ಕಾಂಗ್ರೆಸ್ ನಿಂದ ಶಾಸಕ ಎಎಸ್ ಪಾಟೀಲ್ ನಡಹಳ್ಳಿ ಉಚ್ಚಾಟನೆ
Team Udayavani, Oct 13, 2017, 6:19 PM IST
ಬೆಂಗಳೂರು: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ದೇವರಹಿಪ್ಪರಗಿ ಕ್ಷೇತ್ರದ ಕಾಂಗ್ರೆಸ್ ಪಕ್ಷದಿಂದ ಶಾಸಕ ಎಎಸ್ ಪಾಟೀಲ್ ನಡಹಳ್ಳಿಯನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆಗೊಳಿಸಿರುವುದಾಗಿ ಕೆಪಿಸಿಸಿ ತಿಳಿಸಿದೆ.
ಉತ್ತರ ಕರ್ನಾಟಕ ಪತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಧ್ವನಿ ಎತ್ತಿದ್ದರು. ಇದೀಗ ನಿರೀಕ್ಷೆಯಂತೆ ಎಎಸ್ ಪಾಟೀಲ್ ನಡಹಳ್ಳಿ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಆದೇಶ ಹೊರಡಿಸಿದ್ದಾರೆ ಎಂದು ವರದಿ ಹೇಳಿದೆ.