‘ಶಿವಣ್ಣ ಯಾವಾಗ ಬರ್ತಾರೆ, ಯಾವಾಗ ಹೋಗ್ತಾರೆ ಅಂತ ಗೊತ್ತಾಗಲ್ಲ’


Team Udayavani, Oct 13, 2017, 9:04 PM IST

Villain-13-10.jpg

ಸುದೀಪ್‌ ಇತ್ತೀಚೆಗೆ ಬ್ಯಾಂಕಾಕ್‌ನಲ್ಲಿ ‘ದಿ ವಿಲನ್‌’ ಚಿತ್ರದ ಇನ್ನೊಂದು ಹಂತದ ಚಿತ್ರೀಕರಣ ಮುಗಿಸಿಕೊಂಡು ಬಂದಿದ್ದಾರೆ. ಈಗಾಗಲೇ ಅವರು ‘ದಿ ವಿಲನ್‌’ ಚಿತ್ರಕ್ಕಾಗಿ ಪ್ರೇಮ್‌ ಜೊತೆಗೆ ಸಾಕಷ್ಟು ಸುತ್ತಾಡಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು, ಲಂಡನ್‌, ಬ್ಯಾಂಕಾಕ್‌, ಶಿವಮೊಗ್ಗ, ಬೆಳಗಾವಿ ಅಂತ ಸಾಕಷ್ಟು ಸಮಯ ಕಳೆದಿದ್ದಾರೆ. ಇಷ್ಟು ದಿನಗಳಲ್ಲಿ ಪ್ರೇಮ್‌ ಒಬ್ಬ ಪ್ಯಾಶನೇಟ್‌ ನಿರ್ದೇಶಕ ಎಂದು ಅರ್ಥ ಮಾಡಿಕೊಂಡಿದ್ದಾರೆ. 


‘ಪ್ರೇಮ್‌ ತುಂಬಾ ಬಿಲ್ಡಪ್‌ ಕೊಡುತ್ತಾರೆ, ಶೋ ಆಫ್ ಮಾಡುತ್ತಾರೆ ಅಂತ ಕೇಳಿದ್ದೆ. ಆದರೆ, ಅವರ ಜೊತೆಗೆ ಕೆಲಸ ಮಾಡಿದ ಮೇಲೆ ಆತ ಎಷ್ಟು ಪ್ಯಾಶನೇಟ್‌ ಅಂತ ಅರ್ಥವಾಯಿತು. ಅವರ ಪ್ಯಾಶನ್‌ಗೆ ತಲೆ ಬಾಗಲೇಬೇಕು. ಸದಾ ಸಿನಿಮಾ ಬಗ್ಗೆಯೇ ಯೋಚನೆ ಮಾಡುತ್ತಿರುತ್ತಾರೆ. ಆ ಮನುಷ್ಯ ಒಂದು ಕಡೆ ಕೂರಲ್ಲ. ಸರಿಯಾಗಿ ಊಟ ಮಾಡಲ್ಲ. ನಾನು ಬೈದು ಊಟ ಮಾಡಿಸ್ತೀನಿ. ಇನ್ನೂ ಒಂದು ವಿಶೇಷ ಅಂದರೆ, ಆತ ಯಾರಿಗೂ ಬೈಯಲ್ಲ. ಎಲ್ಲರಿಂದಲೂ ಪ್ರೀತಿ ಇಂದ ಕೆಲಸ ತೆಗೆಯುತ್ತಾರೆ. ಅಂತಹ ನಿರ್ದೇಶಕರ ಜೊತೆಗೆ ಕೆಲಸ ಮಾಡುವುದಕ್ಕೆ ನಿಜಕ್ಕೂ ಖುಷಿ. ಇನ್ನು ಶಿವರಾಜಕುಮಾರ್‌ ಜೊತೆಗೆ ಕೆಲಸ ಮಾಡೋದು ನಿಜಕ್ಕೂ ಸಂತೋಷ. ಅವರು ಯಾವಾಗ ಬರ್ತಾರೆ, ಯಾವಾಗ ಹೋಗುತ್ತಾರೆ ಅನ್ನೋದೇ ಗೊತ್ತಾಗಲ್ಲ. ಅವರು ಯಾವತ್ತೂ ಬರುವಾಗ ಅಹಂ ತರುವುದಿಲ್ಲ. ಹಾಗಾಗಿ ಬಹಳ ಖುಷಿಯಾಗತ್ತೆ ಅವರ ಜೊತೆಗೆ ಕೆಲಸ ಮಾಡೋಕೆ. ಇನ್ನು ಪ್ರೇಮ್‌, ನಮ್ಮಿಬ್ಬರ ಪಾತ್ರವನ್ನ ಬಹಳ ಚೆನ್ನಾಗಿ ಬ್ಯಾಲೆನ್ಸ್‌ ಮಾಡಿದ್ದಾರೆ’ ಎಂದು ಖುಷಿಯಾಗುತ್ತಾರೆ ಸುದೀಪ್‌.


ಇನ್ನು ಇತ್ತೀಚೆಗೆ ಬ್ಯಾಂಕಾಕ್‌ನಲ್ಲಿ ನಡೆದ ಚೇಸ್‌ ಸನ್ನಿವೇಶಗಳ ಬಗ್ಗೆ ಅವರಿಗೆ ಬಹಳ ಸಂತೋಷವಿದೆ. ‘ಬ್ಯಾಂಕಾಕ್‌ನಲ್ಲಿ ಬಹಳ ವ್ಯವಸ್ಥಿತವಾಗಿ ಚಿತ್ರೀಕರಣ ಮಾಡಿದ್ದಾರೆ. ಬರೀ ಪ್ರೇಮ್‌ ಒಬ್ಬರೇ ಅಲ್ಲ, ಇಡೀ ತಂಡ ಅದರಲ್ಲಿ ತೊಡಗಿಸಿಕೊಂಡಿದ್ದು ನೋಡಿ ಖುಷಿಯಾಯ್ತು. ಆ ಚಿತ್ರ ಹೇಗೆ ಬರುತ್ತದೆ ಎಂಬ ಕುತೂಹಲ ಇದೆ. ಚಿತ್ರ ಏನೇ ಆಗಲೀ, ತುಂಬಾ ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ’ ಎನ್ನುತ್ತಾರೆ ಸುದೀಪ್‌.

ಟಾಪ್ ನ್ಯೂಸ್

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.