ದಿಲ್ಲಿಯಲ್ಲಿ ಗಂಭೀರ ಮಾಲಿನ್ಯ
Team Udayavani, Oct 21, 2017, 7:30 AM IST
ನವದೆಹಲಿ: ಪಟಾಕಿಗಳ ಮಾರಾಟ ನಿಷೇಧಿಸಿ ಸುಪ್ರೀಂ ಕೋರ್ಟ್ ನೀಡಿದ್ದ ಆದೇಶವನ್ನೇ ಗಾಳಿಗೆ ತೂರಿದ ದೆಹಲಿ ನಾಗರಿಕರು, ದೀಪಾವಳಿಯ ರಾತ್ರಿ ನಡೆಸಿದ ಸುಡುಮದ್ದುಗಳ ಅಬ್ಬರದಿಂದಾಗಿ ರಾಷ್ಟ್ರ ರಾಜಧಾನಿಯ ವಾಯು ಗುಣಮಟ್ಟ ಶುಕ್ರವಾರ “ಗಂಭೀರ’ ಹಾಗೂ ಕಳವಳಕಾರಿ ಸ್ಥಿತಿ ತಲುಪಿತು. ಬೆಳಗ್ಗೆ ಏಳುತ್ತಿದ್ದಂತೆಯೇ ಸುಟ್ಟು ಪಟಾಕಿಯ ದಟ್ಟ ಹೊಗೆಯ ಹೊದಿಕೆಯು ನಗರವನ್ನು ಆವರಿಸಿತ್ತು.
ಮಾಲಿನ್ಯ ಮಟ್ಟವನ್ನು ಸೂಚಿಸುವಂಥ ಸರ್ಕಾರಿ ಸ್ವಾಮ್ಯದ ವಾಯು ಗುಣಮಟ್ಟ ಮುನ್ಸೂಚನೆ ಮತ್ತು ಸಂಶೋಧನಾ ವ್ಯವಸ್ಥೆ(ಸಫರ್)ಯು ಕಡು ಕಂದುಬಣ್ಣಕ್ಕೆ ತಿರುಗುವ ಮೂಲಕ, ದೆಹಲಿಯಲ್ಲಿ ವಾಯು ಮಾಲಿನ್ಯದ ಗಂಭೀರತೆಯನ್ನು ಪರಿಚಯಿ ಸಿತು. ಈ ಪರಿಯ ವಾಯುಮಾಲಿನ್ಯವು ಉಸಿರಾಟದ ಮತ್ತು ಹೃದಯಸಂಬಂಧಿ ಸಮಸ್ಯೆ ಉಳ್ಳವರಿಗೆ ಮಾತ್ರವಲ್ಲ ಆರೋಗ್ಯ ವಂತರ ದೇಹದ ಮೇಲೂ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ. ಆದರೆ, ಸಮಾಧಾನದ ವಿಷಯವೆಂದರೆ, ಸುಪ್ರೀಂ ಕೋರ್ಟ್ನ ಆದೇಶದ ಹಿನ್ನೆಲೆಯಲ್ಲಿ ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಪಟಾಕಿಗಳ ಸದ್ದು, ಮಾಲಿನ್ಯ ಸ್ವಲ್ಪಮಟ್ಟಿಗೆ ಕಡಿಮೆಯೇ ಇತ್ತು. ಕಳೆದ ವರ್ಷ ದಾಖಲಾದ ಮಾಲಿನ್ಯ ಪ್ರಮಾಣವು ಕನಿಷ್ಠ 3 ದಶಕಗಳಲ್ಲೇ ಅತ್ಯಂತ ಹೆಚ್ಚಿನದ್ದಾಗಿತ್ತು.
ಅಗ್ನಿಶಾಮಕ ದಳಕ್ಕೆ 204 ಕರೆ
ದೆಹಲಿಯಲ್ಲಿ ಬುಧವಾರ ರಾತ್ರಿಯಿಂದ ಗುರುವಾರ ರಾತ್ರಿಯ ಅವಧಿಯಲ್ಲಿ ಬೆಂಕಿ ಸಂಬಂಧಿ ಅವಘಡಗಳ ಕುರಿತು ಸುಮಾರು 204 ಕರೆಗಳು ಬಂದಿದ್ದು, ಈ ಪೈಕಿ 51 ಕರೆಗಳು ಪಟಾಕಿ ದುರಂತ ಗಳದ್ದೇ ಆಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ವರ್ಷ ಇದೇ ಅವಧಿಯಲ್ಲಿ 243 ಕರೆಗಳು ಬಂದಿದ್ದವು ಎಂದೂ ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ