ಮೀಸಲಾತಿ ಮಿತಿ ಶೇ. 70ರಷ್ಟು ವಿಸ್ತರಿಸಲು ಬದ್ಧ
Team Udayavani, Oct 6, 2017, 8:10 AM IST
ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡದವರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಸಿಕ್ಕಿಲ್ಲ. ಹಾಗಾಗಿ ರಾಜ್ಯದಲ್ಲಿ ಮೀಸಲಾತಿ ಪ್ರಮಾಣವನ್ನು ಶೇ. 70ರಷ್ಟು ಹೆಚ್ಚಳ ಮಾಡಲು ವಿಧಾನಮಂಡಲದಲ್ಲಿ ನಿರ್ಣಯ ಕೈಗೊಂಡು ಸಂವಿಧಾನ ತಿದ್ದುಪಡಿಗೆ ಶಿಫಾರಸು ಮಾಡಲು ಸರಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.
ಶಾಸಕರ ಭವನದ ಮುಂಭಾಗ ನೂತನವಾಗಿ ಪ್ರತಿಷ್ಠಾಪಿಸಿರುವ ಮಹರ್ಷಿ ವಾಲ್ಮೀಕಿ ಪ್ರತಿಮೆಯನ್ನು ಗುರುವಾರ ಅನಾವರಣಗೊಳಿಸಿ, ತಪೋವನ ಉದ್ಘಾಟಿಸಿದ ಅನಂತರ ವಿಧಾನಸೌಧದ ಪೂರ್ವ ದ್ವಾರದಲ್ಲಿ ನಡೆದ ವಾಲ್ಮೀಕಿ ಜಯಂತ್ಯುತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಸುಪ್ರೀಂಕೋರ್ಟ್ ಮೀಸಲಾತಿ ಮಿತಿಯನ್ನು ಶೇ. 50ಕ್ಕೆ ಸೀಮಿತಗೊಳಿಸಿದೆ. ಈಗಾಗಲೇ ಸಾಮಾಜಿಕ ಮತ್ತು ಆರ್ಥಿಕ ಗಣತಿಗೆ ಆದೇಶಿಸಿದ್ದು, ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೆಲವೇ ದಿನಗಳಲ್ಲಿ ವರದಿ ನೀಡಿದರೆ ವಿ.ಎಸ್. ಉಗ್ರಪ್ಪ ಸಹಿತ ಇತರ ಪ್ರಮುಖರೊಂದಿಗೆ ಚರ್ಚಿಸಿ ಮೀಸಲಾತಿ ಪ್ರಮಾಣ ವಿಸ್ತರಣೆ ಪ್ರಯತ್ನ ಆರಂಭಿಸಲಾಗುವುದು ಎಂದು ಹೇಳಿದರು.
ವಾಲ್ಮೀಕಿ ಜಯಂತಿಯನ್ನು ರಾಜ್ಯ, ಜಿಲ್ಲಾ, ತಾಲೂಕು ಮಟ್ಟದಲ್ಲಿ ಆಚರಿಸಲಾಗುತ್ತಿತ್ತು. ಈ ವರ್ಷ ವಿಶೇಷವಾಗಿ ವಿಧಾನಸೌಧದ ಆವರಣದಲ್ಲಿ ಜಯಂತ್ಯುತ್ಸವ ನಡೆಸಲಾಗುತ್ತಿದೆ. ಇಡೀ ಜಗತ್ತಿಗೆ, ಮನುಕುಲದ ಬದುಕಿಗೆ ಮಾರ್ಗದರ್ಶನ ನೀಡಿದ ಆದಿಕವಿ ಮಹರ್ಷಿ ವಾಲ್ಮೀಕಿ ವಿಚಾರ, ಸಂದೇಶವನ್ನು ಪ್ರತಿ ಮನೆ ಮನೆಗೆ ತಲುಪಿಸಲು, ಪ್ರತಿಯೊಬ್ಬರಿಗೂ ಸ್ಫೂರ್ತಿ ಸಿಗಲೆಂದು ಶಾಸಕರ ಭವನದ ಮುಂಭಾಗ 2.5 ಎಕ್ರೆ ಜಾಗದಲ್ಲಿ ತಪೋವನ ನಿರ್ಮಿಸಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಪ್ರತಿಷ್ಠಾಪಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.