ಬುದ್ಧಿಗೆ ಕಸರತ್ತು ನೀಡುವ ಚದುರಂಗ: ಸಚಿವ ರಮಾನಾಥ ರೈ


Team Udayavani, Oct 11, 2017, 11:29 AM IST

11-19.jpg

ಮಂಗಳೂರು: ಚದುರಂಗವು ಬುದ್ಧಿಗೆ ಕಸರತ್ತು ನೀಡುವ ಆಟವಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಬಹಳಷ್ಟು ಚದುರಂಗ ಕ್ರೀಡಾಪಟುಗಳನ್ನು ಹೊರಹೊಮ್ಮಿಸಿದ ದೇಶ ನಮ್ಮದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು.

ದ.ಕ ಜಿಲ್ಲಾ ಪಂಚಾಯತ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮಂಗಳೂರು ಉತ್ತರ ವಲಯ, ಸಂತ ಅಲೋಶಿಯಸ್‌ ಕಾಲೇಜು ಹಿ.ಪ್ರಾ. ಶಾಲೆಯ ಆಶ್ರಯದಲ್ಲಿ 3 ದಿನಗಳ ಕಾಲ ನಡೆಯುವ 14 ಮತ್ತು 17ರ ವಯೋಮಿತಿಯ ಬಾಲಕ, ಬಾಲಕಿಯರ ರಾಜ್ಯ ಮಟ್ಟದ ಚದುರಂಗ ಸ್ಪರ್ಧೆಯನ್ನು ಅವರು ಮಂಗಳವಾರ ಉದ್ಘಾಟಿಸಿದರು.

ಸಚಿವ ಯು. ಟಿ.ಖಾದರ್‌ ಮಾತನಾಡಿ, ತಾಳ್ಮೆ, ಸಹನೆಯ ಜತೆಗೆ ಮೆದುಳನ್ನು ಶಕ್ತಿಯುತವಾಗಿ ಮಾಡುವ ಶಕ್ತಿ ಚದುರಂಗ ಆಟಕ್ಕಿದೆ. ತಾಳ್ಮೆ, ಸಹನೆಯಿಂದ ಮುಂದುವರಿದರೆ ಯಶಸ್ಸು ಖಚಿತ ಎಂಬುದನ್ನೂ ಈ ಆಟ ತಿಳಿಸಿಕೊಡುತ್ತದೆ ಎಂದರು.

ಅಂತಾರಾಷ್ಟ್ರೀಯ ಮಟ್ಟದ ಚೆಸ್‌ ಸಾಧಕ ವಿಯಾನ್ನಿ ಆ್ಯಂಟನಿಯೋ ಡಿಕುನ್ಹಾ, ವೇಟ್‌ಲಿಫ್ಟರ್‌ ಆ್ಯಸ್ಟಿನ್‌ ಡಿ’ಸೋಜಾ, ಇಂಟರ್‌ನ್ಯಾಶನಲ್‌ ಸ್ಟ್ರಾಂಗೆಸ್ಟ್‌ ಮ್ಯಾನ್‌ ಪ್ರಸಾದ್‌ ಶೆಟ್ಟಿ, ಟೇಬಲ್‌ ಟೆನಿಸ್‌ ಸಾಧಕ ಕರಣ್‌ ಗೊಲ್ಲರಕೇರಿ, ಅಂತಾರಾಷ್ಟ್ರೀಯ ಈಜು ಸಾಧಕ ಮನೋಹರ್‌ ಪ್ರಭು ಅವರನ್ನು ಈ ವೇಳೆ ಸಮ್ಮಾನಿಸಲಾಯಿತು.

ಶಾಸಕ ಜೆ. ಆರ್‌.ಲೋಬೊ ಅಧ್ಯಕ್ಷತೆ ವಹಿಸಿದ್ದರು. ಸಂತ ಅಲೋಶಿಯಸ್‌ ಶಿಕ್ಷಣ ಸಮೂಹ ಸಂಸ್ಥೆಗಳ ರೆಕ್ಟರ್‌ ಫಾ| ಡೈನೇಶಿಯಸ್‌ ವಾಸ್‌, ಸರಕಾರಿ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ದಿವಾಕರ್‌ ಶೆಟ್ಟಿ, ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಲಿಲ್ಲಿ ಪಾಯ್ಸ, ಫಾ| ರವಿ ಸಂತೋಷ್‌ ಕಾಮತ್‌, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ರಘುನಾಥ, ಸಂತ ಅಲೋಶಿಯಸ್‌ ಕಾಲೇಜು ಸಂಚಾಲಕ ಫಾ| ಎರಿಕ್‌ ಮಥಾಯಸ್‌, ಅಲೋಶಿಯಸ್‌ ಶಾಲಾ ಪಿಟಿಎ ಉಪಾಧ್ಯಕ್ಷ ಲಾಯ್‌ ನರೊನ್ಹಾ, ಸಂತ ಅಲೋಶಿಯಸ್‌ ಕಾಲೇಜು ದೈಹಿಕ ಶಿಕ್ಷಣ ಶಿಕ್ಷಕ ಅರುಣ್‌ ಬ್ಯಾಪ್ಟಿಸ್ಟ್‌, ಹರೀಶ್‌, ಮಂಗಳೂರು ಉತ್ತರ ವಲಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಆಶಾ ನಾಯಕ್‌, ಸಂತ ಅಲೋಶಿಯಸ್‌ ಕಾಲೇಜು ಹಿ.ಪ್ರಾ. ಶಾಲೆ ಮುಖ್ಯೋಪಾಧ್ಯಾಯಿನಿ ಫಿಲೋಮಿನಾ ಲೂವಿಸ್‌ ಉಪಸ್ಥಿತರಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ವೈ. ಶಿವರಾಮಯ್ಯ ಸ್ವಾಗತಿಸಿದರು. ಮಂಗಳೂರು ಉತ್ತರ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಕೆ. ಎಲ್‌. ವಂದಿಸಿದರು. ಬಿ. ರಾಮಚಂದ್ರ ರಾವ್‌ ನಿರೂಪಿಸಿದರು.

600 ಮಂದಿ ಸ್ಪರ್ಧಾಳುಗಳು
ರಾಜ್ಯದ ವಿವಿಧ 34 ಶೈಕ್ಷಣಿಕ ಜಿಲ್ಲೆಗಳಿಂದ ಸುಮಾರು 600 ಮಂದಿ ವಿದ್ಯಾರ್ಥಿಗಳು ಚೆಸ್‌ ಪಂದ್ಯಾಟದಲ್ಲಿ ಭಾಗವಹಿಸಿದ್ದಾರೆ. 14 ಮತ್ತು 17ರ ವಯೋಮಿತಿ ವಿಭಾಗದಲ್ಲಿ ಬಾಲಕ ಮತ್ತು ಬಾಲಕಿಯರಿಗೆ ಸ್ಪರ್ಧೆ ನಡೆಯಲಿದೆ. ಅ. 12ರಂದು ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದೆ. 

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.