ಆಲಮಟ್ಟಿ: 90 ಸಾವಿರಕ್ಯೂಸೆಕ್ ನೀರು ಹೊರಕ್ಕೆ
Team Udayavani, Oct 17, 2017, 12:13 PM IST
ಆಲಮಟ್ಟಿ: ಕಳೆದ ಕೆಲದಿನಗಳಿಂದ ಮಹಾರಾಷ್ಟ್ರದಲ್ಲಿ ಹಾಗೂ ರಾಜ್ಯದ ಕೃಷ್ಣಾ ಜಲಾನಯ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವುದರಿಂದ ಆಲಮಟ್ಟಿ ಜಲಾಶಯಕ್ಕೆ ಒಳಬರುವ ನೀರಿನಲ್ಲಿ ವ್ಯಾಪಕ ಏರಿಕೆಯಾಗಿದೆ. ಆಲಮಟ್ಟಿ ಲಾಲ್ ಬಹಾದ್ದೂರ್ ಶಾಸ್ತ್ರೀ ಜಲಾಶಯಕ್ಕೆ ಕಳೆದ ಕೆಲ ದಿನಗಳಿಂದ ಒಳ ಹರಿವಿತ್ತಾದರೂ ರವಿವಾರ ಸಂಜೆ ದಿಢೀರನೇ ಏರಿಕೆಯಾಗಿದ್ದರಿಂದ ಮುಂಜಾಗೃತಾ ಕ್ರಮವಾಗಿ ಜಲಾಶಯದ ಬಲ ಭಾಗದಲ್ಲಿರುವ ಜಲ ವಿದ್ಯುದಾಗಾರ ಹಾಗೂ 10 ಗೇಟುಗಳ ಮೂಲಕ ನೀರು ಬಿಡಲು ಆರಂಭಿಸಿ ಸೋಮವಾರ ಬೆಳಗ್ಗೆಯಿಂದ ಜಲಾಶಯಕ್ಕೆ 90 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಒಳ ಹರಿವಿನಲ್ಲಿ ಏರಿಕೆಯಾಗಿದ್ದರಿಂದ 45 ಸಾವಿರ ಕ್ಯೂಸೆಕ್ ನೀರನ್ನು ಶಾಸ್ತ್ರೀ ಜಲಾಶಯದ ಬಲ ಭಾಗದಲ್ಲಿರುವ
ಕರ್ನಾಟಕ ವಿದ್ಯುತ್ ಉತ್ಪಾದನಾ ಘಟಕ 6 ಘಟಕದಿಂದ 290 ಮೆ.ವ್ಯಾ. ವಿದ್ಯುತ್ ಉತ್ಪಾದಿಸಿ ನದಿ ಪಾತ್ರಕ್ಕೆ ಬಿಡಲಾಗುತ್ತಿದೆ.
ಇನ್ನುಳಿದಂತೆ 45 ಸಾವಿರ ಕ್ಯೂಸೆಕ್ ನೀರನ್ನು ಜಲಾಶಯದ ಒಟ್ಟು 26 ಗೇಟುಗಳಲ್ಲಿ ಅ.ಸಂ-4, 8, 9, 10, 12, 13, 14, 15, 16, 17, 18, 19, 20, 21, 22ನೇ ಗೇಟುಗಳನ್ನು 0.6 ಮೀ.ನಷ್ಟು ಮೇಲಕ್ಕೆತ್ತಿ ಒಟ್ಟು 15 ಗೇಟುಗಳಿಂದ 45 ಸಾವಿರ ಕ್ಯೂಸೆಕ್ ನೀರನ್ನು ನದಿ ಪಾತ್ರಕ್ಕೆ ಬಿಡಲಾಗುತ್ತಿದೆ. ಇನ್ನುಳಿದ ಅ.ಸಂ- 1, 2, 3, 5, 6, 7, 11, 23, 24, 25, 26 ಸಂಖ್ಯೆಯ ಗೇಟುಗಳನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಆಲಮಟ್ಟಿ ಜಲಾಶಯದ 15 ಗೇಟುಗಳಿಂದ ನದಿ ಪಾತ್ರಕ್ಕೆ ಬಿಡುತ್ತಿರುವ ನೀರು ಹಾಲಿನ ನೊರೆಯಂತೆ ಕಂಗೊಳಿಸುತ್ತಿದ್ದು ಪ್ರವಾಸಿಗರು ಕಣ್ತುಂಬಿಕೊಂಡು ಸಂತಸ ಪಡುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು