌ ಮಾಡಿದರೂ ತಮಿಳ್‌ಗೆ ಗೆಲುವು ಮರೀಚಿಕೆಯೇ ಆಗುಳಿಯಿತು. ಚೆನ್ನೈ ಚರಣದ ಆರೂ ಪಂದ್ಯಗಳಲ್ಲಿ ಮಿಂಚಿನಾಟ ಪ್ರದರ್ಶಿಸಿದ್ದ ಅಜಯ್‌ ಠಾಕುರ್‌ ಈ ಪಂದ್ಯದಲ್ಲೂ ಗರಿಷ್ಠ 15 ಅಂಕ ಗಳಿಸಿ ಗಮನ ಸೆಳೆದರು. ಪ್ರಪಂಜನ್‌ 8 ಅಂಕ ಮತ್ತು ದರ್ಶನ್‌ 6 ಅಂಕ ಗಳಿಸಿದರು.

ಬುಲ್ಸ್‌ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ ನಾಯಕ ರೋಹಿತ್‌ ಕುಮಾರ್‌ ಗರಿಷ್ಠ 17 ಅಂಕ ಪಡೆದು ಮಿಂಚಿದರು. ಅಜಯ್‌ 6 ಅಂಕ ಮತ್ತು ಸಚಿನ್‌ 5 ಅಂಕ ಗಳಿಸಿದರು.ಈ ಗೆಲುವಿನಿಂದ ಬೆಂಗಳೂರು ಬುಲ್ಸ್‌ ಸತತ 3 ಸೋಲಿನ ಸರಮಾಲೆಗೆ ಅಂತ್ಯ ಹಾಡಿತಲ್ಲದೇ ಸೂಪರ್‌ ಪ್ಲೇ ಆಫ್ಗೆ  ತೇರ್ಗಡೆಯಾಗುವ ಸಾಧ್ಯತೆಯನ್ನು ಹೆಚ್ಚಿಸಿತು. ಬುಲ್ಸ್‌ ಈವರೆಗೆ 18 ಪಂದ್ಯಗಳನ್ನಾಡಿದ್ದು, 39 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿದೆ. ಬೆಂಗಳೂರು ಇನ್ನು 4 ಪಂದ್ಯ ಆಡಲಿದ್ದು, ಇವೆಲ್ಲವನ್ನೂ ಗೆದ್ದರೆ ಮುನ್ನಡೆಯಬಹುದು.

ಬೆಂಗಳೂರು ಭರ್ಜರಿ ಪ್ರದರ್ಶನ
ಬೋನಸ್‌ ಅಂಕ ಗಳಿಸುವ ಮೂಲಕ ಖಾತೆ  ತೆರೆದ ಬೆಂಗಳೂರು ಬುಲ್ಸ್‌ ತಂಡ ಮೊದಲ 5 ನಿಮಿಷ ಮುಗಿದಾಗ 6-3 ಮುನ್ನಡೆಯಲ್ಲಿತ್ತು. ಅಂಕ ಸಮಬಲ ಸಾಧಿಸಲು ತಮಿಳ್‌ ಸತತ ಪ್ರಯತ್ನ ನಡೆಸಿದರೂ ಬುಲ್ಸ್‌ ಮುನ್ನಡೆಯನ್ನು ಬಿಟ್ಟುಕೊಡಲೇ ಇಲ್ಲ. 10 ನಿಮಿಷದ ಆಟ ಮುಗಿದಾಗ ಬುಲ್ಸ್‌ 8-6ರಿಂದ ಮುನ್ನಡೆ ಸಾಧಿಸಿತು.

ಆಬಳಿಕ ಬುಲ್ಸ್‌ ಭರ್ಜರಿ ಆಟವಾಡಿತು. ಅಜಯ್‌ ಮತ್ತು ರೋಹಿತ್‌ ಸತತ ರೈಡ್‌ನ‌ಲ್ಲಿ ಅಂಕ ಕಲೆ ಹಾಕಿದರು. ಇದರಿಂದ ಒತ್ತಡಕ್ಕೆ ಒಳಗಾದ ತಮಿಳ್‌ ಮೊದಲ ಅವಧಿ ಮುಗಿಯಲು 2 ನಿಮಿಷವಿರುವಾಗ ಆಲೌಟ್‌ಗೆ ಗುರಿಯಾಯಿತು. ಮೊದಲ ಅವಧಿ ಮುಗಿದಾಗ ಬುಲ್ಸ್‌ 19-10ರಿಂದ ಮುನ್ನಡೆಯಲ್ಲಿತ್ತು.

ಇಂದಿನಿಂದ ಜೈಪುರ ಚರಣ
ಶುಕ್ರವಾರದಿಂದ ಜೈಪುರದಲ್ಲಿ ಪ್ರೊ ಕಬಡ್ಡಿ ಲೀಗ್‌ನ ಪಂದ್ಯಗಳು ನಡೆಯಲಿದ್ದು ಮೊದಲ ಪಂದ್ಯದಲ್ಲಿ ಆತಿಥೇಯ ಜೈಪುರ ಪಿಂಕ್‌ ಪ್ಯಾಂಥರ್ ಎ ವಲಯದ ಅಗ್ರಸ್ಥಾನಿ ಗುಜರಾತ್‌ ಫಾರ್ಚೂನ್ಸ್‌ ಜೈಂಟ್ಸ್‌ ತಂಡವನ್ನು ಎದುರಿಸಲಿದೆ. ತವರಿನಲ್ಲಿ ಜೈಪುರ ಆರು ಪಂದ್ಯಗಳನ್ನು ಆಡಲಿದ್ದು ಎಲ್ಲ ಪಂದ್ಯಗಳಲ್ಲಿ ಗೆದ್ದರೆ ಸೂಪರ್‌ ಪ್ಲೇ ಆಫ್ಗೆ ತೇರ್ಗಡೆಯಾಗುವ ಅವಕಾಶವಿದೆ.

– ಶಂಕರನಾರಾಯಣ ಪಿ.

ಟಾಪ್ ನ್ಯೂಸ್

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.