ಆರುಷಿ -ಹೇಮರಾಜ್‌ ಕೊಲೆ ಕೇಸು: ತಲ್ವಾರ್‌ ದಂಪತಿ ಖುಲಾಸೆ


Team Udayavani, Oct 13, 2017, 10:22 AM IST

46.jpg

ಅಲಹಾಬಾದ್‌: ದೇಶಾದ್ಯಂತ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಆರುಷಿ ತಲ್ವಾರ್‌- ಹೇಮರಾಜ್‌ ಕೊಲೆ ಪ್ರಕರಣದಲ್ಲಿ ಮತ್ತೂಂದು ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಆರುಷಿ ಹೆತ್ತವರನ್ನು ಅಲಹಾಬಾದ್‌ ಹೈಕೋರ್ಟ್‌ ಖುಲಾಸೆಗೊಳಿಸಿ ಗುರುವಾರ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಸಂದರ್ಭವಾಗಲೀ ಅಥವಾ ಸಾಕ್ಷ್ಯಗಳಾಗಲೀ ರಾಜೇಶ್‌ ಹಾಗೂ ನೂಪುರ್‌ ತಲ್ವಾರ್‌ ಅವರನ್ನು ತಪ್ಪಿತಸ್ಥರು ಎಂದು ಸಾಬೀತುಪಡಿಸುವಲ್ಲಿ ವಿಫ‌ಲವಾಗಿದೆ. ಹಾಗಾಗಿ, ಈ ಇಬ್ಬರನ್ನೂ ನಿರ್ದೋಷಿಗಳೆಂದು ಪರಿಗಣಿಸಲಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಈ ಮೂಲಕ 2013ರ ನ.28ರಂದು ಗಾಜಿಯಾಬಾದ್‌ ಸಿಬಿಐ ಕೋರ್ಟ್‌ನಿಂದ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ರಾಜೇಶ್‌-ನೂಪುರ್‌ ದಂಪತಿಯ 9 ವರ್ಷಗಳ ಸಂಕಷ್ಟಕ್ಕೆ ತೆರೆಬಿದ್ದಂತಾಗಿದೆ. ದಂತವೈದ್ಯರಾಗಿರುವ ತಲ್ವಾರ್‌ ದಂಪತಿ ಸದ್ಯ ಗಾಜಿಯಾಬಾದ್‌ನ ದಸ್ನಾ ಜೈಲಿನಲ್ಲಿದ್ದು, ಶುಕ್ರವಾರ ಅವರು ಬಿಡುಗಡೆಯಾಗುವ ಸಾಧ್ಯತೆಯಿದೆ. ತೀರ್ಪು ಕುರಿತು ಪ್ರತಿಕ್ರಿಯಿಸಿರುವ ಸಿಬಿಐ, ಆದೇಶವನ್ನು ಅಧ್ಯ ಯನ ಮಾಡಿ, ಮುಂದಿನ ಕ್ರಮದ ಬಗ್ಗೆ ನಿರ್ಧರಿಸುತ್ತೇವೆ ಎಂದಿದೆ.

ನ್ಯಾಯಾಂಗಕ್ಕೆ ಧನ್ಯವಾದ: ಇದೇ ವೇಳೆ, “ಈ ತೀರ್ಪಿಗಾಗಿ ನಾನು ನ್ಯಾಯಾಂಗಕ್ಕೆ ಧನ್ಯವಾದ ಸಲ್ಲಿಸಬಯಸುತ್ತೇನೆ. ಈಗಾ ಗಲೇ ಅವರು (ತಲ್ವಾರ್‌ ದಂಪತಿ) ಸಾಕಷ್ಟು ನೊಂದಿ ದ್ದಾರೆ. ಭಾವನಾತ್ಮಕವಾಗಿಯೂ ಕುಸಿದಿದ್ದಾರೆ. ಈ ವಯ ಸ್ಸಲ್ಲಿ ಮಗಳು ಜೈಲಿನ ಕಂಬಿ ಎಣಿಸುವುದನ್ನು ನೋಡುತ್ತಾ ಕೂರಲು ನನ್ನಿಂದ ಸಾಧ್ಯವಿಲ್ಲ. ಈಗ ಅವರಿಗಾದ ಅನ್ಯಾ ಯವನ್ನು ಸರಿಪಡಿಸಿದ್ದಕ್ಕೆ ನ್ಯಾಯಾಲ ಯಕ್ಕೆ ಋಣಿಯಾಗಿ ರುತ್ತೇನೆ’ ಎಂದು ನೂಪುರ್‌ ಅವರ ತಂದೆ, ವಾಯು ಪಡೆಯ ನಿವೃತ್ತ ಅಧಿಕಾರಿ ಬಿ.ಜಿ.ಚಿಟ್ನಿಸ್‌ ಹೇಳಿದ್ದಾರೆ.

ಆಗಿದ್ದೇನು?
2008ರ ಮೇ ತಿಂಗಳಲ್ಲಿ ತಲ್ವಾರ್‌ ದಂಪತಿಯ ಏಕೈಕ ಪುತ್ರಿ ಆರುಷಿಯ ಮೃತದೇಹ ನೋಯ್ಡಾದಲ್ಲಿರುವ ಅವರ ಮನೆಯೊಳಗೆ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಘಟನೆ ನಡೆದ ಬಳಿಕ ಕೆಲಸದಾಳು ಹೇಮರಾಜ್‌(45) ನಾಪತ್ತೆಯಾಗಿದ್ದರಿಂದ ಆರಂಭದಲ್ಲಿ ಆತನ ಮೇಲೆಯೇ ಸಂಶಯ  ಮೂಡಿತ್ತು. ಆದರೆ, ಒಂದು ದಿನದ ಬಳಿಕ ಹೇಮರಾಜ್‌ ಮೃತದೇಹವು ಅದೇ ಮನೆಯ ಟೆರೇಸ್‌ನಲ್ಲಿ ಪತ್ತೆಯಾ ಗಿತ್ತು. ಪ್ರಕರಣವು ಹಲವು ತಿರುವುಗಳನ್ನು ಪಡೆದುಕೊಂಡ ಕಾರಣ, ಅಂದಿನ ಸರಕಾರ ತನಿಖೆಯನ್ನು ಸಿಬಿಐಗೆ ವಹಿಸಿತ್ತು. ಕೃತ್ಯ ನಡೆದ ದಿನ ಮನೆಗೆ ಹೊರಗಿನವರು ಯಾರೂ ಪ್ರವೇಶಿಸಿರಲಿಲ್ಲ ಎಂಬುದು ಮೇಲ್ನೋಟಕ್ಕೆ ಕಂಡುಬಂದ ಕಾರಣ, ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಿ, ತಲ್ವಾರ್‌ ದಂಪತಿಯೇ ಮಗಳು ಮತ್ತು ಕೆಲಸದಾಳನ್ನು ಕೊಂದಿದ್ದಾರೆ ಎಂದಿತ್ತು ಸಿಬಿಐ.

ಕೋರ್ಟ್‌ ಹೇಳಿದ್ದೇನು?

ನಿಸ್ಸಂದೇಹವಾಗಿ ತಲ್ವಾರ್‌ ದಂಪತಿಯೇ ಆರುಷಿ ಮತ್ತು ಹೇಮರಾಜ್‌ನನ್ನು ಕೊಂದಿದ್ದಾರೆ ಎನ್ನುವುದನ್ನು ಸಾಬೀತುಪಡಿಸುವಲ್ಲಿ ಸಿಬಿಐ ವಿಫ‌ಲವಾಗಿದೆ
ಕೊಲೆ ನಡೆದ ರಾತ್ರಿ ಅವರ ಮನೆಯೊಳಗೆ ಯಾರೂ ಪ್ರವೇಶಿಸಿಲ್ಲ ಎನ್ನುವುದನ್ನು ಸ್ಪಷ್ಟಪಡಿಸುವಲ್ಲೂ ತನಿಖಾ ಸಂಸ್ಥೆ ಸೋತಿದೆ.

ಸಾಂದರ್ಭಿಕ ಸಾಕ್ಷ್ಯಗಳನ್ನು ಅವಲಂಬಿಸಿದಂಥ ಕೇಸುಗಳಲ್ಲಿ, ಸಹಜವಾಗಿ ಆರೋಪಿಗಳ ಮೇಲೆ ಸಂದೇಹ ಬರುತ್ತದೆ

ಆದರೆ, ತನಿಖಾ ಸಂಸ್ಥೆಗೆ ಸಿಕ್ಕಿರುವ ಸಾಕ್ಷ್ಯಗಳು ಆರೋಪಿಗಳ ಮೇಲಿನ ಆರೋಪಕ್ಕೆ ಸಂಪೂರ್ಣವಾಗಿ ಪೂರಕವಾಗಿರಬೇಕಾಗುತ್ತದೆ

ಇಲ್ಲಿ ಸಿಬಿಐ ಮಾಡಿರುವ ಊಹೆಯು ನಿರ್ಣಾಯಕವಾಗಿಲ್ಲ. ಅಂದು ಮನೆಗೆ ಯಾರೂ ಬಂದಿಲ್ಲ ಎನ್ನುವುದನ್ನು ಸಾಬೀತುಪಡಿಸುವಲ್ಲಿ ಸಿಬಿಐ ವಿಫ‌ಲವಾಗಿರುವ ಕಾರಣ, ತನಿಖಾ ಸಂಸ್ಥೆ ಊಹಿಸಿರುವ ಘಟನೆಯ ಸರಣಿಯನ್ನು ಸತ್ಯ ಎಂದು ಒಪ್ಪಿಕೊಳ್ಳಲಾಗದು.

ಟಾಪ್ ನ್ಯೂಸ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.