ಸಂಗೀತಗಾರ ಟಿಎಂ ಕೃಷ್ಣಗೆ ಇಂದಿರಾ ಗಾಂಧಿ ಪ್ರಶಸ್ತಿ
Team Udayavani, Oct 15, 2017, 11:25 AM IST
ಹೊಸದಿಲ್ಲಿ: ಕಾಂಗ್ರೆಸ್ ಪಕ್ಷದಿಂದ ಪುರಸ್ಕರಿಸಲಾಗುವ ಇಂದಿರಾ ಗಾಂಧಿ ರಾಷ್ಟ್ರೀಯ ಸಮನ್ವಯ ಪ್ರಶಸ್ತಿಗೆ ಈ ಬಾರಿ ಸಂಗೀತಗಾರ ಟಿ ಎಂ ಕೃಷ್ಣ ಆಯ್ಕೆಯಾಗಿದ್ದಾರೆ. ಅ.31ರಂದು ಈ ಪುರಸ್ಕಾರ ಪ್ರದಾನ ಮಾಡಲಾಗುತ್ತದೆ. 1985ರಲ್ಲಿ ಕಾಂಗ್ರೆಸ್ ಶತಮಾನೋತ್ಸವದ ಹಿನ್ನೆಲೆಯಲ್ಲಿ ಈ ಪ್ರಶಸ್ತಿ ಘೋಷಿಸಲಾಗಿತ್ತು. ಇದು 10 ಲಕ್ಷ ರೂ. ನಗದು ಹಾಗೂ ಪ್ರಶಸ್ತಿಪತ್ರವನ್ನು ಒಳಗೊಂಡಿರಲಿದೆ.
ಸಂವೇದನಾಶೀಲ ಕರ್ನಾಟಕ ಶಾಸ್ತ್ರೀಯ ಸಂಗೀತಗಾರ ಟಿ ಎಂ ಕೃಷ್ಣ ಸಾಮಾಜಿಕ ಸಮಸ್ಯೆಗಳಿಗೂ ಸ್ಪಂದಿಸುತ್ತಾರೆ. ಅವರು ಆಂಗ್ಲ ದೈನಿಕದ ಅಂಕಣದಲ್ಲಿ ಸಾಮಾಜಿಕ ಸಮಾನತೆ, ಜಾತಿ ವ್ಯವಸ್ಥೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಬೆಳಕು ಚೆಲ್ಲುತ್ತಿದ್ದಾರೆ. ಯುದ್ಧಪೀಡಿತ ಉತ್ತರ ಶ್ರೀಲಂಕಾ ಭಾಗದಲ್ಲಿ ತಮಿಳು ಸಂಗೀತ ಸಂಸ್ಕೃತಿಗೆ ಮರುಜೀವ ನೀಡುವ ಚಳವಳಿಯಲ್ಲಿ ಇವರು ಭಾಗವಹಿಸಿದ್ದರು. 2015- 2016ರ ಪ್ರಶಸ್ತಿಗೆ ಇವರನ್ನು ಆಯ್ಕೆ ಮಾಡಲಾಗಿದ್ದು, ಈ ಹಿಂದೆ ಧಾರ್ಮಿಕ ಮುಖಂಡ ಸ್ವಾಮಿ ರಂಗನಾಥಾನಂದ, ಸ್ವಾತಂತ್ರ್ಯ ಹೋರಾಟಗಾರ ಅರುಣಾ ಅಸಫ್ ಅಲಿ, ಗಾಯಕಿ ಎಂ. ಎಸ್. ಸುಬ್ಬುಲಕ್ಷ್ಮಿ ಸೇರಿ ಹಲವರಿಗೆ ಈ ಪ್ರಶಸ್ತಿ ಸಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
Mumbai Hoarding Collapse; ರಾಜಸ್ಥಾನದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಪ್ರಮುಖ ಆರೋಪಿ
Covishield ಲಸಿಕೆಯಿಂದ ಮತ್ತೊಂದು ಸೈಡ್ಎಫೆಕ್ಟ್!