ಕಾರ್ಪೋರೇಟರ್‌ ಆಗಲೂ ತಾಕತ್ತಿಲ್ಲದವರು ಮಂತ್ರಿ ಹೇಗಾದ್ರು?


Team Udayavani, Oct 6, 2017, 9:57 AM IST

06-9.jpg

ಹಾಸನ: “ಬಿಬಿಎಂಪಿ ಸದಸ್ಯನಾಗಲೂ ತಾಕತ್ತಿಲ್ಲದ ಜಮೀರ್‌ ಅಹಮದ್‌ ಅವರನ್ನು ನಾವು ಶಾಸಕ, ಮಂತ್ರಿ ಮಾಡಿದೆವು. ಕುಮಾರಣ್ಣ ಮುಖ್ಯಮಂತ್ರಿಯಾಗಿದ್ದಾಗ ಚೆನ್ನಾಗಿ ಮೇಯ್ದ ಜಮೀರ್‌ ಹಾಗೂ ಚೆಲುವರಾಯಸ್ವಾಮಿ ಈಗ ಕಾಂಗ್ರೆಸ್‌ನ ಹುಲ್ಲುಗಾವಲಿನಲ್ಲಿ ಮೇಯಲು ಹೋಗುತ್ತಿದ್ದಾರೆ’ ಎಂದು ಮಾಜಿ ಸಚಿವ ಎಚ್‌.ಡಿ.ರೇವಣ್ಣ ವ್ಯಂಗ್ಯವಾಡಿದರು.

“ಜಮೀರ್‌ ಅಹಮದ್‌ ಮುಸ್ಲಿಂ ನಾಯಕ, ಅವರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುತ್ತೇವೆ’ ಎಂದು ಕೆಪಿಸಿಸಿ ಅಧ್ಯಕ್ಷ
ಡಾ.ಜಿ.ಪರಮೇಶ್ವರ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ರೇವಣ್ಣ, “ದೇವೇಗೌಡರಿಗೆ ಜಮೀರ್‌ರನ್ನು ಪರಿಚಯಿಸಿದವನೇ ನಾನು. ದೇವೇಗೌಡರು ಚಾಮರಾಜಪೇಟೆಯಲ್ಲಿ ದರಿದ್ರ ನಾರಾಯಣ ರ್ಯಾಲಿ ಮಾಡದಿದ್ದರೆ ಜಮೀರ್‌ ಶಾಸಕನೂ ಆಗುತ್ತಿರಲಿಲ್ಲ ಎಂದರು. “ಆರ್‌.ವಿ. ದೇವರಾಜ್‌ ಸಾರಿಗೆ ಸಚಿವರಾಗಿದ್ದಾಗ ಅವರಿಗೆ ಟೋಪಿ ಹಾಕಿದ್ದ ಜಮೀರ್‌ ಈಗ ಜೆಡಿಎಸ್‌ನಲ್ಲಿ ಮೇಯಲು ಮೇವಿಲ್ಲವೆಂದು ಕಾಂಗ್ರೆಸ್‌ನ ಹುಲ್ಲುಗಾವಲಿಗೆ ಹೋಗುತ್ತಿದ್ದಾರೆ. ಚೆನ್ನಾಗಿ ಮೇಯ್ದು ದನ ಬೆದೆಗೆ ಬಂದಾಗ ಯಾರ ಮೇಲೆ ಬೇಕಾದರೂ ಎರಗುತ್ತವೆ. ಅದೇ ಬುದ್ಧಿ ಜಮೀರ್‌ಗೂ ಇದೆ’ ಎಂದರು.

ಮೂಲ ಕಾಂಗ್ರೆಸ್‌ನ ಮುಸ್ಲಿಮರೆಲ್ಲ ವಿಫ‌ಲರಾಗಿದ್ದಾರೆ. ಅವರಿಗೆ ಶಕ್ತಿಯಿಲ್ಲವೆಂದು ಜಮೀರ್‌ ಅಂಥವರನ್ನು ಕಾಂಗ್ರೆಸ್‌ಗೆ ಪರಮೇಶ್ವರ್‌ ಸೇರಿಸಿಕೊಳ್ಳುತ್ತಿದ್ದಾರೆ. ರೋಷನ್‌ಬೇಗ್‌, ಮೊಹಿದ್ದೀನ್‌, ಇಬ್ರಾಹಿಂ ಸೇರಿ ಹಲವು ಮುಸ್ಲಿಂ ನಾಯಕರು ಜನತಾ ಪರಿವಾರದಿಂದಲೇ ಹೋದವರು. ಜೆಡಿಎಸ್‌ ರಾಜಕೀಯ ತರಬೇತಿ ಕೊಟ್ಟು ಕಳುಹಿಸಿದೆ ಎಂದೂ ರೇವಣ್ಣ ಹೇಳಿದರು.

ಜೆಡಿಎಸ್‌ನವರು ಯಾವ ಮಣ್ಣಿನ ಮಕ್ಕಳು?
ಕೆ.ಆರ್‌.ಪೇಟೆ: “ಜೆಡಿಎಸ್‌ನವರು ಯಾವಾಗಲೂ ಮಣ್ಣಿನ ಮಕ್ಕಳು ಅಂತಾರೆ. ಹಾಗಿದ್ದರೆ ಅವರು ಯಾವ ಮಣ್ಣಿನ ಮಕ್ಕಳು. ಕೆಂಪು ಮಣ್ಣಾ ಅಥವಾ ಕಪ್ಪು ಮಣ್ಣಾ?’ - ಹೀಗೆಂದು ವ್ಯಂಗ್ಯವಾಡಿದವರು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌. ಪಟ್ಟಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ  ಕಾರ್ಯಕರ್ತರ ಬೃಹತ್‌ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. “ದೇವೇಗೌಡರು ಪ್ರಧಾನಿಯಾಗಿದ್ದಾಗ ನಾವು ಖುಷಿಪಟ್ಟಿದ್ದೆವು. ಆದರೆ, ಅವರು ರೈತರಿಗಾಗಿ ಏನು ಮಾಡಿದ್ರು? 9 ತಿಂಗಳು ಪ್ರಧಾನಿಯಾಗಿದ್ದ ದೇವೇಗೌಡರಿಗೆ ರೈತರ ಸಾಲ ನೆನಪಿಗೆ ಬರಲೇ ಇಲ್ಲ’ ಎಂದು ಪರಮೇಶ್ವರ್‌ ಹೇಳಿದರು.

ಮುಂದೆ ಪರಮೇಶ್ವರ್‌ ಅವರದ್ದೇ ಸರಕಾರ!
ನಾನು ಜೆಡಿಎಸ್‌ನಲ್ಲೇ ಇದ್ದಿದ್ದರೂ ಮುಸ್ಲಿಂ ಸಮುದಾಯದ ಮತಗಳನ್ನು ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ಆ ದೇವರೇ ನನಗೆ ಜೆಡಿಎಸ್‌ ಬಿಡಿಸಿ ಕಾಂಗ್ರೆಸ್‌ ಸೇರಿಸಿದ್ದಾನೆ. ನಾವೆಲ್ಲರೂ ಒಂದಾಗಿ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ತರುವ ಮೂಲಕ ಡಾ.ಜಿ.ಪರಮೇಶ್ವರ್‌ ಅವರನ್ನು ಗೆಲ್ಲಿಸಿ ಕಳುಹಿಸಬೇಕು. ಮುಂದೆ ಪರಮೇಶ್ವರ್‌
ಅವರದ್ದೇ ಸರಕಾರ.
●ಜಮೀರ್‌ ಅಹಮದ್‌, ಶಾಸಕ

ನನ್ನ ಮತ್ತು ಮುಖ್ಯಮಂತ್ರಿ ನಡುವೆ ಯಾವುದೇ ಗೊಂದಲವಿಲ್ಲ. ಅವರ ನೇತೃತ್ವದಲ್ಲೇ ಚುನಾವಣೆಗೆ ಹೋಗುತ್ತೇವೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಒಳ್ಳೆಯ ಕಾರ್ಯಕ್ರಮ, ಉತ್ತಮ ಯೋಜನೆ ನೀಡಿದ್ದಾರೆ. ಅದೆಲ್ಲವನ್ನೂ ಅವರು ಜನಸಮುದಾಯಕ್ಕೆ ತಿಳಿಸಬೇಕಾಗುತ್ತದೆ. ಅದಕ್ಕಾಗಿ ಅವರ ನೇತೃತ್ವದಲ್ಲೇ ಚುನಾವಣೆಗೆ ಹೋಗುತ್ತೇವೆ. ಇದನ್ನು ಎಐಸಿಸಿ ಕೂಡ ಹೇಳಿದೆ.
●ಡಾ.ಜಿ.ಪರಮೇಶ್ವರ್‌, ಕೆಪಿಸಿಸಿ ಅಧ್ಯಕ

ಜಮೀರ್‌ ಅಹಮದ್‌ ರಾಜ್ಯದ ಸಮರ್ಥ ಮುಸ್ಲಿಂ ನಾಯಕ ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಹೇಳಿದ್ದಾರೆ. ಪರಮೇಶ್ವರ್‌ ಅವರು ಸಂಪುಟ ಸೇರುವ ಮೊದಲು, ಸೇರಿದ ನಂತರ ಮತ್ತು ಸಂಪುಟದಿಂದ ಹೊರಗಿರುವ ಸಂದರ್ಭಗಳಲ್ಲಿ ಆಡಿರುವ ಮಾತುಗಳನ್ನು ಕೇಳಿದ್ದೇನೆ. ಅವರ ಮಾತು ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ.
●ಎಚ್‌.ಡಿ.ದೇವೇಗೌಡ, ಮಾಜಿ ಪ್ರಧಾನಿ

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

ICSE: ರಾಜ್ಯದ ವಿದ್ಯಾರ್ಥಿಗಳಿಗೆ‌ ಶೇ. 99 ಮೀರಿದ ಫ‌ಲಿತಾಂಶ; ವಿದ್ಯಾರ್ಥಿನಿಯರೇ ಮೇಲುಗೈ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

Lok Sabha ಚುನಾವಣೆ ಪ್ರಕ್ರಿಯೆ ವೀಕ್ಷಣೆಗೆ 5 ದೇಶಗಳ ತಂಡ ಬೆಳಗಾವಿಗೆ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

ರಾಜ್ಯ ಕಾಂಗ್ರೆಸ್‌ ಸರಕಾರ ಸಂಪೂರ್ಣ ನಿಷ್ಕ್ರಿಯ: ಬಿ.ವೈ.ವಿಜಯೇಂದ್ರ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

Congress ಗೆಲುವಿನಲ್ಲಿದೆ ಮಹಿಳೆಯರ ಗೆಲುವು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.