ಆರೆಸ್ಸೆಸ್ ಬೈಠಕ್ನಲ್ಲಿ ಗೌರಿ ಲಂಕೇಶ್ಗೆ ಶ್ರದ್ಧಾಂಜಲಿ
Team Udayavani, Oct 13, 2017, 9:58 AM IST
ಭೋಪಾಲ: ಭೋಪಾಲದಲ್ಲಿ ಗುರುವಾರ ಆರಂಭಗೊಂಡ ಆರೆಸ್ಸೆಸ್ನ ಮೂರು ದಿನಗಳ ಅ.ಭಾ. ಕಾರ್ಯಕಾರಿ ಮಂಡಲ ಬೈಠಕ್ನಲ್ಲಿ ಒಂದು ವರ್ಷದಲ್ಲಿ ನಿಧನ ಹೊಂದಿದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್, ಹಿರಿಯ ವಿಜ್ಞಾನಿ ಡಾ| ಯು.ಆರ್. ರಾವ್, ಮಾಜಿ ಮುಖ್ಯಮಂತ್ರಿ ಧರಂ ಸಿಂಗ್, ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ, ಆರೆಸ್ಸೆಸ್ನ ಹಿರಿಯ ಮುಂದಾಳು ಜನಾರ್ದನ ಉಪ್ಪಳ, ರಾಷ್ಟ್ರಸೇವಿಕಾ ಸಮಿತಿಯ ಶಾರದಾ ಘಾಟೆ ಮೊದಲಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಸಮಾಜಕ್ಕೆ ತಮ್ಮದೇ ಆದ ರೀತಿಯಲ್ಲಿ ಸೇವೆ ಸಲ್ಲಿಸಿರುವ ಇವರಿಗೆಲ್ಲ ಶ್ರದ್ಧಾಂಜಲಿ ಸಲ್ಲಿಸಲಾ ಯಿತು ಎಂದು ಆರೆಸ್ಸೆಸ್ ಪ್ರಚಾರ ಪ್ರಮುಖರಾದ ಮನಮೋಹನ್ ವೈದ್ಯ ತಿಳಿಸಿದ್ದಾರೆ. ಭೋಪಾಲ್ನಲ್ಲಿ 3 ದಿನಗಳ ಕಾಲ ನಡೆಯಲಿರುವ ಆರೆಸ್ಸೆಸ್ನ ಅಖೀಲ ಭಾರತೀಯ ಕಾರ್ಯಕಾರಿಣಿ ಮಂಡಲ್ ಸಭೆ ಗುರುವಾರ ಆರಂಭವಾಗಿದೆ. ಇದೇ ವೇಳೆ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ಪುತ್ರನ ವಿರುದ್ಧದ ಆರೋಪಗಳ ಬಗ್ಗೆ ಆರೆಸ್ಸೆಸ್ ಪ್ರತಿಕ್ರಿಯಿ ಸಿದ್ದು, ಆರೋಪ ಕುರಿತು ತನಿಖೆ ಮಾಡಬೇಕು. ಆದರೆ, ಆರೋಪಕ್ಕೆ ಸಂಬಂಧಿಸಿ ಸೂಕ್ತ ಸಾಕ್ಷ್ಯಾಧಾರ ಗಳೂ ಇರಬೇಕು ಎಂದಿದೆ.
ಇದೇ ವೇಳೆ, “ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿ ದ್ದರೆ ಆ ಕುರಿತು ಪರಸ್ಪರ ಮಾತುಕತೆ, ಚರ್ಚೆ ನಡೆಸ ಬೇಕು. ಆದರೆ ಅದು ನಿಂದನೆಗೆ ದಾರಿಯಾಗ ಬಾರದು’ ಎಂದು ಜಂಟಿ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
MUST WATCH
ಹೊಸ ಸೇರ್ಪಡೆ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ