ಹೆಣ್ಣು ಪಿಶಾಚಿಗೆ ಹೆದರಿ ಹಳ್ಳಿ ತೊರೆದ ಗಂಡಸರು!
Team Udayavani, Oct 17, 2017, 7:05 AM IST
ಹೈದರಾಬಾದ್: ದೆವ್ವ, ಭೂತಗಳಿಗೆ ಹೆದರಿ ದೇವರು, ಮಾಟ, ಮಂತ್ರಗಳ ಮೊರೆ ಹೋಗುವುದನ್ನು ನಾವು ಕೇಳಿದ್ದೇವೆ, ನೋಡಿದ್ದೇವೆ. ಆದರೆ, ಇಲ್ಲೊಂದು ಹಳ್ಳಿಯಲ್ಲಿ ದೆವ್ವವಿದೆ ಎಂಬುದನ್ನು ನಂಬಿರುವ ಅಲ್ಲಿನ ಗಂಡಸರೆಲ್ಲಾ ಹಳ್ಳಿಬಿಟ್ಟು ಪರಾರಿಯಾಗಿದ್ದಾರೆ!
ಅಚ್ಚರಿಯಾದರೂ ಇದು ಸತ್ಯ. ಹೀಗಾಗಿರುವುದು ತೆಲಂಗಾಣದ ನಿರ್ಮಲ ಜಿಲ್ಲೆಯ ಕಾಸಿಗುಡದಲ್ಲಿ. ಈ ಹಳ್ಳಿಯಲ್ಲಿ ಹೆಣ್ಣು ಪಿಶಾಚಿಯೊಂದು ನೆಲೆಯೂರಿದೆ ಎಂಬ ವದಂತಿ ಹರಡಿದ್ದು, ಈ ಪಿಶಾಚಿಯು ಪುರುಷ ದ್ವೇಷಿಯಾಗಿದ್ದು ಪುರುಷರನ್ನು ಒಬ್ಬೊಬ್ಬರಾಗಿ ಕೊಲ್ಲುತ್ತಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಪೂರಕವಾಗಿ, ಇತ್ತೀಚೆಗೆ, ಆ ಹಳ್ಳಿಯ ಇಬ್ಬರು ಸಹೋದರರು ಹಾಗೂ ಮತ್ತೂಬ್ಬ ವ್ಯಕ್ತಿ ಪ್ರತ್ಯೇಕ ಘಟನೆಗಳಲ್ಲಿ ನಿಗೂಢವಾಗಿ ಹತರಾಗಿರುವುದು ಈ ಪಿಶಾಚಿ ವದಂತಿಗಳಿಗೆ ಜೀವ ತುಂಬಿದೆ.
ಇದರಿಂದ ಭೀತಿಗೊಂಡು ದಿಕ್ಕೆಟ್ಟಿರುವ ಆ ಹಳ್ಳಿಯ ಗಂಡಸರು ದಿಕ್ಕಾಪಾಲಾಗಿ ಆ ಹಳ್ಳಿಯಿಂದ ಕಾಲ್ಕಿತ್ತಿದ್ದಾರೆ. ಆ ಪಿಶಾಚಿಯ ನಿರ್ಮೂಲನೆಯಾಗುವವರೆಗೂ ಹಳ್ಳಿಗೆ ಬರದಿರಲು ನಿರ್ಧರಿಸಿದ್ದಾರಂತೆ. ಒಟ್ಟಿನಲ್ಲಿ, ಈಗ ಆ ಹಳ್ಳಿಯಲ್ಲಿ ಹೆಂಗಸರೇ ಜೀವಿಸುತ್ತಿದ್ದಾರೆಂದು ಹೇಳಲಾಗಿದೆ. ಪಿಶಾಚಿಗಳು ಹೆಂಗಸರಿಗೆ ಏನೂ ಮಾಡುತ್ತಿಲ್ಲ ಎನ್ನುತ್ತಾರೆ ಅಲ್ಲಿನ ಮಹಿಳೆಯರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
MUST WATCH
ಹೊಸ ಸೇರ್ಪಡೆ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ