ಸಾಮಾನ್ಯ ವರ್ಗದ ಸರ್ಕಾರಿ ನೌಕರರಿಗೆ ಅನ್ಯಾಯ


Team Udayavani, Oct 9, 2017, 1:42 PM IST

vij-2.jpg

ವಿಜಯಪುರ: ಬಡ್ತಿ ಮೀಸಲಾತಿಯಲ್ಲಿನ ಅವೈಜ್ಞಾನಿಕ ನೀತಿ-ನಿಯಮಾವಳಿಗಳಿಂದಾಗಿ ಅಲ್ಪಸಂಖ್ಯಾತ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗದ ಸರ್ಕಾರಿ ನೌಕರರು ಅನೇಕ ರೀತಿಯ ಅನ್ಯಾಯ ಎದುರಿಸುವಂತಾಗಿದೆ. ಪರಿಣಾಮವಾಗಿ ನೌಕರರು ಮಾನಸಿಕ ನೋವು ಅನುಭವಿಸುತ್ತಿದ್ದಾರೆ ಎಂದು
ಅಹಿಂಸಾ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷ ಎಂ.ನಾಗರಾಜ ಹೇಳಿದರು.

ನಗರದ ದರಬಾರ್‌ ಹೈಸ್ಕೂಲ್‌ ಮೈದಾನದಲ್ಲಿ ಅಲ್ಪಸಂಖ್ಯಾತ, ಹಿಂದುಳಿದ ವರ್ಗ ಹಾಗೂ ಸಾಮಾನ್ಯ ವರ್ಗಗಳ ಸರ್ಕಾರಿ ನೌಕರರ ಹಾಗೂ ಸಿಬ್ಬಂದಿ, ನಿವೃತ್ತರ ಹಿತರಕ್ಷಣಾ ಒಕ್ಕೂಟದ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕೇವಲ ಸಂಬಳಕ್ಕಾಗಿ ಸರ್ಕಾರಿ ನೌಕರ ನೌಕರಿ ಮಾಡುವುದಿಲ್ಲ. ಜನಸೇವೆಯನ್ನು ತಮ್ಮ ಧ್ಯೇಯವಾಗಿರಿಸಿಕೊಳ್ಳುವ ಜೊತೆಗೆ ಸಮಾಜದಲ್ಲಿ ಘನತೆ ಸಂಪಾದಿಸುವ ದೃಷ್ಟಿಯಿಂದಲೂ ಕಾರ್ಯ ನಿರ್ವಹಿಸುತ್ತಾರೆ. ಆದರೆ ನ್ಯಾಯಯುತವಾಗಿ ದೊರಕಬೇಕಾದ ಬಡ್ತಿ ದೊರಕದೇ ಮನಸ್ಸಿಗೆ ನೋವುಂಟಾಗುವುದಂತೂ ಸತ್ಯ ಎಂದರು.

ತನ್ನೊಡನೆ ಸೇವೆಗೆ ಪದಾರ್ಪಣೆ ಮಾಡಿದ, ತನ್ನಷ್ಟೇ ವಿದ್ಯಾರ್ಹತೆ ಹೊಂದಿದ ಆತನ ಪರಿಶಿಷ್ಟ ಪಂಗಡದ ಸಹುದ್ಯೋಗಿ ಮೇಲಾಧಿಕಾರಿಯಾಗುತ್ತಾನೆ. ಆದರೆ ಸಾಮಾನ್ಯ ವರ್ಗಕ್ಕೆ ಸೇರಿದ ವ್ಯಕ್ತಿ ಮಾತ್ರ ಪ್ರಮೋಷನ್‌ನಿಂದ ವಂಚಿತವಾಗಿ ಕೆಳಹಂತದ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ. ಇದು ಸಹಜವಾಗಿಯೇ ನೌಕರರಲ್ಲಿ ನೋವಿಗೆ ಕಾರಣವಾಗುತ್ತದೆ ಎಂದರು.

ನಾವು ಮೀಸಲಾತಿ ವಿರೋಧಿಗಳಲ್ಲ ಎಂದು ಸ್ಪಷ್ಟಪಡಿಸಿ ಅವರು, ಸುಪ್ರೀಂಕೋರ್ಟ್‌ ಸಹ ಮೀಸಲಾತಿ ಅವಶ್ಯಕತೆ ಒತ್ತಿ ಹೇಳಿದೆ. ನೇಮಕಾತಿ ಸಂದರ್ಭದಲ್ಲಿ, ಶೈಕ್ಷಣಿಕ ಸೇವೆ ಪಡೆದುಕೊಳ್ಳುವಲ್ಲಿ ಮೀಸಲಾತಿ ಇರಬೇಕು. ಆದರೆ ಬಡ್ತಿ ಸಮಯದಲ್ಲಿ ಮೀಸಲಾತಿ ಇರಬೇಕಾಗಿರುವುದು ಅವಶ್ಯವಲ್ಲ
ಎಂಬುದು ನಮ್ಮ ಪ್ರತಿಪಾದನೆ ಎಂದರು.

ಅವೈಜ್ಞಾನಿಕ ಬಡ್ತಿ ಮೀಸಲಾತಿ ವಿರುದ್ಧ ನಡೆಯುತ್ತಿರುವ ಹೋರಾಟ ನಿನ್ನೆ ಮೊನ್ನೆಯದಲ್ಲ. 1978ರಿಂದಲೂ ನಿರಂತರವಾಗಿ ಈ ಬಡ್ತಿ ಮೀಸಲಾತಿ ವಿರುದ್ಧ ಕಾನೂನಾತ್ಮಕ ಹೋರಾಟ ಕೈಗೊಳ್ಳಲಾಗುತ್ತಿದೆ. ಸುಪ್ರೀಂಕೋರ್ಟ್‌ಗೆ ಹೋಗಿ ನ್ಯಾಯ ಪಡೆದುಕೊಳ್ಳಲಾಗಿದೆ. ಆದರೆ ಸುಪ್ರೀಂಕೋರ್ಟ್‌ ತೀರ್ಪು ಅನುಷ್ಠಾನದ ಹೊಣೆ ಹೊತ್ತ ಸರ್ಕಾರಗಳು ಮಾತ್ರ ಸುಪ್ರೀಂ ಆದೇಶ ಪಾಲಿಸಲಿಲ್ಲ. ಬದಲಾಗಿ ಹಿಂಬಡ್ತಿ ಪಡೆದ ಪರಿಶಿಷ್ಟ ಪಂಗಡ ಅಧಿಕಾರಿಗಳು ಆಡಳಿತ ಯಂತ್ರಕ್ಕೆ ಒತ್ತಡದಿಂದಾಗಿ ನ್ಯಾಯಾಲಯದ ಆದೇಶಕ್ಕೆ ವಿರುದ್ಧವಾಗಿ ಸಂಸತ್‌ನಲ್ಲಿ ಸಂವಿಧಾನ ತಿದ್ದುಪಡಿ ಮಾಡಿ ಮಸೂದೆ ಅಂಗೀಕರಿಸಲಾಗಿದೆ ಎಂದರು.

ಇದು ನಮಗೆ ಹಿನ್ನೆಡೆಯಾದರೂ ಸಹ ನಾವು ಹೋರಾಟ ಮಾತ್ರ ಕೈ ಬಿಡಲಿಲ್ಲ. ಸರ್ವೋತ್ಛ ನ್ಯಾಯಾಲಯದ ತೀರ್ಪು ಅಸಿಂಧು ಗೊಳಿಸುವ ಕಾರಣದಿಂದಾಗಿಯೇ ಬಡ್ತಿ ಮೀಸಲಾತಿಗೆ ಸಂವಿಧಾನ ತಿದ್ದುಪಡಿ ಮಾಡಲಾಗಿದೆ. ಈ ಬಗ್ಗೆ ನ್ಯಾಯಾಲಯ ಗಮನ ಹರಿಸಬೇಕು ಎಂಬ ವಿಷಯವನ್ನೇ ಕೇಂದ್ರಿಕರಿಸಿ ಪುನಃ ಸುಪ್ರೀಂಗೆ ಅರ್ಜಿ ಸಲ್ಲಿಸಿದೆವು. ಅದರೊಂದಿಗೆ ನ್ಯಾಯಾಂಗ ನಿಂದನೆ ಸಹ ದಾಖಲಿಸಲಾಯಿತು ಎಂದು ಕಾನೂನು ಹೋರಾಟದ ಕುರಿತು ವಿವರಿಸಿದರು.

ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀಗಳು, ಯರನಾಳ ವಿರಕ್ತಮಠದ ಸಂಗನಬಸವ ಶ್ರೀಗಳು, ಹಜರತ್‌ ಸೈಯ್ಯದ್‌ ತನ್ವೀರಪೀರಾ ಹಾಶ್ಮೀ, ಬುರಾಣಪುರ ಆರೂಢಾಶ್ರಮದ ಮಾತೋಶ್ರೀ ಯೋಗೇಶ್ವರಿ ಮಾತಾಜಿ ಸಾನ್ನಿಧ್ಯ ವಹಿಸಿದ್ದರು. ಪೀಟರ್‌ ಅಲೆಕ್ಸಾಂಡರ್‌, ವಿಶ್ವನಾಥ ಭಾವಿ ಇದ್ದರು. ಸಂಘಟನೆ ಅಧ್ಯಕ್ಷ ವಿಜಯಕುಮಾರ ಹಲಕುಡೆ
ಪ್ರಾಸ್ತಾವಿಕ ಮಾತನಾಡಿದರು. ಮೆಹತಾಬ್‌ ಕಾಗವಾಡ ನಿರೂಪಿಸಿದರು.

ಟಾಪ್ ನ್ಯೂಸ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Dharwad: ಐಐಟಿ ನೂತನ ನಿರ್ದೇಶಕರಾಗಿ ಪ್ರೊ.ಮಹಾದೇವ ನೇಮಕ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

8-kvasantha-bangera

K. Vasantha Bangera: ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅಸ್ತಂಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.