ಪುದುಚೇರಿ: ಡೆಂಗಿ ವಿರೋಧಿ ರಾಲಿಯಲ್ಲಿ ಕಿರಣ್ ಬೇಡಿ
Team Udayavani, Oct 7, 2017, 12:09 PM IST
ಪುದುಚೇರಿ : ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರಿಂದು ಡೆಂಗಿ ಕಾಯಿಲೆಯ ಬಗ್ಗೆ ಜನಜಾಗೃತಿ ಮೂಡಿಸುವ ರಾಲಿಯಲ್ಲಿ ಭಾಗಿಯಾಗಿ ಜನರು ಡೆಂಗಿ ಕಾಯಿಲೆಯಿಂದ ದೂರವಿರಲು ಮಾಡಬೇಕಾದ ಮತ್ತು ಮಾಡಬಾರದ ಸಂಗತಿಗಳನ್ನು ಮನದಟ್ಟು ಮಾಡಿದರು.
ಡೆಂಗಿ ಕಾಯಿಲೆ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಜನರು ತಮ್ಮ ವಾಸ ಸ್ಥಳದ ಆಸುಪಾಸಿನಲ್ಲಿ ಸೊಳ್ಳೆ ಉತ್ಪಾದನೆಯಾಗದಂತೆ ನೋಡಿಕೊಳ್ಳಬೇಕು; ಸ್ವಚ್ಚತೆಯನ್ನು ಕಾಪಾಡಬೇಕು ಎಂಬ ಘೋಷಣಾ ಫಲಕಗಳನ್ನು ಬೇಡಿ ಅವರು ಸ್ವತಃ ಕೈಯಲ್ಲಿ ಹಿಡಿದುಕೊಂಡು ಮೆರವಣಿಗೆಯಲ್ಲಿ ಸಾಗಿದರು.
ಆನೇಕ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಈ ರಾಲಿಯಲ್ಲಿ ಭಾಗವಹಿಸಿದರು. ರಾಜ್ಯಪಾಲರ ಅಧಿಕೃತ ನಿವಾಸ “ರಾಜ್ ನಿವಾಸ್’ದಿಂದ ಬೆಳಗ್ಗೆ 6.15ಕ್ಕೆ ಹೊರಟ ರಾಲಿ, ಪುದುಚೇರಿಯ ಅನೇಕ ಮುಖ್ಯ ರಸ್ತೆಗಳ ಮೂಲಕ ಸಾಗಿತು.
ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಡೆಂಗಿ ಕಾಯಿಲೆಯು ಶೇ.700ರಷ್ಟು ಹೆಚ್ಚಿಳವಾಗಿದೆ ಎಂದು ಬೇಡಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್
ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು
ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ
Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Cucumber price: ಬಿಸಿಲ ಬರೆ; 1ಕೆಜಿ ಸೌತೆಕಾಯಿ ಬೆಲೆ 62 ರೂ.!
ನನಗೂ ಭೂ ವ್ಯವಹಾರಕ್ಕೂ ಸಂಬಂಧ ಇಲ್ಲ: ಬೆಂವಿವಿ ಪ್ರೊ.ಮೈಲಾರಪ್ಪ ಸ್ಪಷ್ಟನೆ
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು
IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ