ಒಂಟಿಯಾಗಿರ್ಬೇಡಿ ಮೋದಿ,ನನ್ನನ್ನ ಮದ್ವೆ ಆಗಿ !!
Team Udayavani, Oct 7, 2017, 10:16 AM IST
ಹೊಸದಿಲ್ಲಿ: ಅತ್ಯಂತ ವಿಲಕ್ಷಣ ಘಟನೆಯೊಂದರಲ್ಲಿ ಜೈಪುರದ 40 ರ ಹರೆಯದ ಮಹಿಳೆಯೊಬ್ಬಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮದುವೆಯಾಗಬೇಕೆಂಬ ಹಠದಲ್ಲಿ ದೆಹಲಿಯ ಜಂತರ್ಮಂತರ್ನಲ್ಲಿ ಕಳೆದೊಂದು ತಿಂಗಳಿನಿಂದ ಧರಣಿ ಕುಳಿತಿದ್ದಾಳೆ.
ಓಂ ಶಾಂತಿ ಶರ್ಮಾ ಎಂಬ ಮಹಿಳೆ ಸೆಪ್ಟೆಂಬರ್ 8 ರಿಂದ ಜಂತರ್ಮಂತರ್ನಲ್ಲಿ ಕುಳಿತಿದ್ದು,’ನನ್ನ ಮಾನಸಿಕ ಸ್ಥಿತಿ ಸರಿಯಾಗಿಯೇ ಇದೆ. ನನಗೆ ಈ ಹಿಂದೆ ವಿವಾಹವಾಗಿದ್ದು, ಆದರೆ ನಮ್ಮ ಸಂಬಂಧ ಸರಿ ಹೋಗದ ಕಾರಣ ಇದೀಗ ಒಂಟಿಯಾಗಿದ್ದೇನೆ. ಮೋದಿ ಅವರೂ ನನ್ನ ಹಾಗೆ ಒಂಟಿಯಾಗಿದ್ದಾರೆ ಅವರು ನನ್ನನ್ನು ಮದುವೆಯಾಗಲಿ’ ಎಂದು ಹೇಳಿಕೊಂಡಿದ್ದಾಳೆ.
‘ಈ ವಿಚಾರ ಕೇಳಿ ಜನರು ನಗುತ್ತಾರೆ ಎಂದು ನನಗೆ ಗೊತ್ತಿದೆ. ನಾವು ಹಿರಿಯರಿಗೆ ಸಹಕಾರ ಮಾಡುವುದು ನಮ್ಮ ಸಂಸ್ಕೃತಿ.ಚಿಕ್ಕಂದಿನಿಂದಲೂ ನಾನು ಹಿರಿಯರಿಗೆ ಗೌರವ ನೀಡಿಕೊಂಡು ಬಂದವಳು. ನಾನು ಮೋದಿ ಅವರ ಕೆಲಸದಲ್ಲಿ ನೆರವಾಗಬೇಕೆಂದು ಮದುವೆ ಮಾಡಿಕೊಳ್ಳಿ ಎಂದು ಬೇಡಿಕೊಳ್ಳುತ್ತಿದ್ದೇನೆ’ ಎಂದಿದ್ದಾಳೆ.
ಮೊದಲ ವಿವಾಹದಿಂದ ಪಡೆದ 20 ವರ್ಷದ ಮಗಳನ್ನೂ ಹೊಂದಿರುವ ಶರ್ಮಾ ಸಿರಿವಂತ ಮಹಿಳೆ. ಆಕೆಯ ಬಳಿ ಸಾಕಷ್ಟು ಹಣ ಮತ್ತು ಜಮೀನು ಇದೆ ಎನ್ನಲಾಗಿದೆ.
‘ಮೋದಿ ಅವರು ಬಂದು ನನ್ನನ್ನು ಭೇಟಿಯಾಗುವ ವರೆಗೆ ನಾನು ಇಲ್ಲಿಂದ ಕದಲುವುದಿಲ್ಲ’ ಎಂದು ಪಟ್ಟು ಹಿಡಿದಿದ್ದಾಳೆ.
ಗುರುದ್ವಾರಗಳಲ್ಲಿ ಊಟ ಸೇವಿಸಿ, ಸಾರ್ವಜನಿಕ ಶೌಚಾಲಯಗಳನ್ನು ಬಳಸಿಕೊಂಡು ದಿನ ಕಳೆಯುತ್ತಿರುವ ಶಾಂತಿ ಶರ್ಮಾಗೆ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಸ್ಥಳ ಬಿಟ್ಟು ಬೇರೆ ಕಡೆ ಕೂರಲು ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ