ಮತ್ತೆ ಮತ್ತೆ ಹಾಡುಗಳು!


Team Udayavani, Oct 6, 2017, 11:40 AM IST

06-12.jpg

ನಟ ಟೆನ್ನಿಸ್‌ ಕೃಷ್ಣ ಅವರು ನಿರ್ದೇಶಕರಾಗಿರೋದು ಗೊತ್ತೇ ಇದೆ. “ಮತ್ತೆ ಮತ್ತೆ’ ಚಿತ್ರದ ಮೂಲಕ ತಮ್ಮ ನಿರ್ದೇಶಕನ ಕನಸು ನನಸಾಗಿದ್ದು ಗೊತ್ತು. ಈಗಾಗಲೇ ಈ ಚಿತ್ರದ ಚಿತ್ರೀಕರಣ ಶುರುವಾಗಿದೆ. ಆದರೆ, ಈ ಚಿತ್ರದ
ಹೊಸ ವಿಷಯವೆಂದರೆ, ಸಿನಿಮಾ  ಚಿತ್ರೀಕರಣದಲ್ಲಿರುವಾಗಲೇ, ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡಿದೆ ಚಿತ್ರತಂಡ. ಸಾಮಾನ್ಯವಾಗಿ ಸಿನಿಮಾ ಶೂಟಿಂಗ್‌ ಮುಗಿದ ಬಳಿಕ ಆಡಿಯೋ ಸಿಡಿ ಬಿಡುಗಡೆ ಮಾಡುವುದು ವಾಡಿಕೆ. ಆದರೆ, ಈ ಚಿತ್ರತಂಡ, ಹಾಡುಗಳನ್ನು ಮೊದಲೇ ಬಿಡುಗಡೆಗೊಳಿಸಿ, ಚಿತ್ರದ ಪ್ರಚಾರ ಮಾಡುವ ಹೊಸ ಯೋಚನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಅಂದು ಪ್ರಕಾಶ್‌ ಕೋಳಿವಾಡ ಹಾಗೂ ಮಮತಾ ಇಬ್ಬರೂ ಆಡಿಯೋ ಸಿಡಿ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಹಾರೈಸಿದರು.

ಇನ್ನೂ ಒಂದು ವಿಶೇಷವೆಂದರೆ, ನಿರ್ಮಾಪಕ ಅರುಣ್‌ ಹೊಸಕೊಪ್ಪ ಅವರು, ಈ ಚಿತ್ರದ ಆಡಿಯೋ ಸಿಡಿಗೆ ನೂರು ರುಪಾಯಿ ಬೆಲೆ ನಿಗದಿಪಡಿಸಿದ್ದಾರೆ! ಆಡಿಯೋ ಸಿಡಿ ಖರೀದಿಸುವವರೇ ಇಲ್ಲದ ಸಮಯದಲ್ಲಿ, ನೂರು ರುಪಾಯಿ ಕೊಟ್ಟು ಜನ ಆಡಿಯೋ ಸಿಡಿ ಪಡೆಯುತ್ತಾರಾ? ಈ ಪ್ರಶ್ನೆಗೆ, “ನಮ್ಮ ಟೀಮ್‌ ಹಾಗು ಆಪ್ತವಲಯದವರು ಕೊಂಡರೆ ಸಾಕು, ಮೇಲಾಗಿ ಮಾರ್ಕೆಟಿಂಗ್‌ ಮಾಡಿ ಎಷ್ಟಾಗುತ್ತೋ ಅಷ್ಟು ಸಿಡಿ ಸೇಲ್‌ ಮಾಡುವ ಮೂಲಕ ಪ್ರಚಾರ ಮಾಡುತ್ತೇವೆ ಅಂತ ಹೇಳಿ ನಿರೂಪಣೆ ಮಾಡೋಕೆ ನಿಂತರು.

ಸಿನಿಮಾ ತಂಡವನ್ನು ಪರಿಚಯ ಮಾಡಿಕೊಡುತ್ತಲೇ ಒಬ್ಬೊಬ್ಬರಿಗೆ ಮೈಕ್‌ ಕೊಡುತ್ತಾ ಹೋದರು ಅರುಣ್‌ ಹೊಸಕೊಪ್ಪ. ಅದರಂತೆ ಮೊದಲು ಟೆನ್ನಿಸ್‌ ಕೃಷ್ಣ ಮಾತಿಗೆ ನಿಂತರು. “ನಿರ್ದೇಶಕ ಆಗಬೇಕು ಅಂತ ಇಲ್ಲಿಗೆ ಬಂದೆ. ಆಗಿದ್ದು, ನಟ. ಈಗ ಆ ಅವಕಾಶ ಸಿಕ್ಕಿದೆ. ಇಲ್ಲಿ ಹೊಸಬರಿಗೆ ಅವಕಾಶ ಕಲ್ಪಿಸಲಾಗಿದೆ. ಮೊದಲು ವರ್ಕ್‌ಶಾಪ್‌ ಮಾಡಿಸಿ, ಕ್ಯಾಮೆರಾ ಮುಂದೆ ನಿಲ್ಲಿಸಿದ್ದೇನೆ. ಇನ್ನು, ಹಿರಿಯ ಕಲಾವಿದರೂ ಇಲ್ಲಿ ನಟಿಸುತ್ತಿದ್ದಾರೆ. ಅಶಕ್ತ
ಕಲಾವಿದರಿಗೆ ಸಿನಿಮಾದಿಂದ ಬಂದ ಲಾಭದ ಶೇ.25 ರಷ್ಟು ಹಣವನ್ನು ಕೊಡಲು ತೀರ್ಮಾನಿಸಿದ್ದೇವೆ’ ಎಂದರು ಟೆನ್ನಿಸ್‌. ಈ ಸಿನಿಮಾಗೆ ಇಮಿ¤ಯಾಜ್‌ ಸುಲ್ತಾನ್‌ ಸಂಗೀತ ನೀಡಿದ್ದಾರೆ.

ಗಾಯಕರಾಗಬೇಕು ಅಂತ ಅವರು ಈ ಇಂಡಸ್ಟ್ರಿಗೆ ಬಂದರೆ, ಅವರನ್ನು ಟೆನ್ನಿಸ್‌ ಕೃಷ್ಣ ಸಂಗೀತ ನಿರ್ದೇಶಕರಾಗುವ ಅವಕಾಶ ಮಾಡಿಕೊಟ್ಟರಂತೆ. ಅವರಿಲ್ಲಿ ಐದು ಹಾಡುಗಳನ್ನು ಕೊಟ್ಟಿದ್ದಾರೆ. ಬಹುತೇಕ ಹೊಸ ಗಾಯಕರಿಗೆ ಹಾಡುವ
ಅವಕಾಶ ಕೊಟ್ಟಿದ್ದಾಗಿ ಹೇಳಿಕೊಂಡರು ಇಮಿ¤ಯಾಜ್‌ ಸುಲ್ತಾನ್‌. ಅಂದು ಹಿರಿಯ ಕಲಾವಿದ ಉಮೇಶ್‌, ಇನ್ನೊಬ್ಬ ನಿರ್ಮಾಪಕ ಅಚ್ಯುತ್‌ ಗೌಡ, ಬ್ಯಾಂಕ್‌ ಜನಾರ್ದನ್‌, ರೇಖಾ ದಾಸ್‌ ಮಾತನಾಡಿದರು. ಉಳಿದಂತೆ ಚಿತ್ರದಲ್ಲಿ ಅಂಬರೀಷ್‌ ಸಾರಂಗಿ, ನವೀನ್‌, ಅಶ್ವಿ‌ನಿ, ಹೇಮಾಶ್ರೀ, ತನ್ಮಯಿ, ವಿನಯ್‌ ಚಂದ್ರು ಇತರರು ನಟಿಸಿದ್ದಾರೆ. ಚಿತ್ರಕ್ಕೆ ಆನಂದ್‌ ಕ್ಯಾಮೆರಾ ಹಿಡಿದರೆ, ಕಿಶೋರ್‌ ಸಂಭಾಷಣೆ ಬರೆದಿದ್ದಾರೆ.

ಟಾಪ್ ನ್ಯೂಸ್

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Shivanna in lawyer look in Bhairathi Ranagal

Bhairathi Ranagal ಲಾಯರ್ ಶಿವಣ್ಣ; ಕುತೂಹಲ ಹೆಚ್ಚಿಸಿದ ಲುಕ್

Koti

Koti; ಡಾಲಿ ಕಣ್ಣಲ್ಲಿ ಕೋಟಿ ಕನಸು; ಪರಮ್‌ ನಿರ್ದೇಶನದ ಸಿನಿಮಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.