ಇಂಡೋ-ರಷ್ಯಾ ಸಮರಾಭ್ಯಾಸ


Team Udayavani, Oct 21, 2017, 6:00 AM IST

Ban21101701Medn.jpg

ನವದೆಹಲಿ: ರಕ್ಷಣಾ ವಲಯದಲ್ಲಿ ಪರಸ್ಪರ ಸಹಕಾರದ ಪ್ರತೀಕವಾಗಿ ಭಾರತ ಹಾಗೂ ರಷ್ಯಾ ದೇಶಗಳು ಇದೇ ಮೊದಲ ಬಾರಿಗೆ 10 ದಿನಗಳ ಜಂಟಿ ಸಮರಾಭ್ಯಾಸವನ್ನು ಶುಕ್ರವಾರದಿಂದ ಆರಂಭಿಸಿವೆ. ರಷ್ಯಾದ ವ್ಲಾದಿವೊಸ್ಟೋಕ್‌ನಲ್ಲಿ ಈ ಸಮರಾಭ್ಯಾಸ ಶುರುವಾಗಿದ್ದು, ಇದರಲ್ಲಿ ಉಭಯ ದೇಶಗಳ ಭೂ ಸೇನೆ, ವಾಯು ಸೇನೆ, ನೌಕಾಪಡೆಯ ಸೈನಿಕರು ಪಾಲ್ಗೊಂಡಿದ್ದಾರೆ.

ಭಾರತೀಯ ಸೇನೆಯಿಂದ 450 ಸಿಬ್ಬಂದಿ ಹಾಗೂ ರಷ್ಯಾದ ಕಡೆಯಿಂದ 1000ಕ್ಕೂ ಹೆಚ್ಚು ಸೇನಾ ತುಕಡಿಗಳು ಪಾಲ್ಗೊಂಡಿವೆ. ಉಭಯ ದೇಶಗಳ ಗಡಿಗಳಲ್ಲಿ ಆಗುತ್ತಿರುವ ಅಕ್ರಮ ಒಳನುಸುಳುವಿಕೆಯಂಥ ಪ್ರಯತ್ನಗಳನ್ನು ನಿಗ್ರಹಿಸುವ ಬಗ್ಗೆ ಈ ಸಮರಾಭ್ಯಾಸದಲ್ಲಿ ಹೆಚ್ಚಿನ ಒತ್ತು ನೀಡಲಾಗುತ್ತಿದೆ.

ಶುಕ್ರವಾರ ಬೆಳಗ್ಗೆ ವ್ಲಾದಿವೊಸ್ಟೋಕ್‌ನಲ್ಲಿ ಸಮರಾಭ್ಯಾಸಕ್ಕೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ, ಎರಡೂ ರಾಷ್ಟ್ರಗಳ ಭೂ ಸೇನೆ, ವಾಯು ಸೇನೆ ಹಾಗೂ ನೌಕಾಪಡೆಗಳ ಸೈನಿಕರು ಅಕ್ಕಪಕ್ಕದ ಗುಂಪುಗಳಾಗಿ ನಿಂತು ಆಕರ್ಷಕ ಪಥಸಂಚಲನ ನಡೆಸಿದರು. ಬಳಿಕ ಭಾರತೀಯ ಯೋಧರಿಂದ ಸಾಂಪ್ರದಾಯಿಕ ಮಾರ್ಷಲ್‌ ಆರ್ಟ್ಸ್ ಪ್ರದರ್ಶನ ನಡೆಯಿತು.

ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ರಕ್ಷಣಾ ಸಚಿವಾಲಯ, “ಭಾರತ ಹಾಗೂ ರಷ್ಯಾಗಳು ತಮ್ಮ ಗಡಿ ಭಾಗಗಳಲ್ಲಿ ಒಂದೇ ತೆರನಾದ ಸಮಸ್ಯೆಗಳನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಈ ಸಮರಾಭ್ಯಾಸ ನಡೆಸಲಾಗುತ್ತಿದೆ. ಇದು ಎರಡೂ ರಾಷ್ಟ್ರಗಳ ಸೈನಿಕರು ಈ ಸಮಸ್ಯೆಗಳನ್ನು ಎದುರಿಸುವಲ್ಲಿ ಪಡೆದಿರುವ ಅನುಭವ, ಜ್ಞಾನವನ್ನು ಹಂಚಿಕೊಳ್ಳಲು ಸಹಾಯ ಮಾಡುತ್ತದೆ. ಇದರಿಂದ ಗಡಿಯಲ್ಲಿನ ಸವಾಲುಗಳನ್ನು ಎದುರಿಸಲು ಎರಡೂ ದೇಶಗಳ ಸೈನಿಕರಿಗೆ ಹೆಚ್ಚಿನ ಆತ್ಮವಿಶ್ವಾಸ ಸಿಗಲಿದೆ’ ಎಂದು ಆಶಿಸಿದೆ.

ಸಮರಾಭ್ಯಾಸದ ಮಹತ್ವ
ಗಡಿ ಪ್ರದೇಶಗಳಲ್ಲಿ ನೆರೆಯ ರಾಷ್ಟ್ರಗಳಾದ ಚೀನಾ ಹಾಗೂ ಪಾಕಿಸ್ತಾನ ರಾಷ್ಟ್ರಗಳು ರಗಳೆ ತಗೆಯುತ್ತಿರುವ ಹಿನ್ನೆಲೆಯಲ್ಲಿ ಭಾರತ, ತನ್ನ ಮಿತ್ರ ರಾಷ್ಟ್ರಗಳೊಂದಿಗೆ ಇಂಥ ಜಂಟಿ ಸಮರಾಭ್ಯಾಸಕ್ಕೆ ಇತ್ತೀಚೆಗೆ ಭಾರಿ ಮಹತ್ವ ನೀಡುತ್ತಿದೆ. ಇದು ತನ್ನ ಸೇನಾ ತಾಕತ್ತು ಹಾಗೂ ಮಿತ್ರ ರಾಷ್ಟ್ರಗಳ ಕಡೆಯಿಂದ ತನಗಿರುವ ಸೇನಾ ಬೆಂಬಲವನ್ನು ವಿಶ್ವ ಸಮುದಾಯಕ್ಕೆ ಮನವರಿಕೆ ಮಾಡಿಕೊಡುವ ಪ್ರಯತ್ನವೂ ಆಗಿದೆ. ಕೆಲವು ತಿಂಗಳು ಹಿಂದೆ, ಡೋಕ್ಲಾಂನಲ್ಲಿ ಚೀನಾದ ಸೈನಿಕರು ಭಾರತಕ್ಕೆ ಸಡ್ಡು ಹೊಡೆದು ನಿಂತಾಗಲೂ ಭಾರತ, ಅಮೆರಿಕದ ಸೈನ್ಯದೊಂದಿಗೆ ಕೇರಳದ ಮಲಬಾರ್‌ನಲ್ಲಿ ಜಂಟಿ ಸಮರಾಭ್ಯಾಸ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಅಂಕಿ-ಅಂಶ:
10 : ಹತ್ತು ದಿನಗಳ ಕಾಲ ನಡೆಯಲಿರುವ ಭಾರತ, ರಷ್ಯಾ ಸಮರಾಭ್ಯಾಸ
450 : ಸಮರಾಭ್ಯಾಸದಲ್ಲಿ ಭಾರತದ ಕಡೆಯಿಂದ ಪಾಲ್ಗೊಳ್ಳುತ್ತಿರುವ ಸೈನಿಕರು
1,000 ಪ್ಲಸ್‌ : ರಷ್ಯಾದಿಂದ ಪಾಲ್ಗೊಳ್ಳುತ್ತಿರುವ ತುಕಡಿಗಳ ಸಂಖ್ಯೆ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.