ಮೇಘನಾ ಮದುವೆ ಆಗುತ್ತಿರುವುದಾಗಿ ಚಿರು ಒಪ್ಪಿಗೆ
Team Udayavani, Oct 17, 2017, 2:39 PM IST
ಚಿರಂಜೀವಿ ಸರ್ಜಾ ಹಾಗೂ ಮೇಘನಾ ರಾಜ್ ಪರಸ್ಪರ ಪ್ರೀತಿಸುತ್ತಿದ್ದಾರೆ ಮತ್ತು ಸದ್ಯದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಒಂದೆರೆಡು ವರ್ಷಗಳಿಂದ ಚಾಲ್ತಿಯಲ್ಲಿದೆ. ಕಳೆದ ವಾರವಷ್ಟೇ ಚಿರು ಮತ್ತು ಮೇಘನಾ ಅವರ ನಿಶ್ಚಿತಾರ್ಥ ಅಕ್ಟೋಬರ್ 22ರಂದು ನಡೆಯಲಿದೆ ಎಂಬ ಸುದ್ದಿ ಬಂದಿತ್ತು. ಆದರೆ, ಈ ಕುರಿತು ಇಬ್ಬರೂ ಪ್ರತಿಕ್ರಿಯೆ ನೀಡಿರಲಿಲ್ಲ. ಮದುವೆಯಾಗುವುದಾದರೆ, ಹೇಳಿಯೇ ಮದುವೆಯಾಗುವುದಾಗಿ ಇಬ್ಬರ ಕಡೆಯವರು ಹೇಳಿದ್ದರು.
ಈಗ ಅವರಿಬ್ಬರ ಮದುವೆ ಸುದ್ದಿ ನಿಜವಾಗಿದೆ. ಮೇಘನಾ ಅವರನ್ನು ಮದುವೆಯಾಗುವುದಾಗಿ ಸ್ವತಃ ಚಿರಂಜೀವಿ ಸರ್ಜಾ ಒಪ್ಪಿಕೊಂಡಿದ್ದಾರೆ. ಅ.17 ಮಂಗಳವಾರ ಚಿಂರಜೀವಿ ಸರ್ಜಾ ಅವರ ಹುಟ್ಟುಹಬ್ಬ. ಆ ಹಿನ್ನೆಲೆಯಲ್ಲಿ ಅವರ ಅಭಿನಯದ “ಸಂಹಾರ’ ಚಿತ್ರದ ಟ್ರೇಲರ್ ರಿಲೀಸ್ ಮಾಡಲಾಗಿದೆ. ಅಷ್ಟೇ ಅಲ್ಲ, ಚಿತ್ರತಂಡ ಅವರಿಂದ ಕೇಕ್ ಕತ್ತರಿಸಿ ಸಂಭ್ರಮಿಸಿದೆ. ಈ ವೇಳೆ ಚಿರಂಜೀವಿ ಸರ್ಜಾ ಅವರು, ತಾವು ಮೇಘನಾರಾಜ್ ಅವರನ್ನು ಮದುವೆ ಆಗುತ್ತಿರುವುದಾಗಿ ಹೇಳಿಕೊಂಡರು.
ಈ ಮೂಲಕ ಅವರಿಬ್ಬರ ಮದುವೆಯ ಅಂತೆ-ಕಂತೆಗಳಿಗೆಲ್ಲಾ ಬ್ರೇಕ್ ಹಾಕಿದರು. ಅಂದಹಾಗೆ, ಚಿರು ಹಾಗೂ ಮೇಘನಾ ರಾಜ್ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದಾರೆಂಬ ಸುದ್ದಿ ಚಿತ್ರರಂಗದಲ್ಲಿ ಅನೇಕ ವರ್ಷಗಳಿಂದ ಕೇಳಿಬರುತ್ತಲೇ ಇತ್ತು. ಈ ಬಗ್ಗೆ ಪ್ರಶ್ನೆ ಬಂದಾಗಲೆಲ್ಲಾ ಇಬ್ಬರು ಆ ಪ್ರಶ್ನೆಯಿಂದ ಜಾರಿಕೊಳ್ಳುತ್ತಿದ್ದರು. ಎರಡೂ ಕುಟುಂಬ ಹಾಗೂ ಆಪ್ತ ವರ್ಗದ ಸಮ್ಮುಖದಲ್ಲಿ ಚಿರು ಹಾಗೂ ಮೇಘನಾ ರಾಜ್ ಅವರ ನಿಶ್ಚಿತಾರ್ಥ ಅ.22 ರಂದು ನಡೆಯಲಿದೆ. ವಿವಾಹದ ವಿಷಯವನ್ನು ಮಾತ್ರ ಖಚಿತಪಡಿಸದ ಚಿರಂಜೀವಿ ಸರ್ಜಾ, ಅದು ಪಕ್ಕಾ ಆದ ಬಳಿಕ ಹೇಳುವುದಾಗಿ ಹೇಳಿಕೊಂಡಿದ್ದಾರೆ.
ಕನ್ನಡದ ಚಿತ್ರರಂಗದ ಹಿರಿಯ ಕಲಾವಿದರಾದ ಸುಂದರ್ ರಾಜ್ ಹಾಗೂ ಪ್ರಮೀಳಾ ಜೋಷಾಯ್ ಅವರ ಪುತ್ರಿಯಾಗಿರುವ ಮೇಘನಾ ರಾಜ್, ಕನ್ನಡ, ಮಲಯಾಳಂ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ನಾಯಕಿಯಾಗಿ ನಟಿಸಿದ್ದಾರೆ. ಚಿರಂಜೀವಿ ಕೂಡಾ “ವಾಯುಪುತ್ರ’ ಚಿತ್ರ ಮೂಲಕ ಎಂಟ್ರಿಕೊಟ್ಟು, ಇಲ್ಲಿವರೆಗೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿದ್ದಾರೆ. ಚಿರು ಹಾಗೂ ಮೇಘನಾ “ಆಟಗಾರ’ ಎಂಬ ಸಿನಿಮಾದಲ್ಲಿ ಜೊತೆಯಾಗಿ ನಟಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ