ಯೋಧರಿಗೆ ದೀಪಾವಳಿಯ ಕೊಡುಗೆ


Team Udayavani, Oct 20, 2017, 6:00 AM IST

soldier-Diwali-gift-offer.jpg

ಹೊಸದಿಲ್ಲಿ: ಕುಟುಂಬ, ಬಂಧು, ಬಳಗ, ಆಪ್ತರನ್ನು ಬಿಟ್ಟು ಗಡಿಯಲ್ಲಿ ತಮ್ಮ ಜೀವ ಒತ್ತೆಯಿಟ್ಟು ಸೇವೆ ಸಲ್ಲಿಸುವ ಯೋಧರಿಗೆ ಕೇಂದ್ರ ದೂರಸಂಪರ್ಕ ಇಲಾಖೆ ಈ ಬಾರಿಯ ದೀಪಾವಳಿಗೆ ಎರಡು ಕೊಡುಗೆಗಳನ್ನು ಪ್ರಕಟಿಸಿದೆ.

ಗಡಿಯಲ್ಲಿರುವ ಸಶಸ್ತ್ರ ಪಡೆ ಯೋಧರು ಹಾಗೂ ಅರೆಸೇನಾಪಡೆ ಯೋಧರು, ಸ್ಯಾಟಲೈಟ್‌ ಫೋನ್‌ಗಳ ಮೂಲಕ ತಮ್ಮ ಬಂಧುಗಳೊಂದಿಗೆ ಮಾತನಾಡಲು ವಿಧಿಸಲಾಗುತ್ತಿದ್ದ ಕರೆಯ ದರವನ್ನು 5 ರೂ.ಗಳಿಂದ 1 ರೂ.ಗೆ ಇಳಿಸಲಾಗಿದೆ. ಅಲ್ಲದೆ, ಸ್ಯಾಟಲೈಟ್‌ ಫೋನ್‌ ಬಳಕೆಗೆ ಮಾಸಿಕವಾಗಿ ವಿಧಿಸಲಾಗುತ್ತಿದ್ದ 500 ರೂ. ಶುಲ್ಕವನ್ನೂ ರದ್ದುಗೊಳಿಸಲಾಗಿದೆ. ಬುಧವಾರ ಪತ್ರ ಕರ್ತರ ಜತೆ ಮಾತನಾಡಿದ ದೂರಸಂಪರ್ಕ ಸಚಿವ ಮನೋಜ್‌ ಸಿನ್ಹಾ ಈ ಎರಡು ಕೊಡುಗೆಗಳನ್ನು ಪ್ರಕಟಿಸಿದ್ದಾರೆ. ಈ ಎರಡೂ ಕೊಡುಗೆಗಳು ಗುರುವಾರ (ಅಕ್ಟೋಬರ್‌ 19)ದಿಂದಲೇ ಅನುಷ್ಠಾನಗೊಂಡಿವೆ.

2009-10ರಿಂದ ಗಡಿ ಭಾಗಗಳಲ್ಲಿನ ಸೈನಿಕರಿಗೆ ಸ್ಯಾಟಲೈಟ್‌ ಫೋನ್‌ ಮೂಲಕ ತಮ್ಮ ಬಂಧುಗಳಿಗೆ ಕರೆ ಮಾಡುವ ಸೌಕರ್ಯ ನೀಡಲಾಗಿದೆ. ಆರಂಭದಲ್ಲಿ ಈ ಸೇವೆಯನ್ನು ಟಾಟಾ ಟೆಲಿ ಸಂಸ್ಥೆ ನೀಡು ತ್ತಿತ್ತು. ಈಗ ಸರಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಈ ಸೇವೆ ಒದಗಿಸುತ್ತಿದೆ. ಪ್ರತಿ 5 ವರ್ಷಗಳಿಗೊಮ್ಮೆ ಈ ದರವನ್ನು ಪರಿಷ್ಕರಿಸ ಲಾಗುತ್ತದೆ. ಕರೆ ದರ ಇಳಿಕೆಯಿಂದ ಇಲಾಖೆಗೆ ವಾರ್ಷಿಕವಾಗಿ 3ರಿಂದ 4 ಕೋಟಿ ರೂ. ಹೊರೆ ಬೀಳಲಿದ್ದು, ಇದನ್ನು ಸರಕಾರ ಭರಿಸುತ್ತದೆ ಎಂದು ದೂರಸಂಪರ್ಕ ಇಲಾಖೆಯ ಕಾರ್ಯದರ್ಶಿ ಅರುಣಾ ಸುಂದರರಾಜನ್‌ ತಿಳಿಸಿದ್ದಾರೆ.

ಫೋನ್‌ಗಿಲ್ಲ ಬಾಡಿಗೆ: ಪ್ರತಿ ತಿಂಗಳು ಸ್ಯಾಟಲೈಟ್‌ ಫೋನ್‌ಗೆ ನೀಡಬೇಕಾಗಿದ್ದ 500 ರೂ. ಬಾಡಿಗೆಯಿಂದಲೂ ಯೋಧರಿಗೆ ವಿನಾಯಿತಿ ನೀಡಲಾಗಿದೆ. ಇನ್ನು ಮುಂದೆ ಅವರು ಉಚಿತವಾಗಿ ಫೋನ್‌ ಬಳಸ ಬಹು ದಾಗಿದೆ. ಪ್ರಸ್ತುತದ ದೇಶದಲ್ಲಿ 2,500 ಸ್ಯಾಟಲೈಟ್‌ ಫೋನ್‌ ಸಂಪರ್ಕ ನೀಡಲಾಗಿದೆ. 

ಪಾಕಿಸ್ಥಾನಕ್ಕೆ ಸುಷ್ಮಾ “ವೀಸಾ’ ಗಿಫ್ಟ್
ಹೊಸದಿಲ್ಲಿ:
ಅರ್ಹತೆಯ ಆಧಾರದಲ್ಲಿ ಪಾಕಿಸ್ಥಾನ ಸಹಿತ ವೈದ್ಯಕೀಯ ನೆರವು ಯಾಚಿಸುತ್ತಿರುವವರಿಗೆ ವೀಸಾ ನೀಡಲಾಗುವುದು. ಇದು ದೀಪಾವಳಿಗೆ ನೀಡುತ್ತಿರುವ ಗಿಫ್ಟ್’ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ತಿಳಿಸಿದ್ದಾರೆ. ಪಾಕಿಸ್ಥಾನದ ಮಹಿಳೆ ಅಮ್ನಾ ಶಮೀನ್‌ ಅವರ ಅಪ್ಪ ಈಗಾಗಲೇ ದಿಲ್ಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ನೋಡಲು ತಮಗೆ ವೀಸಾ ಕಲ್ಪಿಸಿ ಎಂದು ಶಮೀನ್‌ ಕೇಳಿಕೊಂಡಿದ್ದರು. ಅದಕ್ಕೆ ಗುರುವಾರ ಪ್ರತಿಕ್ರಿಯಿಸಿರುವ ಸುಷ್ಮಾ, ಪಾಕ್‌ನಲ್ಲಿರುವ ಭಾರತೀಯ ಹೈಕಮಿಷನ್‌ ಭೇಟಿಯಾಗುವಂತೆ ಸೂಚಿಸಿದ್ದು, ವೀಸಾ ಕಲ್ಪಿಸುವ ಭರವಸೆ ನೀಡಿದ್ದಾರೆ. ಬುಧವಾರ ವಷ್ಟೇ ಚಿಕಿತ್ಸೆ ಬಯಸಿದ್ದ ಮಗು ವಿನ ಕುಟುಂಬಕ್ಕೂ ವೀಸಾ ದಯಪಾಲಿಸಿದ್ದರು ಸುಷ್ಮಾ. ಈ ಮೂಲಕ ವೈದ್ಯಕೀಯ ನೆರವು ಬಯಸಿದ ಅನೇಕರ ಬಾಳಲ್ಲಿ ಬೆಳಕು ಮೂಡಿಸುವತ್ತ ಸುಷ್ಮಾ ಹೆಜ್ಜೆಯಿಟ್ಟಿದ್ದಾರೆ.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.