ಮಂಗಳೂರಿಗೆ ಪ್ಲಾಸ್ಟಿಕ್‌ ಪಾರ್ಕ್‌ ಮಂಜೂರು: ಅನಂತಕುಮಾರ್‌


Team Udayavani, Oct 17, 2017, 11:09 AM IST

17-STATE-20.jpg

ಮಂಗಳೂರು: ಮಂಗಳೂರು ಸಮೀಪದ ಗಂಜಿಮಠದಲ್ಲಿ 190 ಎಕರೆ ಜಮೀನಿ ನಲ್ಲಿ 1,000 ಕೋಟಿ ರೂ. ವೆಚ್ಚದಲ್ಲಿ ಪ್ಲಾಸ್ಟಿಕ್‌ ಪಾರ್ಕ್‌ ಶೀಘ್ರ ಕಾರ್ಯಾ ರಂಭಿಸಲಿದೆ ಎಂದು ಭಾರತ ಸರಕಾರದ ರಸಗೊಬ್ಬರ, ರಾಸಾಯನಿಕ, ಸಂಸದೀಯ ವ್ಯವಹಾರ ಇಲಾಖೆಗಳ ಸಚಿವ ಅನಂತ ಕುಮಾರ್‌ ಘೋಷಿಸಿದರು.

ಕೇಂದ್ರ ಇಲೆಕ್ಟ್ರಾನಿಕ್ಸ್‌ ಮತ್ತು ತಂತ್ರಜ್ಞಾನ ಸಚಿವಾಲಯ, ನೀತಿ ಆಯೋಗ ವತಿಯಿಂದ ಕರ್ನಾಟಕ ರಾಜ್ಯ ಮಟ್ಟದ ಬ್ಯಾಂಕರ್ ಸಮಿತಿ, ಲೀಡ್‌ ಬ್ಯಾಂಕ್‌ ಸಿಂಡಿಕೇಟ್‌ ಬ್ಯಾಂಕ್‌, ಕಾರ್ಪೊ ರೇಶನ್‌ ಬ್ಯಾಂಕ್‌ ಸಹಿತ ಬ್ಯಾಂಕ್‌ಗಳು ದ.ಕ. ಜಿಲ್ಲಾಡ ಳಿತ ವತಿಯಿಂದ ಪುರಭವನದಲ್ಲಿ “ಮುದ್ರಾ ಪ್ರೋತ್ಸಾಹಕ ಅಭಿ ಯಾನ’ ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ಲಾಸ್ಟಿಕ್‌ ಪಾರ್ಕ್‌ ಬಗ್ಗೆ ಈಗಾಗಲೇ ಘೋಷಣೆ ಯಾಗಿದೆ. ದ.ಕ. ಸಂಸದ ನಳಿನ್‌ ಈ ಬಗ್ಗೆ ಸತತ ಒತ್ತಡ ತಂದಿದ್ದಾರೆ. 30,000 ಮಂದಿಗೆ ಉದ್ಯೋಗ ನೀಡಬಹುದಾದ ಈ ಯೋಜನೆಯ ಅನುಷ್ಠಾನ ಪತ್ರವನ್ನು ನಳಿನ್‌ ಅವರಿಗೆ ಒಂದು ವಾರದೊಳಗೆ ಹಸ್ತಾಂತರಿಸಲಾಗುವುದು ಎಂದು ಅನಂತಕುಮಾರ್‌ ತಿಳಿಸಿದರು.

ಈ ಪಾರ್ಕಿನಲ್ಲಿ ಪ್ಲಾಸ್ಟಿಕ್‌ ನಿರ್ವಹಣೆ ಸಹಿತ ವಿವಿಧ ಪೂರಕ ಉದ್ಯಮ ಸಂಸ್ಥೆಗಳು ಸ್ಥಾಪನೆಯಾಗಲಿವೆ. 36 ಸಂಸ್ಥೆಗಳ ಈಗಾಗಲೇ ಮುಂದೆ ಬಂದಿವೆ ಎಂದರು. ಕರ್ನಾಟಕ ನಂ. 1 ಪ್ರಧಾನಿ ನರೇಂದ್ರ ಮೋದಿ ಅವರು 2015 ರಲ್ಲಿ ಮುದ್ರಾ (ಸಣ್ಣ ಉದ್ಯಮ ಘಟಕಗಳ ಅಭಿವೃದ್ಧಿ ಮತ್ತು ಮರು ಹಣ ಪೂರಣ ಏಜೆನ್ಸಿ) ಯೋಜನೆಯನ್ನು ಅನುಷ್ಠಾನಗೊಳಿಸಿದರು. ಈ ಯೋಜನೆಯ ಮೂಲಕ ಸಣ್ಣ ಉದ್ದಿಮೆಗಳಿಗೆ ನೇರವಾಗಿ ಆರ್ಥಿಕ ನೆರವು ನೀಡಲಾಗುತ್ತದೆ.

ಈ ಯೋಜನೆಯಲ್ಲಿ ಕರ್ನಾಟಕದ 27,29,612 ಮಂದಿ 24.8 ಕೋಟಿ ರೂ. ಮುಂಗಡ ಪಡೆದಿ ದ್ದಾರೆ. ಇದು ದೇಶದಲ್ಲೇ ಗರಿಷ್ಠ ಅಭಿವೃದ್ಧಿ ಕಾರ್ಯವಾಗಿದೆ. ಅಭಿವೃದ್ಧಿ ಯಲ್ಲಿ ಯಾವುದೇ ರಾಜಕೀಯವಿಲ್ಲ ಎಂಬ ಪ್ರಧಾನಿ ಮೋದಿಯವರ ಸಿದ್ಧಾಂತಕ್ಕಿದು ದೃಷ್ಟಾಂತ ಎಂದರು. ದೇಶಾದ್ಯಂತ ಮುದ್ರಾ ಸಂಚಲನ ಸೃಷ್ಟಿಸಿದೆ. ಬ್ಯಾಂಕಿಂಗ್‌ ತವರೂರು ಅವಿಭಜಿತ ದ.ಕ. ಜಿಲ್ಲೆಯ ಜನತೆ ಸದಾ ಉದ್ಯಮಶೀಲರು. ಅವರು ಈ ಯೋಜನೆಯ ಗರಿಷ್ಠ ಲಾಭ ಪಡೆಯುವಂತಾಗಲೆಂದು ಹಾರೈಸಿ ದರು. ಸಂಸದ ನಳಿನ್‌ ಕುಮಾರ್‌ ಕಟೀಲು ಅವರ ಸ್ಪಂದನೆ ಶ್ಲಾಘನೀಯ ಎಂದರು.

ಪ್ಲಾಸ್ಟಿಕ್‌ ತಾಂತ್ರಿಕ ಸಂಸ್ಥೆ : ಅನಂತ ಕುಮಾರ್‌ ಹೆಗಡೆ 
ಮುದ್ರಾ ಪೂರಕ ಮಳಿಗೆಗಳನ್ನು ಉದ್ಘಾಟಿಸಿ, ಫಲಾನುಭವಿಗಳಿಗೆ ಚೆಕ್‌ ನೀಡಿದ ಕೇಂದ್ರ ಸರಕಾರದ ಕೌಶಲಾಭಿವೃದ್ಧಿ ಸಚಿವ ಅನಂತ ಕುಮಾರ್‌ ಹೆಗಡೆ ಅವರು, ಪ್ಲಾಸ್ಟಿಕ್‌ ಪಾರ್ಕ್‌ ಯೋಜನೆ ಯಶಸ್ವಿಯಾಗಲು ಮಂಗಳೂರಿ ನಲ್ಲಿ ಸಿಐಒಪಿಇಟಿ (ಕೇಂದ್ರ ಪ್ಲಾಸ್ಟಿಕ್‌ ಎಂಜಿ ನಿಯ ರಿಂಗ್‌ ತಂತ್ರಜ್ಞಾನ ಸಂಸ್ಥೆ) ಸ್ಥಾಪನೆಯ ಅಗತ್ಯ ವಿದೆ. ಈ ತಂತ್ರಜ್ಞಾನವನ್ನು ಸ್ಥಳೀಯರು ಅರಿಯ ದಿದ್ದರೆ, ಹೊರ ರಾಜ್ಯದವರು ಬಳಸುವ ಸಾಧ್ಯತೆ ಗಳಿವೆ. ಈ ಸಂಸ್ಥೆಯ ಸ್ಥಾಪನೆಗೆ ಚಿಂತನೆ ನಡೆದಿದೆ ಎಂದರು. ಸಂಸದ ನಳಿನ್‌ ಕುಮಾರ್‌ ಅವರು ದ.ಕ. ಕ್ಷೇತ್ರವನ್ನು ಮಾದರಿಯ ಕ್ಷೇತ್ರವನ್ನಾಗಿ ರೂಪಿಸಿದ್ದಾರೆಂದು ಅಭಿನಂದಿಸಿದರು.

ನೇರ ಮುಂಗಡ ನೀಡಿ: ನಳಿನ್‌
ಮುದ್ರಾ ಯೋಜನೆಯ ಫಲಾನುಭವಿಗಳು ಅರ್ಜಿ ಸಲ್ಲಿಸಿದ ಕೂಡಲೇ ಬ್ಯಾಂಕ್‌ಗಳು ನೇರ ವಾಗಿ ಮುಂಗಡ ನೀಡಬೇಕೆಂದು ಅಧ್ಯಕ್ಷತೆ ವಹಿಸಿದ್ದ ದ.ಕ. ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು. ಬ್ಯಾಂಕ್‌ ಅಧಿಕಾರಿಗಳು ಯಾವುದೇ ಸಬೂಬು ನೀಡಬೇಡಿ. ಅರ್ಜಿ ದಾರ ರಿಗೆ ಮಾರ್ಗದರ್ಶನ ನೀಡಿ. ಅವರು ಯಶಸ್ಸು ಪಡೆಯುವಂತೆ ನೋಡಿಕೊಳ್ಳಿ ಎಂದರು.

ಯುಪಿಎ ಸರಕಾರದ ಅವಧಿಯಲ್ಲಿ ದ.ಕ.ಕ್ಕೆ 
ಕೇವಲ 4,000 ಕೋಟಿ ರೂ. ಅನುದಾನ ನೀಡಿತ್ತು. ಆದರೆ ಪ್ರಧಾನಿ ಮೋದಿ ಅವರು ಎರಡೂವರೆ ವರ್ಷಗಳಲ್ಲಿ ಜಿಲ್ಲೆಗೆ 16,000 ಕೋಟಿ ರೂ. ಅಭಿವೃದ್ಧಿ ಅನುದಾನ ನೀಡಿದ್ದಾರೆ. ಅದಕ್ಕಾಗಿ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದರು.

ಸಿಂಡಿಕೇಟ್‌ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಮಲ್ಲಿಕಾರ್ಜುನ ರಾವ್‌, ಕಾರ್ಪೊರೇಶನ್‌ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ್‌ ಭಗತ್‌, ಕೇಂದ್ರ ವಿತ್ತ ಇಲಾಖೆಯ ನಿರ್ದೇಶಕ ಅಶೋಕ್‌ ಕುಮಾರ್‌ ಜೈನ್‌, ಪ್ರಭಾರ ಜಿಲ್ಲಾಧಿಕಾರಿ ಕುಮಾರ್‌, ಜಿಪಂ ಸಿಇಒ ಡಾ| ಎಂ. ಆರ್‌. ರವಿ ಉಪಸ್ಥಿತರಿದ್ದರು. ಸಿಂಡಿಕೇಟ್‌ ಬ್ಯಾಂಕಿನ ಮಹಾಪ್ರಬಂಧಕ ಸತೀಶ್‌ ಕಾಮತ್‌ ಸ್ವಾಗತಿಸಿದರು. ಉಪ ಮಹಾ ಪ್ರಬಂಧಕ ಡಿ.ಎಸ್‌. ಹಿರೇಮs… ಅವರು ಫಲಾನುಭವಿಗಳ ವಿವರ ನೀಡಿದರು. ಕಾರ್ಪ್‌ ಬ್ಯಾಂಕಿನ ಮಹಾಪ್ರಬಂಧಕ ಸಿ.ಕೆ. ಗೋಪಾಲ್‌ ಅವರು ವಂದಿಸಿದರು.

ಸಾಲಮೇಳದ ವ್ಯಾಖ್ಯಾನ!
ದ.ಕ. ಜಿಲ್ಲೆಯಲ್ಲಿ ಮುದ್ರಾ ಕುರಿತ ಪ್ರೋತ್ಸಾಹಕ ಅಭಿಯಾನ ಔಚಿತ್ಯಪೂರ್ಣ ಎಂದು ಸಚಿವ ಅನಂತಕುಮಾರ್‌ ಹೇಳಿದರು. ಇಲ್ಲಿಯ ಜನತೆಗೆ “ಲೋನ್‌ ಮೇಳ’ದ ಬಗ್ಗೆ ತಿಳಿವಳಿಕೆ ಇದೆ. ಆದರೆ ಮುದ್ರಾ ಅಭಿಯಾನ ಈ ಲೋನ್‌ಮೇಳಕ್ಕಿಂತ ವಿಭಿನ್ನ ಎಂದರು. ಸಚಿವ ಅನಂತಕುಮಾರ್‌ ಹೆಗಡೆ ಕೂಡ ಲೋನ್‌ಮೇಳ ಬಗ್ಗೆ ಉಲ್ಲೇಖೀಸಿದರು. 

ಅವಿಶ್ರಾಂತ ಚೇತನ
ನಳಿನ್‌ ಕುಮಾರ್‌ ಕಟೀಲು ಅವರಿಗೆ ಸಮಸ್ತ ಜನತೆಯ ಪರವಾಗಿ ತಾನು “ಅವಿಶ್ರಾಂತ ಚೇತನ’ ಎಂಬ ಬಿರುದು ನೀಡುವುದಾಗಿ ಸಚಿವ ಅನಂತಕುಮಾರ್‌ ಹೇಳಿದರು. ಕ್ಷೇತ್ರದ ಅಭಿವೃದ್ಧಿ, ರಾಷ್ಟ್ರಪ್ರೇಮ, ಸಾಮಾಜಿಕ ಕಳಕಳಿಯ ನಳಿನ್‌ ಅವರ ಬದ್ಧತೆ ಶ್ಲಾಘನೀಯವೆಂದರು.

ಟಾಪ್ ನ್ಯೂಸ್

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್‌

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್‌ ಪಡೀಲ್‌ ಆಯ್ಕೆ

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

rahul gandhi (2)

ನಾನು ರಾಹುಲ್‌ ಫಿಟ್ನೆಸ್‌ ಅಭಿಮಾನಿ: ಶಿವರಾಜ್‌ಕುಮಾರ್‌

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ

Exam 2

ಕೆಸೆಟ್‌: ತಾತ್ಕಾಲಿಕ ಅಂಕ ಪ್ರಕಟ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.