ನಿಷೇಧದ ಹೊರತಾಗಿಯೂ ಪಟಾಕಿ ಹಂಚಿದ ಬಿಜೆಪಿ ವಕ್ತಾರ
Team Udayavani, Oct 18, 2017, 4:00 PM IST
ನವದೆಹಲಿ: ಸುಪ್ರೀಂಕೋರ್ಟ್ ಪಟಾಕಿ ಮಾರಾಟಕ್ಕೆ ನಿಷೇಧ ಹೇರಿರುವ ಹೊರತಾಗಿಯೂ ಬಿಜೆಪಿಯ ದೆಹಲಿ ವಕ್ತಾರ ತೇಜೀಂದರ್ ಬಗ್ಗಾ ಅವರು ಕೊಳಗೇರಿ ಮಕ್ಕಳಿಗೆ ಪಟಾಕಿ ವಿತರಿಸುವ ಮೂಲಕ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆ. ಅಷ್ಟೇ ಅಲ್ಲ, ಮಕ್ಕಳಿಗೆ ಪಟಾಕಿ ವಿತರಿಸುತ್ತಿರುವ ಫೋಟೋವನ್ನು ಟ್ವಿಟರ್ನಲ್ಲಿ ಅಪ್ ಲೋಡ್ ಮಾಡಿದ್ದಾರೆ.
ನಿಷೇಧ ಆದೇಶ ಬಂದಾಗಲೇ, ತಾವು 50 ಸಾವಿರ ರೂ.ಗಳ ಪಟಾಕಿ ಖರೀದಿಸಿ ಮಕ್ಕಳಿಗೆ ಹಂಚುತ್ತೇನೆ ಎಂದು ಬಗ್ಗಾ ಘೋಷಿಸಿಕೊಂಡಿದ್ದರು. ಇದೀಗ ತಮ್ಮ ಕೃತ್ಯವನ್ನು ಸಮರ್ಥಿಸಿಕೊಂಡಿರುವ ಅವರು, “ಸುಪ್ರೀಂ ಕೋರ್ಟ್ ಪಟಾಕಿ ಮಾರಾಟ ನಿಷೇಧಿಸಿದೆಯೇ ಹೊರತು, ಸಿಡಿಸುವುದನ್ನಲ್ಲ. ನಾನು ಪಟಾಕಿಯನ್ನು ದೆಹಲಿಯ ಹೊರಗಿಂದ ಖರೀದಿಸಿ ಹಂಚಿದ್ದೇನೆ’ ಎಂದಿದ್ದಾರೆ. ಇನ್ನೊಂದೆಡೆ, ಪಟಾಕಿ ನಿಷೇಧಕ್ಕೆ ಪ್ರತಿಭಟನಾರ್ಥವಾಗಿ ಸುಪ್ರೀಂಕೋರ್ಟ್ ಮುಂದೆಯೇ ಕಿಡಿಗೇಡಿಗಳು ಪಟಾಕಿ ಸಿಡಿಸಿದ್ದು, 14 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಡೀಸೆಲ್ ಜನರೇಟರ್ ನಿಷೇಧ: ಇದೇ ವೇಳೆ, ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗಿರುವ ಕಾರಣ ಡೀಸೆಲ್ ಜನರೇಟರ್ ಬಳಕೆ ಮೇಲೂ ನಿಷೇಧ ಹೇರಲಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಈ ಆದೇಶ ಹೊರಡಿಸಿದ್ದು, ಬದಾ ರ್ಪುರ್ ಉಷ್ಣ ವಿದ್ಯುತ್ ಸ್ಥಾವರ ವನ್ನು ಮುಚ್ಚುವಂತೆಯೂ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ
POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್ ದಾಖಲು
ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ
Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ
MUST WATCH
ಹೊಸ ಸೇರ್ಪಡೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ
Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು
Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ
Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ
Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ