ರೌಡಿಶೀಟರ್ಗಳ ಮೇಲೆ ಫೈರಿಂಗ್
Team Udayavani, Oct 9, 2017, 11:22 AM IST
ಕಲಬುರಗಿ: ರೌಡಿಶೀಟರ್ಗಳನ್ನು ಬಂಧಿಸಲು ಹೋದ ಪೊಲೀಸ್ ಸಿಬ್ಬಂದಿ ಮೇಲೆ ಆರೋಪಿಗಳು ಪ್ರತಿದಾಳಿ ನಡೆಸಿದ ಹಿನ್ನೆಲೆಯಲ್ಲಿ ಮಹಿಳಾ ಪಿಎಸ್ಐ ಗುಂಡಿನ ದಾಳಿ ನಡೆಸಿ, ದುಷ್ಕರ್ಮಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಪಿಎಸ್ಐ
ಅಕ್ಕಮಹಾದೇವಿ ಹಾಗೂ ಪೇದೆ ಪ್ರಲ್ಹಾದ ಕುಲಕರ್ಣಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅ.2ರ ಗಾಂಧಿ ಜಯಂತಿಯಂದು ರೌಡಿಶೀಟರ್ಗಳಾದ ಚೇತನ, ಶಿವಕುಮಾರ ಹಾಗೂ ಇತರರು ವಿನಾಯಕ, ಪ್ರವೀಣ ಎಂಬುವರಿಗೆ ನಗರದ ಎಂಎಸ್ಕೆ ಮಿಲ್ ರಸ್ತೆಯ ಕಣ್ಣಿ ಮಾರ್ಕೆಟ್ ಬಳಿ ಹಣ ನೀಡುವಂತೆ ಪೀಡಿಸಿ ಹೊಟ್ಟೆಗೆ ಚಾಕುವಿನಿಂದ ಇರಿದಿದ್ದರು. ಭಾನುವಾರ ಬೆಳಗ್ಗೆ ಕೂಡ ಅವರು ದರೋಡೆಗೆ ಹೊಂಚು ಹಾಕಿದ್ದರು.
ಇದನ್ನರಿತ ರಾಘವೇಂದ್ರ ಪೊಲೀಸ್ ಠಾಣೆಯ ಪಿಎಸ್ಐ ಅಕ್ಕಮಹಾದೇವಿ, ಸಿಬ್ಬಂದಿಯೊಂದಿಗೆ ಬಂಧಿಸಲು ತೆರಳಿದ್ದರು. ಆಗ ಆರೋಪಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲು ಮುಂದಾದರು. ಅಲ್ಲದೇ ಜೀಪ್ ಮೇಲೆ ಕಲ್ಲೆಸೆದರು. ಈ ಸಂದರ್ಭದಲ್ಲಿ ಪಿಎಸ್ಐ ಗಾಳಿಯಲ್ಲಿ ಗುಂಡು ಹಾರಿಸಿದರು. ಇದಕ್ಕೂ ಬಗ್ಗದಿದ್ದಾಗ ರೌಡಿ ಶೀಟರ್ಗಳ ಕಾಲಿಗೆ ಗುಂಡು ಹಾರಿಸಲಾಯಿತು. ಈ ನಡುವೆ, ಅಶೋಕ ನಗರ ಠಾಣೆ ಇನ್ಸ್ಪೆಕ್ಟರ್ ಮಿನೇಜನಸ್ ಸ್ಥಳಕ್ಕೆ ಧಾವಿಸಿ ರೌಡಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾದರು. ಘಟನೆಯಲ್ಲಿ
ಪಿಎಸ್ಐ ಅಕ್ಕಮಹಾದೇವಿ ಹಾಗೂ ಪೇದೆ ಪ್ರಲ್ಹಾದ ಕುಲಕರ್ಣಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿಗಾರರ ಜೊತೆ ಮಾತನಾಡಿದ ಈಶಾನ್ಯ ವಲಯ ಐಜಿಪಿ ಅಲೋಕಕುಮಾರ, ಜೀವದ ಹಂಗು ತೊರೆದು ರೌಡಿ ಶೀಟರ್ಗಳಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿ ಕಾರ್ಯಾಚರಣೆ ನಡೆಸಿದ ಪಿಎಸ್ಐ ಅಕ್ಕಮಹಾದೇವಿ ಹಾಗೂ ಸಿಬ್ಬಂದಿಗೆ
ಮುಖ್ಯಮಂತ್ರಿಗಳ ಸೇವಾ ಪದಕಕ್ಕೆ ಶಿಫಾರಸು ಮಾಡಲಾಗುವುದು ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ
Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
MUST WATCH
ಹೊಸ ಸೇರ್ಪಡೆ
Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ