ಮಳೆಗಾಲದಲ್ಲೇ  ನೀರಿಲ್ಲ ಬೇಸಗೆ ಬಲು ಭಾರ!


Team Udayavani, Oct 8, 2017, 2:54 PM IST

8-Mng-12.jpg

ಆಲಂಕಾರು: ಬೇಸಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸುವುದು ನಿರೀಕ್ಷಿತ. ಆದರೆ, ಅಲಂಕಾರು ಗ್ರಾಮದ ಕೊಂಡಾಡಿಕೊಪ್ಪ ಜನತೆಗೆ ಮಳೆಗಾಲದಲ್ಲೇ ನೀರಿನ ಅಭಾವ ತಲೆದೋರಿದೆ. ಈಗಲೇಹೀಗಾದರೆ, ಬೇಸಗೆಯಲ್ಲಿ ಇನ್ನೆಂತಹ ಸ್ಥಿತಿ ನಿರ್ಮಾಣವಾಗಬಹುದು ಎಂದು ಜನತೆ
ಚಿಂತಿಸುವಂತಾಗಿದೆ.

ಕೊಳವೆ ಬಾವಿಯ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಇದ್ದರೂ, ಪೂರೈಕೆಯಾಗುತ್ತಿರುವ ನೀರು ಸಂಪೂರ್ಣ ಕೆಸರಾಗಿದೆ. ಇದರಿಂದ ಈ ಭಾಗದ ಜನತೆ ಇಕ್ಕಟ್ಟಿಗೆ ಸಿಲುಕಿದ್ದು, ಸಾಂಕ್ರಾಮಿಕ ರೋಗದ ಭೀತಿ ಎದುರಿಸುತ್ತಿದ್ದಾರೆ.

15 ವರ್ಷ ಹಳೆಯ ಕೊಳವೆ ಬಾವಿ
ಹದಿನೈದು ವರ್ಷ ಹಳೆಯ ಕೊಳವೆ ಬಾವಿ ಇದಾಗಿದ್ದು, ಕೇಸಿಂಗ್‌ ಪೈಪ್‌ ತುಕ್ಕು ಹಿಡಿದು ರಂಧ್ರ ಬಿದ್ದಿರುವುದೇ ಕೆಸರು ನೀರು ಬರಲು ಕಾರಣ ಎನ್ನಲಾಗಿದೆ. ಸದ್ಯ ಮಳೆಗಾಲ ಮುಗಿಯುತ್ತಿದ್ದು, ಈಗಲೇ ನೀರಿನ ಒರತೆ ಕಡಿಮೆಯಾಗಿದೆ. ಬೇಸಗೆ ಕಾಲಿಡುವ ವೇಳೆಗೆ ಈ ಕೊಳವೆ ಬಾವಿಯಲ್ಲಿ ನೀರು ಸಂಪೂರ್ಣವಾಗಿ ಬತ್ತಿ ಹೋಗಿ, ಈ ಭಾಗದಲ್ಲಿ ಕುಡಿಯುವ ನೀರಿಗೆ ಬಹಳಷ್ಟು ಸಮಸ್ಯೆ ಎದುರಾಗಲಿದೆ ಎಂದು ಸ್ಥಳೀಯರು ಆತಂಕದಿಂದಲೇ ಹೇಳುತ್ತಿದ್ದಾರೆ.

44 ಮನೆ, ಶಾಲೆ,ಅಂಗನವಾಡಿಗೆ ಕೆಸರು ನೀರು:
ಈ ಕೊಳವೆ ಬಾವಿಯಿಂದ ಸರಬರಾಜಾಗುವ ನೀರನ್ನು ಕೊಂಡಾಡಿ ಕೊಪ್ಪ ಸರಕಾರಿ ಶಾಲೆ ಬಳಿಯಿರುವ ಟ್ಯಾಂಕ್‌ ಮತ್ತು ಏಂತಡ್ಕ ಎಂಬಲ್ಲಿ ನಿರ್ಮಿಸಿರುವ ಟ್ಯಾಂಕ್‌ನಲ್ಲಿ ತುಂಬಿಸಿ 44 ಮನೆಗಳಿಗೆ ಕುಡಿಯುವ ನೀರಿನ ವ್ಯಸ್ಥೆಯಡಿ ಸರಬರಾಜು ಮಾಡಲಾಗುತ್ತಿದೆ. ಈ ಭಾಗದಲ್ಲಿರುವ ಒಂದು ಸರಕಾರಿ ಶಾಲೆ ಮತ್ತು ಅಂಗನವಾಡಿಗೂ ಇದೇ ಕೊಳವೆ ಬಾವಿಯಿಂದ ನೀರು ಪೂರೈಕೆ ಆಗುತ್ತಿದೆ. ನಿತ್ಯ ಕೆಸರುಮಿಶ್ರಿತ ನೀರು ಬರುತ್ತಿದ್ದು, ರೋಗಭೀತಿಯಲ್ಲಿ ಜನ ಅನಿವಾರ್ಯವಾಗಿ ಅದನ್ನೇ ಸೇವಿಸುತ್ತಿದ್ದಾರೆ.

ನಿರ್ಲಕ್ಷ್ಯ: ಸದಸ್ಯರ ಆರೋಪ
ಮೂರು ವರ್ಷದಿಂದ ಈ ಭಾಗ ದಲ್ಲಿ ನೀರಿನ ಸಮಸ್ಯೆ ನಿರಂತ ರವಾಗಿ ಜನತೆಯನ್ನು ಕಾಡುತ್ತಿದೆ. ಬೇಸಗೆಯಲ್ಲಿ ವಿದ್ಯುತ್‌ ಅಭಾವವಿದ್ದರೆ, ಈ ವರ್ಷ ಮಳೆಗಾಲದಲ್ಲೇ ನೀರಿಲ್ಲದಂತಾಗಿದೆ. ಈ ಭಾಗದಲ್ಲಿ ನೂತನ ಕೊಳವೆ ಬಾವಿ ನಿರ್ಮಿಸಬೇಕೆಂದು ಹಲವು ಬಾರಿ ಸಾಮಾನ್ಯ ಸಭೆಯಲ್ಲಿ ನಿರ್ಣ ಯಿಸಿ ಜಿಲ್ಲಾ ಪಂಚಾಯತ್‌ಗೆ ಕಳುಹಿಸಿದ್ದರೂ ಫ‌ಲಿತಾಂಶ ಮಾತ್ರ ಶೂನ್ಯ. ಶಾಸಕರು, ಜಿ.ಪಂ. ಹಾಗೂ ತಾ.ಪಂ. ಸದಸ್ಯರಿಗೂ ಮನವಿ ಮಾಡಲಾಗಿದೆ. ಆದರೆ ನಮ್ಮ ನಿರ್ಣಯ, ಮನವಿಗಳನ್ನು ಇಲ್ಲಿ ನಿರ್ಲಕ್ಷಿಸಲಾಗಿದೆ ಎಂದು ವಾರ್ಡ್‌ನ ಸದಸ್ಯ ಸದಾನಂದ ಆಚಾರ್ಯ ಆರೋಪಿಸಿದರು.

ಬಹುಗ್ರಾಮ ಯೋಜನೆಯಡಿ ಸೇರ್ಪಡೆ
ಕುಡಿಯುವ ನೀರಿನ ಯೊಜನೆಗಳಿಗೆ ಸರಕಾರ ಸಮರ್ಪಕವಾಗಿ ಅನುದಾನ ಬಿಡುಗಡೆ ಮಾಡುತ್ತಿಲ್ಲ. ಕೊಂಡಾಡಿಕೊಪ್ಪ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ
ಸಮಸ್ಯೆಯ ಪರಹಾರಕ್ಕಾಗಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ಸೇರಿಸಿ, ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆಗೆ ಕ್ರಮ ಕೈಗೊಳ್ಳಲಾಗುವುದು. 
– ಎಸ್‌. ಅಂಗಾರ, ಶಾಸಕ, ಸುಳ್ಯ

ಅನುದಾನವಿಲ್ಲ
ಗ್ರಾಮ ಪಂಚಾಯತ್‌ಗೆ ಬಂದಷ್ಟು ಅನುದಾನಗಳು ಜಿ.ಪಂ. ಸದಸ್ಯರಿಗೆ ಬರುತ್ತಿಲ್ಲ. ವರ್ಷದಲ್ಲಿ 2 ಲಕ್ಷ ಅನುದಾನ ಬಿಡುಗಡೆಯಾಗುತ್ತಿದೆ. 14ನೇ ಹಣಕಾಸಿನ ಯೋಜನೆಯಡಿ ಗ್ರಾ.ಪಂ. ಈ ಸ್ಥಳದಲ್ಲಿ ಹೊಸ ಕೊಳವೆಬಾವಿ ನಿರ್ಮಿಸಿಕೊಳ್ಳಬಹುದು.
ಪ್ರಮೀಳಾ ಜನಾರ್ದನ್‌,
ಜಿ.ಪಂ. ಸದಸ್ಯೆ, ಬೆಳಂದೂರು ಕ್ಷೇತ್ರ

ಸದಾನಂದ ಆಲಂಕಾರು

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.