ಇಂದಿನಿಂದ ಹಾಸನಾಂಬಾ ಜಾತ್ರಾ ಮಹೋತ್ಸವ
Team Udayavani, Oct 12, 2017, 6:45 AM IST
ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆಯ ಜಾತ್ರಾ ಮಹೋತ್ಸವ ಇಂದಿನಿಂದ ಅ. 21 ರವರೆಗೆ ನಡೆಯಲಿದೆ. ಗುರುವಾರ ಮಧ್ಯಾಹ್ನ 12.30ಕ್ಕೆ ದೇಗುಲ ದ್ವಾರ ತೆರೆದು ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲು ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಸಿದೆ.
ಭಕ್ತರ ಸರತಿ ನಿಲ್ಲುವ ಹಾಗೂ ವಿಶೇಷ ದರ್ಶನದ ಸರತಿ ಸಾಗುವ ಹೊಸಲೈನ್ ರಸ್ತೆಯಲ್ಲಿ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ. ಮಳೆಯಿಂದ ರಕ್ಷಣೆಗೂ ವ್ಯವಸ್ಥೆ ಕಲ್ಪಿಸಲಾಗಿದೆ. ಕುಡಿವ ನೀರು ಸೇರಿದಂತೆ ಮೂಲಸೌಲಭ್ಯಗಳನ್ನೂ ಕಲ್ಪಿಸಲಾಗಿದೆ. ಅಲ್ಲದೆ ತುರ್ತು ಪರಿಸ್ಥಿತಿ ನಿರ್ವಹಿಸಲು ವೈದ್ಯ ಚಿಕಿತ್ಸೆಯ ವ್ಯವಸ್ಥೆಯೂ ಇದೆ.
ದೇವಿಯ ದರ್ಶನಕ್ಕೆ ಒಟ್ಟು 8 ದಿನಗಳು ಮಾತ್ರ ಅವಕಾಶವಿದ್ದು, ಗರ್ಭಗುಡಿಯ ಸ್ವತ್ಛತೆ ಹಾಗೂ ದೇವಿಗೆ ನೈವೇದ್ಯ ಅರ್ಪಿಸುವ ಸುಮಾರು 2 ಗಂಟೆ ಹೊರತುಪಡಿಸಿ ದಿನದ 22 ಗಂಟೆಗಳ ಕಾಲ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಭಕ್ತರ ವಾಹನಗಳ ನಿಲುಗಡೆಗೆ ಸಂತೆಪೇಟೆಯ ಗೊರೂರ ರಸ್ತೆಯ ಬದಿ ಹಾಗೂ ಕಸ ಸಂಸ್ಕರಣೆಯ ಘಟಕದ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.
ತ್ವರಿತ ನೇರ ದರ್ಶನಕ್ಕೆ 1000 ರೂ. ಮತ್ತು ವಿಶೇಷ ದರ್ಶನಕ್ಕೆ 300 ರೂ. ಟಿಕೆಟ್ ದರ ನಿಗದಿಪಡಿಸಲಾಗಿದೆ. ಜಿಲ್ಲಾ ಹೆಚ್ಚುವರಿ ಎಸ್ಪಿವಿ.ಎಂ.ಜ್ಯೋತಿ ನೇತೃತ್ವದಲ್ಲಿ 400 ಪೊಲೀಸ್ ಸಿಬ್ಬಂದಿ ಹಾಗೂ 100 ಮಂದಿ ಗೃಹ ರಕ್ಷಕರನ್ನು ಬಂದೋಬಸ್ತ್ ಮಾಡಲಾಗಿದೆ. ಮೂವರು ಡಿವೈಎಸ್ಪಿ$ಗಳು ಮೂರು ಶಿಪ್ಟ್ಗಳಲ್ಲಿ ಭದ್ರತೆಯ ಮೇಲುಸ್ತುವಾರಿ ವಹಿಸುವರು. ಜೊತೆಗೆ 12 ಸಿಸಿ ಕ್ಯಾಮೆರಾಗಳ ರಕ್ಷಣೆಯೂ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ