ತಿಪ್ಪೆಯಲ್ಲಿ ಸಿಕ್ಕಿದ್ದ ಮಗು ಅಮೆರಿಕಕ್ಕೆ ದತ್ತು ಪಕ್ಕಾ
Team Udayavani, Oct 11, 2017, 10:01 AM IST
ಬೆಳಗಾವಿ: ಮೂರೂವರೆ ವರ್ಷಗಳ ಹಿಂದೆ ತಿಪ್ಪೆಯಲ್ಲಿ ಸಿಕ್ಕಿದ್ದ ಅನಾಥ ಮಗುವನ್ನು ಅಮೆರಿಕಕ್ಕೆ ದತ್ತು ನೀಡಲು ಧಾರವಾಡ ಹೈಕೋರ್ಟ್ ಹಸಿರು ನಿಶಾನೆ ತೋರಿದ್ದು, ಇನ್ನು ಕೆಲವೇ ದಿನಗಳಲ್ಲಿ ಅನಾಥ ಮಗು ವಿದೇಶಕ್ಕೆ ತೆರಳಲಿದೆ. ಮಗುವನ್ನು ಅಮೆರಿಕಕ್ಕೆ ದತ್ತು ನೀಡಲು ಧಾರವಾಡ ಹೈಕೋರ್ಟ್ ಪೀಠದ ನ್ಯಾ. ಶ್ರೀನಿವಾಸ ಹರೀಶಕುಮಾರ ಮಂಗಳವಾರ ಆದೇಶ ಹೊರಡಿಸಿದರು. ನಗರದ ಸ್ವಾಮಿ ವಿವೇಕಾನಂದ ಸೇವಾ ಪ್ರತಿಷ್ಠಾನದ ಗಂಗಮ್ಮ ಚಿಕ್ಕುಂಬಿಮಠ ಬಾಲ ಕಲ್ಯಾಣ ಕೇಂದ್ರದ ಅನಾಥ ಆಶ್ರಮದಲ್ಲಿ ವಾಸಿಸುತ್ತಿರುವ ಮಗು ಕೆಲವೇ ದಿನಗಳಲ್ಲಿ ಅಮೆರಿಕಕ್ಕೆ ದತ್ತು ಹೋಗಲಿದೆ ಎಂದು “ಉದಯವಾಣಿ’ ವಿಶೇಷ ವರದಿ ಪ್ರಕಟಿಸಿತ್ತು.
ನಾಲ್ಕು ಮಕ್ಕಳವರೆಗೆ ದತ್ತು ಅವಕಾಶ: 3-4 ದಿನಗಳಿಂದ ವಾದ ಆಲಿಸಿದ ಹೈಕೋರ್ಟ್ ಪೀಠ ಮಗುವನ್ನು ದತ್ತು ನೀಡಲು ಒಪ್ಪಿಗೆ ನೀಡಿದೆ. ಈ ಮೊದಲು ಮಗುವನ್ನು ಆನಿವಾಸಿ ಭಾರತೀಯ ದಂಪತಿಗೆ ನೀಡಲು ಬೆಳಗಾವಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರಾಕರಿಸಿತ್ತು. ಈಗಾಗಲೇ ಒಂದು ಹೆಣ್ಣು ಮಗುವನ್ನು ದತ್ತು ಪಡೆದ ದಂಪತಿಗೆ ಮತ್ತೆ ಎರಡನೇ ಹೆಣ್ಣು ಮಗು ಏಕೆ ಎಂದು ಪ್ರಶ್ನಿಸಿ ಆದೇಶ ನೀಡಲು ಒಪ್ಪಿಗೆ ಸೂಚಿಸಿರಲಿಲ್ಲ. ಆದೇಶ ಪ್ರಶ್ನಿಸಿ ಗಂಗಮ್ಮ ಚಿಕ್ಕುಂಬಿಮಠ ಬಾಲ ಕಲ್ಯಾಣ ಕೇಂದ್ರ ಹೈಕೋರ್ಟ್ ಮೆಟ್ಟಿಲೇರಿತ್ತು. ಯಾವುದೇ ದಂಪತಿ ನಾಲ್ಕು ಮಗುವಿನವರೆಗೆ ದತ್ತು ಪಡೆಯಲು ಅವಕಾಶವಿದೆ. ಹೀಗಾಗಿ ಎರಡನೇ ಮಗುವನ್ನು ದತ್ತು ನೀಡಬಹುದು ಎಂದು ಹೈಕೋರ್ಟ್ ಆದೇಶದಲ್ಲಿ ಉಲ್ಲೇಖೀಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ